ನವದೆಹಲಿ: ನಿರ್ದಿಷ್ಟ ದುರ್ಬಲ ಬುಡಕಟ್ಟು ಗುಂಪುಗಳ (ಪಿವಿಟಿಜಿ) ಸಾಮಾಜಿಕ-ಆರ್ಥಿಕ ಪರಿಸ್ಥಿತಿ ಸುಧಾರಣೆಗಾಗಿ ಪ್ರಧಾನ ಮಂತ್ರಿ ಪಿವಿಟಿಜಿ ಅಭಿವೃದ್ಧಿ ಮಿಷನ್ ಪ್ರಾರಂಭಿಸುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಮಂಡಿಸಿರುವ ಕೇಂದ್ರ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಮುಂದಿನ ಮೂರು ವರ್ಷಗಳಲ್ಲಿ ಈ ಯೋಜನೆ ಅನುಷ್ಠಾನಕ್ಕಾಗಿ ಪರಿಶಿಷ್ಟರಿಗಾಗಿ ಅಭಿವೃದ್ಧಿ ಕ್ರಿಯಾ ಯೋಜನೆಯಡಿಯಲ್ಲಿ ₹15,000 ಕೋಟಿ ಮೀಸಲು ಇಡಲಾಗುವುದು.
ಈ ಮೂಲಕ ಪಿವಿಟಿಜಿ ವಿಭಾಗದವರಿಗೆ ಸುರಕ್ಷಿತ ವಸತಿ, ಶುದ್ಧ ಕುಡಿಯುವ ನೀರು, ನೈರ್ಮಲ್ಯ, ಶಿಕ್ಷಣ, ಆರೋಗ್ಯ, ಪೋಷಣೆಯಂತಹ ಮೂಲಭೂತ್ವ ಸೌಲಭ್ಯ ಮತ್ತು ರಸ್ತೆ, ದೂರ ಸಂಪರ್ಕ ಮತ್ತು ಸುಸ್ಥಿರ ಜೀವನೋಪಾಯದ ಬೇಡಿಕೆಗಳನ್ನು ಈಡೇರಿಸಲಾಗುವುದು.