ಕೇಂದ್ರ ಸರ್ಕಾರದಿಂದ ನಿರೀಕ್ಷಿಸಿದ ಪ್ರಮಾಣದಲ್ಲಿ ಜಿಎಸ್ಟಿ ಪಾಲು ಬಾರದಿರುವುದು ಮತ್ತು ‘ಗ್ಯಾರಂಟಿ’ ಯೋಜನೆಗಳ ಅನುಷ್ಠಾನದ ಹೊರೆ ಇರುವ ಕಾರಣದಿಂದ, ತೆರಿಗೆ ಸಂಗ್ರಹದ ಗುರಿಯನ್ನು ಹೆಚ್ಚಿಸಲೇಬೇಕಾದ ಒತ್ತಡದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಲವು ತೆರಿಗೆ ಪ್ರಸ್ತಾವಗಳ ಮೂಲಕ ಸರ್ಕಾರದ ಖಜಾನೆಯನ್ನು ತುಂಬಿಸುವ ಯತ್ನವನ್ನು 2024–25ನೇ ಸಾಲಿನ ಬಜೆಟ್ನಲ್ಲಿ ಮಾಡಿದ್ದಾರೆ.