ಭಾನುವಾರ, 1 ಫೆಬ್ರುವರಿ 2026
×
ADVERTISEMENT
ADVERTISEMENT

ಕೇಂದ್ರ ಬಜೆಟ್ ಕುರಿತು ಯಾರು ಏನಂದರು? ಇಲ್ಲಿವೆ ರಾಜಕೀಯ ನಾಯಕರ ಪ್ರತಿಕ್ರಿಯೆ

Published : 1 ಫೆಬ್ರುವರಿ 2026, 18:47 IST
Last Updated : 1 ಫೆಬ್ರುವರಿ 2026, 18:47 IST
ಫಾಲೋ ಮಾಡಿ
Comments
‘ಆರ್ಥಿಕ ಶಿಸ್ತಿನ ಬಜೆಟ್‌’
ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿಸುವ ಬಜೆಟ್‌ ಇದು. ವಿಶ್ವದ ಬಹುತೇಕ ದೇಶಗಳು ಆರ್ಥಿಕ ಬಿಕ್ಕಟ್ಟಿನಲ್ಲಿ ಇರುವಂತಹ ಸಂದರ್ಭದಲ್ಲಿ, ಭಾರತವು ಆರ್ಥಿಕ ಪ್ರಗತಿಯಲ್ಲಿ ಮುಂದುವರಿಯುವಂತಹ ಅಭಿವೃದ್ಧಿ ಪರವಾದ ಬಜೆಟ್‌ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಸರ್ವರ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. ಶೇ 7.4ರಷ್ಟು ಆರ್ಥಿಕ ಬೆಳವಣಿಗೆ ದರ ಕಾಯ್ದುಕೊಳ್ಳುವುದು ಮತ್ತು ವಿತ್ತೀಯ ಕೊರತೆಯನ್ನು ಶೇ4.3ಕ್ಕೆ ನಿಯಂತ್ರಿಸುವುದು ಸಾಧನೆಯೇ ಸರಿ. ಆರ್ಥಿಕ ಶಿಸ್ತನ್ನು ಕಾಯ್ದುಕೊಂಡಿರುವ ಬಜೆಟ್‌ ಇದು.
– ಬಸವರಾಜ ಬೊಮ್ಮಾಯಿ, ಬಿಜೆಪಿ ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT