<p><strong>ನವದೆಹಲಿ:</strong> ಹೈನುಗಾರಿಕೆ, ಮೀನುಗಾರಿಕೆ, ಹಣ್ಣು, ತರಕಾರಿ ಬೆಳೆಗಳನ್ನು ಒಳಗೊಂಡ ಗರಿಷ್ಠ ಮೌಲ್ಯದ ಕೃಷಿ ವಲಯಕ್ಕೆ ಹೆಚ್ಚಿನ ಕೊಡುಗೆ ನೀಡಲಾಗಿದೆ. ಪಶುವೈದ್ಯಕೀಯ ವೃತ್ತಿಪರರು, ಆಸ್ಪತ್ರೆಗಳ ಲಭ್ಯತೆಯನ್ನು ಹೆಚ್ಚಿಸಲು ವಿಶೇಷ ಯೋಜನೆಯನ್ನು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ.</p>.<p>ಕೃಷಿ ಆದಾಯದಲ್ಲಿ ಪಶು ಸಂಗೋಪನಾ ವಲಯದಿಂದ ಶೇ 16ರಷ್ಟು ದೊರೆಯುತ್ತದೆ. ಹೀಗಾಗಿ, ಈ ವಲಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಮತ್ತೆ 20 ಸಾವಿರಕ್ಕೂ ಹೆಚ್ಚು ಪಶುವೈದ್ಯಕೀಯ ವೃತ್ತಿಪರರು ಲಭ್ಯವಾಗುವಂತೆ ಕ್ರಮಕೈಗೊಳ್ಳುವ ಯೋಜನೆ ರೂಪಿಸಲಾಗಿದೆ.</p>.<p>ಈ ಯೋಜನೆ ಅಡಿ ಪಶುವೈದ್ಯಕೀಯ ಮತ್ತು ಪ್ಯಾರಾ ಪಶುವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು, ಡಯಗ್ನಾಸ್ಟಿಕ್ ಪ್ರಯೋಗಾಲಯಗಳನ್ನು ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ.</p>.<p><strong>ಮೀನುಗಾರಿಕೆ</strong>: ವಿಶೇಷ ಆರ್ಥಿಕ ವಲಯ (ಎಸ್ಇಜೆಡ್) ಮತ್ತು ಆಳ ಸಮುದ್ರಗಳಲ್ಲಿ ಹಿಡಿಯುವ ಮೀನುಗಳ ಮೇಲೆ ಯಾವುದೇ ಸುಂಕವನ್ನು ವಿಧಿಸಲಾಗುವುದಿಲ್ಲ. ವಿದೇಶಿ ಬಂದರುಗಳಲ್ಲಿ ಈ ಮೀನುಗಳನ್ನು ಇಳಿಸುವುದನ್ನು ಸರಕುಗಳ ರಫ್ತು ಎಂದು ಪರಿಗಣಿಸಲಾಗುತ್ತದೆ. ಇದರೊಂದಿಗೆ, ವಿಶೇಷವಾಗಿ ಕರಾವಳಿಯ ರೈತರನ್ನು ಗಮನದಲ್ಲಿಟ್ಟುಕೊಂಡು ಸಬ್ಸಿಡಿ ಆಧಾರಿತ ಸಾಲ ಯೋಜನೆಗಳನ್ನೂ ಪ್ರಕಟಿಸಲಾಗಿದೆ. 500 ಕೆರೆಗಳು ಮತ್ತು ಅಮೃತ ಸರೋವರಗಳ ಸಮಗ್ರ ಅಭಿವೃದ್ಧಿಗೆ ಗಮನ ನೀಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹೈನುಗಾರಿಕೆ, ಮೀನುಗಾರಿಕೆ, ಹಣ್ಣು, ತರಕಾರಿ ಬೆಳೆಗಳನ್ನು ಒಳಗೊಂಡ ಗರಿಷ್ಠ ಮೌಲ್ಯದ ಕೃಷಿ ವಲಯಕ್ಕೆ ಹೆಚ್ಚಿನ ಕೊಡುಗೆ ನೀಡಲಾಗಿದೆ. ಪಶುವೈದ್ಯಕೀಯ ವೃತ್ತಿಪರರು, ಆಸ್ಪತ್ರೆಗಳ ಲಭ್ಯತೆಯನ್ನು ಹೆಚ್ಚಿಸಲು ವಿಶೇಷ ಯೋಜನೆಯನ್ನು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ.</p>.<p>ಕೃಷಿ ಆದಾಯದಲ್ಲಿ ಪಶು ಸಂಗೋಪನಾ ವಲಯದಿಂದ ಶೇ 16ರಷ್ಟು ದೊರೆಯುತ್ತದೆ. ಹೀಗಾಗಿ, ಈ ವಲಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಮತ್ತೆ 20 ಸಾವಿರಕ್ಕೂ ಹೆಚ್ಚು ಪಶುವೈದ್ಯಕೀಯ ವೃತ್ತಿಪರರು ಲಭ್ಯವಾಗುವಂತೆ ಕ್ರಮಕೈಗೊಳ್ಳುವ ಯೋಜನೆ ರೂಪಿಸಲಾಗಿದೆ.</p>.<p>ಈ ಯೋಜನೆ ಅಡಿ ಪಶುವೈದ್ಯಕೀಯ ಮತ್ತು ಪ್ಯಾರಾ ಪಶುವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು, ಡಯಗ್ನಾಸ್ಟಿಕ್ ಪ್ರಯೋಗಾಲಯಗಳನ್ನು ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ.</p>.<p><strong>ಮೀನುಗಾರಿಕೆ</strong>: ವಿಶೇಷ ಆರ್ಥಿಕ ವಲಯ (ಎಸ್ಇಜೆಡ್) ಮತ್ತು ಆಳ ಸಮುದ್ರಗಳಲ್ಲಿ ಹಿಡಿಯುವ ಮೀನುಗಳ ಮೇಲೆ ಯಾವುದೇ ಸುಂಕವನ್ನು ವಿಧಿಸಲಾಗುವುದಿಲ್ಲ. ವಿದೇಶಿ ಬಂದರುಗಳಲ್ಲಿ ಈ ಮೀನುಗಳನ್ನು ಇಳಿಸುವುದನ್ನು ಸರಕುಗಳ ರಫ್ತು ಎಂದು ಪರಿಗಣಿಸಲಾಗುತ್ತದೆ. ಇದರೊಂದಿಗೆ, ವಿಶೇಷವಾಗಿ ಕರಾವಳಿಯ ರೈತರನ್ನು ಗಮನದಲ್ಲಿಟ್ಟುಕೊಂಡು ಸಬ್ಸಿಡಿ ಆಧಾರಿತ ಸಾಲ ಯೋಜನೆಗಳನ್ನೂ ಪ್ರಕಟಿಸಲಾಗಿದೆ. 500 ಕೆರೆಗಳು ಮತ್ತು ಅಮೃತ ಸರೋವರಗಳ ಸಮಗ್ರ ಅಭಿವೃದ್ಧಿಗೆ ಗಮನ ನೀಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>