<p><strong>ನವದೆಹಲಿ: </strong>ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ 'ಅಮೃತ್' ಅಡಿ, 500 ನಗರಗಳಲ್ಲಿ ನೀರು ಸರಬರಾಜು ವ್ಯಾಪ್ತಿಯು ಶೇ 70ಕ್ಕೆ ಹಾಗೂ ಒಳಚರಂಡಿ ವ್ಯಾಪ್ತಿಯು ಶೇ 62 ಕ್ಕೆ ಏರಿಕೆಯಾಗಿದೆ ಎಂದು ಆರ್ಥಿಕ ಸಮೀಕ್ಷೆ ತಿಳಿಸಿದೆ.</p><p>ಸಂಸತ್ತಿನಲ್ಲಿ ಶುಕ್ರವಾರ ಮಂಡಿಸಿದ ಅಟಲ್ ಮಿಷನ್ ಫಾರ್ ರಿಜುವೆನೇಶನ್ ಮತ್ತು ಅರ್ಬನ್ ಟ್ರಾನ್ಸ್ಫರ್ಮೇಷನ್ (ಅಮೃತ್) ವರದಿಯಲ್ಲಿ, ಪ್ರತಿನಿತ್ಯ ನೀರಿನ ಸಂಸ್ಕರಣಾ ಸಾಮರ್ಥ್ಯವನ್ನು 464 ಕೋಟಿ ಲೀಟರ್ನಷ್ಟಕ್ಕೆ ಏರಿಸಲಾಗಿದೆ. 2,439 ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲಾಗಿದ್ದು, 5,070 ಎಕರೆ ಪ್ರದೇಶವನ್ನು ಹಸಿರಾಗಿಸಲಾಗಿದೆ.</p><p>2021ರಲ್ಲಿ ಪರಿಚಯಿಸಲಾದ ಅಮೃತ್ ಯೋಜನೆ ಸಲುವಾಗಿ, 2021–22ರಿಂದ 2025–26ರ ವರೆಗೆ 2.77 ಲಕ್ಷ ಕೋಟಿ ನಿಗದಿಪಡಿಸಲಾಗಿದೆ. ಈವರೆಗೆ ಅಂದಾಜು ₹ 1.89 ಲಕ್ಷ ಕೋಟಿ ವೆಚ್ಚದಲ್ಲಿ 8,923 ಯೋಜನೆಗಳನ್ನು ಆರಂಭಿಸಲಾಗಿದೆ.</p><p>2024-25ರ ಆರ್ಥಿಕ ಸಮೀಕ್ಷೆಯ ಪ್ರಕಾರ, ಕಳೆದ ನವೆಂಬರ್ 25ರ ವರೆಗೆ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ ಒಟ್ಟು 1.18 ಕೋಟಿ ಮನೆಗಳನ್ನು ಮಂಜೂರು ಮಾಡಲಾಗಿದೆ. ಈ ಪೈಕಿ 89 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಪಿಎಂಎವೈ ಅನ್ನು, 29 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು ಮುಂದಾಗಿದ್ದು, ಮುಂದಿನ ಹಣಕಾಸು ವರ್ಷದಲ್ಲಿ 6 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗುತ್ತದೆ.</p><p>ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ₹ 1.64 ಲಕ್ಷ ಕೋಟಿ ವೆಚ್ಚದ ಅಂದಾಜಿನಲ್ಲಿ ಪ್ರಸ್ತಾಪಿಸಲಾಗಿದ್ದ ಒಟ್ಟು 8,058 ಯೋಜನೆಗಳ ಪೈಕಿ 7,479 ಇದೇ ತಿಂಗಳ 13ರ ವರೆಗೆ ಪೂರ್ಣಗೊಂಡಿವೆ.</p>.Budget 2025 LIVE: ರಕ್ಷಣಾ ಕ್ಷೇತ್ರಕ್ಕೆ ಗರಿಷ್ಠ; ವಿಜ್ಞಾನ ಕ್ಷೇತ್ರಕ್ಕೆ ಕನಿಷ್ಠ ಅನುದಾನ.Budget 2025 Highlights: ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಮುಖ್ಯಾಂಶಗಳು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ 'ಅಮೃತ್' ಅಡಿ, 500 ನಗರಗಳಲ್ಲಿ ನೀರು ಸರಬರಾಜು ವ್ಯಾಪ್ತಿಯು ಶೇ 70ಕ್ಕೆ ಹಾಗೂ ಒಳಚರಂಡಿ ವ್ಯಾಪ್ತಿಯು ಶೇ 62 ಕ್ಕೆ ಏರಿಕೆಯಾಗಿದೆ ಎಂದು ಆರ್ಥಿಕ ಸಮೀಕ್ಷೆ ತಿಳಿಸಿದೆ.</p><p>ಸಂಸತ್ತಿನಲ್ಲಿ ಶುಕ್ರವಾರ ಮಂಡಿಸಿದ ಅಟಲ್ ಮಿಷನ್ ಫಾರ್ ರಿಜುವೆನೇಶನ್ ಮತ್ತು ಅರ್ಬನ್ ಟ್ರಾನ್ಸ್ಫರ್ಮೇಷನ್ (ಅಮೃತ್) ವರದಿಯಲ್ಲಿ, ಪ್ರತಿನಿತ್ಯ ನೀರಿನ ಸಂಸ್ಕರಣಾ ಸಾಮರ್ಥ್ಯವನ್ನು 464 ಕೋಟಿ ಲೀಟರ್ನಷ್ಟಕ್ಕೆ ಏರಿಸಲಾಗಿದೆ. 2,439 ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲಾಗಿದ್ದು, 5,070 ಎಕರೆ ಪ್ರದೇಶವನ್ನು ಹಸಿರಾಗಿಸಲಾಗಿದೆ.</p><p>2021ರಲ್ಲಿ ಪರಿಚಯಿಸಲಾದ ಅಮೃತ್ ಯೋಜನೆ ಸಲುವಾಗಿ, 2021–22ರಿಂದ 2025–26ರ ವರೆಗೆ 2.77 ಲಕ್ಷ ಕೋಟಿ ನಿಗದಿಪಡಿಸಲಾಗಿದೆ. ಈವರೆಗೆ ಅಂದಾಜು ₹ 1.89 ಲಕ್ಷ ಕೋಟಿ ವೆಚ್ಚದಲ್ಲಿ 8,923 ಯೋಜನೆಗಳನ್ನು ಆರಂಭಿಸಲಾಗಿದೆ.</p><p>2024-25ರ ಆರ್ಥಿಕ ಸಮೀಕ್ಷೆಯ ಪ್ರಕಾರ, ಕಳೆದ ನವೆಂಬರ್ 25ರ ವರೆಗೆ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ ಒಟ್ಟು 1.18 ಕೋಟಿ ಮನೆಗಳನ್ನು ಮಂಜೂರು ಮಾಡಲಾಗಿದೆ. ಈ ಪೈಕಿ 89 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಪಿಎಂಎವೈ ಅನ್ನು, 29 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು ಮುಂದಾಗಿದ್ದು, ಮುಂದಿನ ಹಣಕಾಸು ವರ್ಷದಲ್ಲಿ 6 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗುತ್ತದೆ.</p><p>ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ₹ 1.64 ಲಕ್ಷ ಕೋಟಿ ವೆಚ್ಚದ ಅಂದಾಜಿನಲ್ಲಿ ಪ್ರಸ್ತಾಪಿಸಲಾಗಿದ್ದ ಒಟ್ಟು 8,058 ಯೋಜನೆಗಳ ಪೈಕಿ 7,479 ಇದೇ ತಿಂಗಳ 13ರ ವರೆಗೆ ಪೂರ್ಣಗೊಂಡಿವೆ.</p>.Budget 2025 LIVE: ರಕ್ಷಣಾ ಕ್ಷೇತ್ರಕ್ಕೆ ಗರಿಷ್ಠ; ವಿಜ್ಞಾನ ಕ್ಷೇತ್ರಕ್ಕೆ ಕನಿಷ್ಠ ಅನುದಾನ.Budget 2025 Highlights: ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಮುಖ್ಯಾಂಶಗಳು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>