<p><strong>ನವದೆಹಲಿ</strong>: ಬಜೆಟ್ನಲ್ಲಿ ಘೋಷಿಸಲಾಗಿರುವ ಏಳು ಹೈಸ್ಪೀಡ್ ರೈಲ್ವೆ ಕಾರಿಡಾರ್ಗಳು ದೇಶದ ವಿವಿಧ ಭಾಗಗಳನ್ನು ಸಂರ್ಪಕಿಸಲಿದ್ದು, ಒಟ್ಟು 4,000 ಕಿ.ಮೀನಷ್ಟು ವ್ಯಾಪ್ತಿ ಹೊಂದಿರಲಿದೆ. ಇದು ಸುಮಾರು ₹16,000 ಕೋಟಿಯಷ್ಟು ಹೂಡಿಕೆಯನ್ನು ಆಕರ್ಷಿಸುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಂಗಳೂರು– ಚೆನ್ನೈ–ಹೈದರಾಬಾದ್ ಕಾರಿಡಾರ್ಗಳು ದಕ್ಷಿಣ ರಾಜ್ಯದಲ್ಲಿ ಹೈಸ್ಪೀಡ್ ‘ಟ್ರೈಯಾಂಗಲ್’ ಅನ್ನು ರೂಪಿಸಲಿದೆ. ಇದರಿಂದ ಕರ್ನಾಟಕ, ಕೇರಳ, ಆಂಧ್ರ ಪ್ರದೇಶ, ತಮಿಳುನಾಡು, ತೆಲಂಗಾಣ ರಾಜ್ಯಗಳು ಮತ್ತು ಪುದುಚೇರಿ ಜನರಿಗೆ ಪ್ರಯೋಜನವಾಗಲಿದೆ ಎಂದು ಮಾಹಿತಿ ನೀಡಿದರು. </p>.<p>ಚೆನ್ನೈ–ಬೆಂಗಳೂರು, ಬೆಂಗಳೂರು– ಹೈದರಾಬಾದ್ ಮತ್ತು ಚೆನ್ನೈ– ಹೈದರಾಬಾದ್ ನಡುವಿನ ಪ್ರಯಾಣದ ಅವಧಿಯು ಕ್ರಮವಾಗಿ 1.13 ಗಂಟೆ, 2 ಗಂಟೆ ಹಾಗೂ 2.55 ಗಂಟೆಗೆ ತಗ್ಗಲಿದೆ ಎಂದು ಅವರು ವಿವರಿಸಿದರು. </p>.<p>ಹಾಗೆಯೇ ಮುಂಬೈ– ಪುಣೆ ನಡುವಿನ ಪ್ರಯಾಣ 48 ನಿಮಿಷಕ್ಕೆ, ಪುಣೆ– ಹೈದರಾಬಾದ್ ನಡುವಿನ ಪ್ರಯಾಣ 1.55 ಗಂಟೆಗೆ, ವಾರಾಣಸಿ– ಸಿಲಿಗುರಿ ನಡುವಿನ ಪ್ರಯಾಣ 2.55 ಗಂಟೆಗೆ, ದೆಹಲಿ– ವಾರಾಣಸಿ ನಡುವಿನ ಪ್ರಯಾಣದ ಅವಧಿ 3.50 ಗಂಟೆಗೆ ಇಳಿಯಲಿದೆ ಎಂದರು.</p>.<p>ಮುಂಬೈ ಮತ್ತು ಅಹಮದಾಬಾದ್ ನಡುವಿನ ಹೈಸ್ಪೀಡ್ ಕಾರಿಡಾರ್ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದೆ ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಜೆಟ್ನಲ್ಲಿ ಘೋಷಿಸಲಾಗಿರುವ ಏಳು ಹೈಸ್ಪೀಡ್ ರೈಲ್ವೆ ಕಾರಿಡಾರ್ಗಳು ದೇಶದ ವಿವಿಧ ಭಾಗಗಳನ್ನು ಸಂರ್ಪಕಿಸಲಿದ್ದು, ಒಟ್ಟು 4,000 ಕಿ.ಮೀನಷ್ಟು ವ್ಯಾಪ್ತಿ ಹೊಂದಿರಲಿದೆ. ಇದು ಸುಮಾರು ₹16,000 ಕೋಟಿಯಷ್ಟು ಹೂಡಿಕೆಯನ್ನು ಆಕರ್ಷಿಸುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಂಗಳೂರು– ಚೆನ್ನೈ–ಹೈದರಾಬಾದ್ ಕಾರಿಡಾರ್ಗಳು ದಕ್ಷಿಣ ರಾಜ್ಯದಲ್ಲಿ ಹೈಸ್ಪೀಡ್ ‘ಟ್ರೈಯಾಂಗಲ್’ ಅನ್ನು ರೂಪಿಸಲಿದೆ. ಇದರಿಂದ ಕರ್ನಾಟಕ, ಕೇರಳ, ಆಂಧ್ರ ಪ್ರದೇಶ, ತಮಿಳುನಾಡು, ತೆಲಂಗಾಣ ರಾಜ್ಯಗಳು ಮತ್ತು ಪುದುಚೇರಿ ಜನರಿಗೆ ಪ್ರಯೋಜನವಾಗಲಿದೆ ಎಂದು ಮಾಹಿತಿ ನೀಡಿದರು. </p>.<p>ಚೆನ್ನೈ–ಬೆಂಗಳೂರು, ಬೆಂಗಳೂರು– ಹೈದರಾಬಾದ್ ಮತ್ತು ಚೆನ್ನೈ– ಹೈದರಾಬಾದ್ ನಡುವಿನ ಪ್ರಯಾಣದ ಅವಧಿಯು ಕ್ರಮವಾಗಿ 1.13 ಗಂಟೆ, 2 ಗಂಟೆ ಹಾಗೂ 2.55 ಗಂಟೆಗೆ ತಗ್ಗಲಿದೆ ಎಂದು ಅವರು ವಿವರಿಸಿದರು. </p>.<p>ಹಾಗೆಯೇ ಮುಂಬೈ– ಪುಣೆ ನಡುವಿನ ಪ್ರಯಾಣ 48 ನಿಮಿಷಕ್ಕೆ, ಪುಣೆ– ಹೈದರಾಬಾದ್ ನಡುವಿನ ಪ್ರಯಾಣ 1.55 ಗಂಟೆಗೆ, ವಾರಾಣಸಿ– ಸಿಲಿಗುರಿ ನಡುವಿನ ಪ್ರಯಾಣ 2.55 ಗಂಟೆಗೆ, ದೆಹಲಿ– ವಾರಾಣಸಿ ನಡುವಿನ ಪ್ರಯಾಣದ ಅವಧಿ 3.50 ಗಂಟೆಗೆ ಇಳಿಯಲಿದೆ ಎಂದರು.</p>.<p>ಮುಂಬೈ ಮತ್ತು ಅಹಮದಾಬಾದ್ ನಡುವಿನ ಹೈಸ್ಪೀಡ್ ಕಾರಿಡಾರ್ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದೆ ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>