<p><strong>ಬೆಂಗಳೂರು</strong>: ‘ಅತಿಸಣ್ಣ ಮತ್ತು ಸಣ್ಣ ಉದ್ಯಮಗಳಿಗೆ ಕೇಂದ್ರ ಬಜೆಟ್ ದೃಢ ಅಡಿಪಾಯ ಹಾಕಿದೆ’ ಎಂದು ಕರ್ನಾಟಕ ಸಣ್ಣ ಕೈಗಾರಿಕಾ ಸಂಘ (ಕಾಸಿಯಾ) ಹೇಳಿದೆ.</p>.<p>‘ದೇಶದಲ್ಲಿ ತಯಾರಿಕಾ ವಲಯ ಬಲಪಡಿಸುವುದಕ್ಕೆ, ಎಂಎಸ್ಎಂಇಗಳ ವಿಸ್ತರಣೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್ ಒತ್ತು ನೀಡಿದ್ದು, ಸಮಗ್ರ ಅಭಿವೃದ್ಧಿ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ’ ಎಂದು ಕಾಸಿಯಾ ಅಧ್ಯಕ್ಷ ಬಿ.ಆರ್. ಗಣೇಶ್ ರಾವ್ ಹೇಳಿದ್ದಾರೆ.</p>.<p>ಬಜೆಟ್ನ ಕ್ರಮಗಳು ದೇಶದಾದ್ಯಂತ ಅತಿಸಣ್ಣ ಹಾಗೂ ಸಣ್ಣ ಉದ್ಯಮಗಳಿಗೆ ಪ್ರೇರಣೆ ನೀಡಲಿವೆ. ಈ ಕ್ರಮಗಳು ಉದ್ಯಮಗಳಿಗೆ ಹಣಕಾಸಿನ ನೆರವನ್ನು ಒದಗಿಸುವುದಲ್ಲದೆ, ರಫ್ತು ಮತ್ತು ತಂತ್ರಜ್ಞಾನ ಆಧಾರಿತ ಸಣ್ಣ ಉದ್ಯಮಗಳನ್ನು ಬೆಳೆಸುವ ಉದ್ದೇಶ ಹೊಂದಿದೆ ಎಂದು ತಿಳಿಸಿದ್ದಾರೆ.</p>.<p>ಕ್ಲಸ್ಟರ್ ಆಧುನೀಕರಣದ ಮೇಲೆ ಬಜೆಟ್ ನೀಡಿರುವ ಒತ್ತು ಸಣ್ಣ ಕೈಗಾರಿಕೆಗಳಿಗೆ ಹೊಸ ಅವಕಾಶಗಳನ್ನು ತೆರೆಯಬಹುದಾದರೂ ತಯಾರಿಕಾ ವೆಚ್ಚ ಕಡಿತ ಮತ್ತು ಸಾಲ ನೀಡುವ ಪ್ರಕ್ರಿಯೆಗಳ ಸುಧಾರಣೆಗೆ ಇನ್ನಷ್ಟು ಗಮನ ನೀಡುವ ಅಗತ್ಯವಿದೆ ಎಂದು ಹೇಳಿದ್ದಾರೆ.</p>.<p>ಕೇಂದ್ರ ಹಣಕಾಸು ಸಚಿವರಿಗೆ ಕಾಸಿಯಾ ಸಲ್ಲಿಸಿದ್ದ ಕೆಲವು ಸಲಹೆಗಳನ್ನು ಬಜೆಟ್ ಒಳಗೊಂಡಿಲ್ಲ. ಸಲಹೆಗಳನ್ನು ಅಂಗೀಕರಿಸಿದ್ದಲ್ಲಿ ವಿಶೇಷವಾಗಿ ತಯಾರಿಕಾ ವಲಯಕ್ಕೆ ಹೆಚ್ಚಿನ ಪ್ರೋತ್ಸಾಹ ದೊರಕುತ್ತಿತ್ತು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಅತಿಸಣ್ಣ ಮತ್ತು ಸಣ್ಣ ಉದ್ಯಮಗಳಿಗೆ ಕೇಂದ್ರ ಬಜೆಟ್ ದೃಢ ಅಡಿಪಾಯ ಹಾಕಿದೆ’ ಎಂದು ಕರ್ನಾಟಕ ಸಣ್ಣ ಕೈಗಾರಿಕಾ ಸಂಘ (ಕಾಸಿಯಾ) ಹೇಳಿದೆ.</p>.<p>‘ದೇಶದಲ್ಲಿ ತಯಾರಿಕಾ ವಲಯ ಬಲಪಡಿಸುವುದಕ್ಕೆ, ಎಂಎಸ್ಎಂಇಗಳ ವಿಸ್ತರಣೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್ ಒತ್ತು ನೀಡಿದ್ದು, ಸಮಗ್ರ ಅಭಿವೃದ್ಧಿ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ’ ಎಂದು ಕಾಸಿಯಾ ಅಧ್ಯಕ್ಷ ಬಿ.ಆರ್. ಗಣೇಶ್ ರಾವ್ ಹೇಳಿದ್ದಾರೆ.</p>.<p>ಬಜೆಟ್ನ ಕ್ರಮಗಳು ದೇಶದಾದ್ಯಂತ ಅತಿಸಣ್ಣ ಹಾಗೂ ಸಣ್ಣ ಉದ್ಯಮಗಳಿಗೆ ಪ್ರೇರಣೆ ನೀಡಲಿವೆ. ಈ ಕ್ರಮಗಳು ಉದ್ಯಮಗಳಿಗೆ ಹಣಕಾಸಿನ ನೆರವನ್ನು ಒದಗಿಸುವುದಲ್ಲದೆ, ರಫ್ತು ಮತ್ತು ತಂತ್ರಜ್ಞಾನ ಆಧಾರಿತ ಸಣ್ಣ ಉದ್ಯಮಗಳನ್ನು ಬೆಳೆಸುವ ಉದ್ದೇಶ ಹೊಂದಿದೆ ಎಂದು ತಿಳಿಸಿದ್ದಾರೆ.</p>.<p>ಕ್ಲಸ್ಟರ್ ಆಧುನೀಕರಣದ ಮೇಲೆ ಬಜೆಟ್ ನೀಡಿರುವ ಒತ್ತು ಸಣ್ಣ ಕೈಗಾರಿಕೆಗಳಿಗೆ ಹೊಸ ಅವಕಾಶಗಳನ್ನು ತೆರೆಯಬಹುದಾದರೂ ತಯಾರಿಕಾ ವೆಚ್ಚ ಕಡಿತ ಮತ್ತು ಸಾಲ ನೀಡುವ ಪ್ರಕ್ರಿಯೆಗಳ ಸುಧಾರಣೆಗೆ ಇನ್ನಷ್ಟು ಗಮನ ನೀಡುವ ಅಗತ್ಯವಿದೆ ಎಂದು ಹೇಳಿದ್ದಾರೆ.</p>.<p>ಕೇಂದ್ರ ಹಣಕಾಸು ಸಚಿವರಿಗೆ ಕಾಸಿಯಾ ಸಲ್ಲಿಸಿದ್ದ ಕೆಲವು ಸಲಹೆಗಳನ್ನು ಬಜೆಟ್ ಒಳಗೊಂಡಿಲ್ಲ. ಸಲಹೆಗಳನ್ನು ಅಂಗೀಕರಿಸಿದ್ದಲ್ಲಿ ವಿಶೇಷವಾಗಿ ತಯಾರಿಕಾ ವಲಯಕ್ಕೆ ಹೆಚ್ಚಿನ ಪ್ರೋತ್ಸಾಹ ದೊರಕುತ್ತಿತ್ತು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>