ಮಂಗಳವಾರ, ಮಾರ್ಚ್ 28, 2023
33 °C

Union Budget 2023: ದಂಡ ಮೊತ್ತ ಪಾವತಿಸಲಾಗದ ಬಡ ಕೈದಿಗಳಿಗೆ ಆರ್ಥಿಕ ನೆರವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದಂಡ ಅಥವಾ ಜಾಮೀನು ಮೊತ್ತ ಪಾವತಿಸಲಾಗದ ಬಡ ಕೈದಿಗಳಿಗೆ ಆರ್ಥಿಕ ನೆರವು ಒದಗಿಸಲಾಗುವುದು ಎಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. 

ಈ ಮೊದಲು ಜಾಮೀನು ದೊರಕಿದ್ದರೂ ಸುಮಾರು 5,000 ವಿಚಾರಣಾಧೀನ ಕೈದಿಗಳು ಜೈಲಿನಲ್ಲಿದ್ದಾರೆ ಎಂದು ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ (ಎನ್‌ಎಎಲ್‌ಎಸ್ಎ) ಮಾಹಿತಿ ಒದಗಿಸಿತ್ತು.

ಬಜೆಟ್ ಕುರಿತು ಸಮಗ್ರ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಕೇಂದ್ರ ಬಜೆಟ್ 2023

ಕಳೆದ ವರ್ಷ ಸಂವಿಧಾನ ದಿನದ ಭಾಷಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾರಾಗೃಹಗಳಲ್ಲಿ ಕೈದಿಗಳ ದಟ್ಟಣೆ ಕಡಿಮೆ ಮಾಡಲು ಮತ್ತು ಬಡ ಕೈದಿಗಳಿಗೆ ನೆರವು ಮಾಡಲು ಸಲಹೆ ನೀಡಿದ್ದರು.

ಬಳಿಕ ಈ ಕುರಿತು ಮಾಹಿತಿ ಒದಗಿಸುವುದಂತೆ ಸುಪ್ರೀಂ ಕೋರ್ಟ್, ಎನ್‌ಎಎಲ್‌ಎಸ್‌ಎಗೆ ನಿರ್ದೇಶನ ನೀಡಿತ್ತು.

ಇನ್ನಷ್ಟು ಸುದ್ದಿಗಳು:


 


ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು