<p><strong>ನವದಹೆಲಿ:</strong> ಕೇಂದ್ರ ಬಜೆಟ್ ಒಂದು ರೀತಿ ‘ಗುಂಡೇಟಿಗೆ ಸಣ್ಣ ಬ್ಯಾಂಡೇಜ್ ಹಾಕಿದಂತಿದೆ’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ. </p><p>‘ಜಾಗತಿಕ ಅನಿಶ್ಚಿತತೆಯ ನಡುವೆ ದೇಶದ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಒಂದು ಮಾದರಿ ಬದಲಾವಣೆಯನ್ನು ತರಬೇಕಾದ ಅನಿವಾರ್ಯತೆ ಇದೆ. ಆದರೆ, ಬಿಜೆಪಿ ಸರ್ಕಾರದ ಪರಿಕಲ್ಪನೆಗಳು ದಿವಾಳಿಯಾಗಿವೆ’ ಎಂದು ರಾಹುಲ್ ‘ಎಕ್ಸ್’ನಲ್ಲಿ ವಾಗ್ದಾಳಿ ನಡೆಸಿದ್ದಾರೆ. </p>.<p>ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಶನಿವಾರ) ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಇದಾಗಿದೆ. </p><p>‘ಈ ಬಾರಿಯ ಬಜೆಟ್ನಲ್ಲಿ ಬಡತನ ನಿರ್ಮೂಲನೆಗೆ ಆದ್ಯತೆ ನೀಡಲಾಗಿದೆ. ಮಧ್ಯಮವರ್ಗ ಮತ್ತು ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಲಾಗಿದ್ದು, 2047ಕ್ಕೆ ಬಡತನ ಮುಕ್ತ ಭಾರತ ನಿರ್ಮಿಸುವ ಸಂಕಲ್ಪ ಹೊಂದಿದ್ದೇವೆ’ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. </p><p>‘ಈ ಬಾರಿಯ ಕೇಂದ್ರ ಬಜೆಟ್, ದೇಶದ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಈಡೇರಿಸುವ ನಮ್ಮ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. </p><p>‘ಬಜೆಟ್ನಲ್ಲಿ ಉಳಿತಾಯ, ಹೂಡಿಕೆ, ಬಳಕೆ ಮತ್ತು ಬೆಳವಣಿಗೆಗೆ ಹೆಚ್ಚಿನ ಉತ್ತೇಜನ ಸಿಗುವಂತಹ ಹಲವು ಅಂಶಗಳಿವೆ. ಜತೆಗೆ, ಗಿಗ್ ಕಾರ್ಮಿಕರ ಕಲ್ಯಾಣ ಕ್ರಮಗಳು ಕಾರ್ಮಿಕರ ಘನತೆಗೆ ಸರ್ಕಾರದ ಬದ್ಧತೆಯನ್ನು ಒತ್ತಿಹೇಳುತ್ತವೆ’ ಎಂದು ತಿಳಿಸಿದ್ದಾರೆ. </p><p>‘ಈ ಬಾರಿಯ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜತೆಗೆ, ಸಾಮಾನ್ಯ ಪ್ರಜೆಯ ಜೇಬು ತುಂಬಿಸುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. ‘ವಿಕಸಿತ ಭಾರತ’ದ ನಮ್ಮ ಧ್ಯೇಯವನ್ನು ಸಾಮಾನ್ಯ ಜನರು ಕೊಂಡೊಯ್ಯುತ್ತಾರೆ ಎಂಬುದಕ್ಕೆ ಇದುವೇ ಸಾಕ್ಷಿ’ ಎಂದೂ ಮೋದಿ ಬಣ್ಣಿಸಿದ್ದಾರೆ. </p><p>ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಅಮಿತ್ ಶಾ, ‘ರೈತರಿಂದ ಮಧ್ಯಮ ವರ್ಗದವರೆಗೆ, ಆರೋಗ್ಯ, ಸ್ಟಾರ್ಟ್ಅಪ್ಗಳಿಂದ ನಾವೀನ್ಯತೆ ಮತ್ತು ಹೂಡಿಕೆಯವರೆಗಿನ ಪ್ರತಿಯೊಂದು ವಲಯವನ್ನು ಬಜೆಟ್ ಒಳಗೊಂಡಿದೆ. ಇದು ಮೋದಿಯವರ ಸ್ವಾವಲಂಬಿ ಭಾರತಕ್ಕೆ ಮಾರ್ಗಸೂಚಿಯಾಗಿದೆ’ ಎಂದು ತಿಳಿಸಿದ್ದಾರೆ. </p><p>‘₹12 ಲಕ್ಷ ಆದಾಯದವರೆಗೆ ಶೂನ್ಯ ಆದಾಯ ತೆರಿಗೆ ಘೋಷಿಸಲಾಗಿದೆ. ಈ ಉದ್ದೇಶಿತ ತೆರಿಗೆ ವಿನಾಯಿತಿಯು ಮಧ್ಯಮ ವರ್ಗದ ಆರ್ಥಿಕ ಯೋಗಕ್ಷೇಮವನ್ನು ಹೆಚ್ಚಿಸುವಲ್ಲಿ ಸಾಕಷ್ಟು ಸಹಾಯ ಮಾಡುತ್ತದೆ. ಈ ಸಂದರ್ಭದಲ್ಲಿ ಎಲ್ಲಾ ಫಲಾನುಭವಿಗಳಿಗೆ ಅಭಿನಂದನೆಗಳು. ಇದು #ViksitBharatBudget2025’ ಎಂದು ಶಾ ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ. </p>.Budget 2025 | ಜನರ ಆಕಾಂಕ್ಷೆ ಈಡೇರಿಸಲು ಸರ್ಕಾರದ ಬದ್ಧತೆ ಪ್ರದರ್ಶನ: ಮೋದಿ.Budget 2025 | ಮಧ್ಯಮ ವರ್ಗದವರು ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ: ಅಮಿತ್ ಶಾ.Budget 2025 Highlights: ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಮುಖ್ಯಾಂಶಗಳು .Union Budget 2025: ಯಾವುದು ಇಳಿಕೆ, ಯಾವುದು ಏರಿಕೆ?.Budget 2025: ಯಾವ್ಯಾವ ವಲಯಕ್ಕೆ ಎಷ್ಟು ಅನುದಾನ? ಇಲ್ಲಿದೆ ಮಾಹಿತಿ.Budget | ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ನಿರ್ಮಲಾ.ಸತತ 8ನೇ ಬಾರಿಗೆ ಬಜೆಟ್ ಮಂಡಿಸಿ ಚಾರಿತ್ರಿಕ ದಾಖಲೆ ಬರೆದ ನಿರ್ಮಲಾ ಸೀತಾರಾಮನ್.Budget 2025: ಹಿಂದಿನ ಬಜೆಟ್ ದಿನಗಳಲ್ಲಿ ನಿರ್ಮಲಾ ಸೀತಾರಾಮನ್ ಉಟ್ಟಿದ್ದ ಸೀರೆಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದಹೆಲಿ:</strong> ಕೇಂದ್ರ ಬಜೆಟ್ ಒಂದು ರೀತಿ ‘ಗುಂಡೇಟಿಗೆ ಸಣ್ಣ ಬ್ಯಾಂಡೇಜ್ ಹಾಕಿದಂತಿದೆ’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ. </p><p>‘ಜಾಗತಿಕ ಅನಿಶ್ಚಿತತೆಯ ನಡುವೆ ದೇಶದ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಒಂದು ಮಾದರಿ ಬದಲಾವಣೆಯನ್ನು ತರಬೇಕಾದ ಅನಿವಾರ್ಯತೆ ಇದೆ. ಆದರೆ, ಬಿಜೆಪಿ ಸರ್ಕಾರದ ಪರಿಕಲ್ಪನೆಗಳು ದಿವಾಳಿಯಾಗಿವೆ’ ಎಂದು ರಾಹುಲ್ ‘ಎಕ್ಸ್’ನಲ್ಲಿ ವಾಗ್ದಾಳಿ ನಡೆಸಿದ್ದಾರೆ. </p>.<p>ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಶನಿವಾರ) ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಇದಾಗಿದೆ. </p><p>‘ಈ ಬಾರಿಯ ಬಜೆಟ್ನಲ್ಲಿ ಬಡತನ ನಿರ್ಮೂಲನೆಗೆ ಆದ್ಯತೆ ನೀಡಲಾಗಿದೆ. ಮಧ್ಯಮವರ್ಗ ಮತ್ತು ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಲಾಗಿದ್ದು, 2047ಕ್ಕೆ ಬಡತನ ಮುಕ್ತ ಭಾರತ ನಿರ್ಮಿಸುವ ಸಂಕಲ್ಪ ಹೊಂದಿದ್ದೇವೆ’ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. </p><p>‘ಈ ಬಾರಿಯ ಕೇಂದ್ರ ಬಜೆಟ್, ದೇಶದ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಈಡೇರಿಸುವ ನಮ್ಮ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. </p><p>‘ಬಜೆಟ್ನಲ್ಲಿ ಉಳಿತಾಯ, ಹೂಡಿಕೆ, ಬಳಕೆ ಮತ್ತು ಬೆಳವಣಿಗೆಗೆ ಹೆಚ್ಚಿನ ಉತ್ತೇಜನ ಸಿಗುವಂತಹ ಹಲವು ಅಂಶಗಳಿವೆ. ಜತೆಗೆ, ಗಿಗ್ ಕಾರ್ಮಿಕರ ಕಲ್ಯಾಣ ಕ್ರಮಗಳು ಕಾರ್ಮಿಕರ ಘನತೆಗೆ ಸರ್ಕಾರದ ಬದ್ಧತೆಯನ್ನು ಒತ್ತಿಹೇಳುತ್ತವೆ’ ಎಂದು ತಿಳಿಸಿದ್ದಾರೆ. </p><p>‘ಈ ಬಾರಿಯ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜತೆಗೆ, ಸಾಮಾನ್ಯ ಪ್ರಜೆಯ ಜೇಬು ತುಂಬಿಸುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. ‘ವಿಕಸಿತ ಭಾರತ’ದ ನಮ್ಮ ಧ್ಯೇಯವನ್ನು ಸಾಮಾನ್ಯ ಜನರು ಕೊಂಡೊಯ್ಯುತ್ತಾರೆ ಎಂಬುದಕ್ಕೆ ಇದುವೇ ಸಾಕ್ಷಿ’ ಎಂದೂ ಮೋದಿ ಬಣ್ಣಿಸಿದ್ದಾರೆ. </p><p>ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಅಮಿತ್ ಶಾ, ‘ರೈತರಿಂದ ಮಧ್ಯಮ ವರ್ಗದವರೆಗೆ, ಆರೋಗ್ಯ, ಸ್ಟಾರ್ಟ್ಅಪ್ಗಳಿಂದ ನಾವೀನ್ಯತೆ ಮತ್ತು ಹೂಡಿಕೆಯವರೆಗಿನ ಪ್ರತಿಯೊಂದು ವಲಯವನ್ನು ಬಜೆಟ್ ಒಳಗೊಂಡಿದೆ. ಇದು ಮೋದಿಯವರ ಸ್ವಾವಲಂಬಿ ಭಾರತಕ್ಕೆ ಮಾರ್ಗಸೂಚಿಯಾಗಿದೆ’ ಎಂದು ತಿಳಿಸಿದ್ದಾರೆ. </p><p>‘₹12 ಲಕ್ಷ ಆದಾಯದವರೆಗೆ ಶೂನ್ಯ ಆದಾಯ ತೆರಿಗೆ ಘೋಷಿಸಲಾಗಿದೆ. ಈ ಉದ್ದೇಶಿತ ತೆರಿಗೆ ವಿನಾಯಿತಿಯು ಮಧ್ಯಮ ವರ್ಗದ ಆರ್ಥಿಕ ಯೋಗಕ್ಷೇಮವನ್ನು ಹೆಚ್ಚಿಸುವಲ್ಲಿ ಸಾಕಷ್ಟು ಸಹಾಯ ಮಾಡುತ್ತದೆ. ಈ ಸಂದರ್ಭದಲ್ಲಿ ಎಲ್ಲಾ ಫಲಾನುಭವಿಗಳಿಗೆ ಅಭಿನಂದನೆಗಳು. ಇದು #ViksitBharatBudget2025’ ಎಂದು ಶಾ ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ. </p>.Budget 2025 | ಜನರ ಆಕಾಂಕ್ಷೆ ಈಡೇರಿಸಲು ಸರ್ಕಾರದ ಬದ್ಧತೆ ಪ್ರದರ್ಶನ: ಮೋದಿ.Budget 2025 | ಮಧ್ಯಮ ವರ್ಗದವರು ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ: ಅಮಿತ್ ಶಾ.Budget 2025 Highlights: ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಮುಖ್ಯಾಂಶಗಳು .Union Budget 2025: ಯಾವುದು ಇಳಿಕೆ, ಯಾವುದು ಏರಿಕೆ?.Budget 2025: ಯಾವ್ಯಾವ ವಲಯಕ್ಕೆ ಎಷ್ಟು ಅನುದಾನ? ಇಲ್ಲಿದೆ ಮಾಹಿತಿ.Budget | ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ನಿರ್ಮಲಾ.ಸತತ 8ನೇ ಬಾರಿಗೆ ಬಜೆಟ್ ಮಂಡಿಸಿ ಚಾರಿತ್ರಿಕ ದಾಖಲೆ ಬರೆದ ನಿರ್ಮಲಾ ಸೀತಾರಾಮನ್.Budget 2025: ಹಿಂದಿನ ಬಜೆಟ್ ದಿನಗಳಲ್ಲಿ ನಿರ್ಮಲಾ ಸೀತಾರಾಮನ್ ಉಟ್ಟಿದ್ದ ಸೀರೆಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>