<figcaption>""</figcaption>.<p><strong>ನವದೆಹಲಿ</strong>:ನಾಗರಿಕರ ಆರೋಗ್ಯ ರಕ್ಷಣೆಗೆ ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ₹ 69,000 ಕೋಟಿ ಮೀಸಲಿರಿಸಿದೆ. ಅಲ್ಲದೆ, 2025ರ ವೇಳೆಗೆ ಕ್ಷಯರೋಗ ಮುಕ್ತ ಭಾರತಕ್ಕಾಗಿ ‘ಟಿಬಿ ಹರೇಗಾ ದೇಶ್ ಜೀತೇಗಾ’ಅಭಿಯಾನವನ್ನು ಆರಂಭಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.</p>.<p>ಆರೋಗ್ಯ ಕೇತ್ರಕ್ಕೆ ಮೀಸಲಿಟ್ಟಿರುವ ಒಟ್ಟು ಹಣದಲ್ಲಿಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗೆ (ಪಿಎಂಜೆಎವೈ–ಆಯುಷ್ಮಾನ್ ಭಾರತ್) ₹ 6,429 ಕೋಟಿ ನೀಡಲಾಗುವುದು. ಪ್ರಸ್ತುತ 20,000ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಪಿಎಂಜೆಎವೈ ಯೋಜನೆ ಜಾರಿಯಲ್ಲಿದೆ. ಈ ಯೋಜನೆಯನ್ನು 2 ಮತ್ತು 3ನೇ ಹಂತದ ನಗರಗಳಿಗೂ ವಿಸ್ತರಿಸಲಾಗುವುದು ಎಂದು ಹೇಳಿದರು.</p>.<p>ಜನೌಷಧಿ ಕೇಂದ್ರಗಳನ್ನು ಎಲ್ಲ ಜಿಲ್ಲೆಗಳಲ್ಲೂ ತೆರೆಯಲಾಗುವುದು.ಕೈಗೆಟಕುವ ದರದಲ್ಲಿ ಅಗತ್ಯ 2,000 ಔಷಧಗಳನ್ನು ಫಲಾನುಭವಿಗಳಿಗೆ ತಲುಪಿಸಲಾಗುವುದು. ವೈದ್ಯಕೀಯ ಯಂತ್ರಗಳ ಮೇಲೆ ತೆರಿಗೆಯನ್ನು ಇಳಿಸಲಾಗಿದ್ದು, ಈ ಮೂಲಕ ಎಲ್ಲ ಆಸ್ಪತ್ರೆಗಳನ್ನು ಉನ್ನತೀಕರಿಸಲು ಸಹಾಯ ಮಾಡಲಾಗುವುದು ಎಂದರು.</p>.<p>ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಹೊಸ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು. ಈ ಮೂಲಕ ಯುವ ಸಮುದಾಯಕ್ಕೆ ದೊಡ್ಡ ಪ್ರಮಾಣದಲ್ಲಿ ಉದ್ಯೋಗವಕಾಶಗಳನ್ನು ಸೃಷ್ಟಿಸಲಾಗುವುದು ಎಂಬ ಭರವಸೆ ನೀಡಿದರು.</p>.<p>ಆಯುಷ್ಮಾನ್ ಭಾರತ್ ಯೋಜನೆ ಅಡಿ ಕೃತಿಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಬಳಸಿಕೊಳ್ಳುವ ಮೂಲಕ ಮಾರಕ ರೋಗಗಳ ಶಮನಗೊಳಿಸುವ ಹೊಸ ದಾರಿಗಳನ್ನು ಸೃಷ್ಟಿಸಲು ವೈದ್ಯಕೀಯ ಸಮುದಾಯಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ನವದೆಹಲಿ</strong>:ನಾಗರಿಕರ ಆರೋಗ್ಯ ರಕ್ಷಣೆಗೆ ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ₹ 69,000 ಕೋಟಿ ಮೀಸಲಿರಿಸಿದೆ. ಅಲ್ಲದೆ, 2025ರ ವೇಳೆಗೆ ಕ್ಷಯರೋಗ ಮುಕ್ತ ಭಾರತಕ್ಕಾಗಿ ‘ಟಿಬಿ ಹರೇಗಾ ದೇಶ್ ಜೀತೇಗಾ’ಅಭಿಯಾನವನ್ನು ಆರಂಭಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.</p>.<p>ಆರೋಗ್ಯ ಕೇತ್ರಕ್ಕೆ ಮೀಸಲಿಟ್ಟಿರುವ ಒಟ್ಟು ಹಣದಲ್ಲಿಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗೆ (ಪಿಎಂಜೆಎವೈ–ಆಯುಷ್ಮಾನ್ ಭಾರತ್) ₹ 6,429 ಕೋಟಿ ನೀಡಲಾಗುವುದು. ಪ್ರಸ್ತುತ 20,000ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಪಿಎಂಜೆಎವೈ ಯೋಜನೆ ಜಾರಿಯಲ್ಲಿದೆ. ಈ ಯೋಜನೆಯನ್ನು 2 ಮತ್ತು 3ನೇ ಹಂತದ ನಗರಗಳಿಗೂ ವಿಸ್ತರಿಸಲಾಗುವುದು ಎಂದು ಹೇಳಿದರು.</p>.<p>ಜನೌಷಧಿ ಕೇಂದ್ರಗಳನ್ನು ಎಲ್ಲ ಜಿಲ್ಲೆಗಳಲ್ಲೂ ತೆರೆಯಲಾಗುವುದು.ಕೈಗೆಟಕುವ ದರದಲ್ಲಿ ಅಗತ್ಯ 2,000 ಔಷಧಗಳನ್ನು ಫಲಾನುಭವಿಗಳಿಗೆ ತಲುಪಿಸಲಾಗುವುದು. ವೈದ್ಯಕೀಯ ಯಂತ್ರಗಳ ಮೇಲೆ ತೆರಿಗೆಯನ್ನು ಇಳಿಸಲಾಗಿದ್ದು, ಈ ಮೂಲಕ ಎಲ್ಲ ಆಸ್ಪತ್ರೆಗಳನ್ನು ಉನ್ನತೀಕರಿಸಲು ಸಹಾಯ ಮಾಡಲಾಗುವುದು ಎಂದರು.</p>.<p>ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಹೊಸ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು. ಈ ಮೂಲಕ ಯುವ ಸಮುದಾಯಕ್ಕೆ ದೊಡ್ಡ ಪ್ರಮಾಣದಲ್ಲಿ ಉದ್ಯೋಗವಕಾಶಗಳನ್ನು ಸೃಷ್ಟಿಸಲಾಗುವುದು ಎಂಬ ಭರವಸೆ ನೀಡಿದರು.</p>.<p>ಆಯುಷ್ಮಾನ್ ಭಾರತ್ ಯೋಜನೆ ಅಡಿ ಕೃತಿಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಬಳಸಿಕೊಳ್ಳುವ ಮೂಲಕ ಮಾರಕ ರೋಗಗಳ ಶಮನಗೊಳಿಸುವ ಹೊಸ ದಾರಿಗಳನ್ನು ಸೃಷ್ಟಿಸಲು ವೈದ್ಯಕೀಯ ಸಮುದಾಯಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>