ಚನ್ನಪಟ್ಟಣದಲ್ಲಿ ಮಂಗಳವಾರ ಪತ್ರಕರ್ತರಿಗೆ ಪತ್ರಿಕ್ರಿಯೆ ನೀಡಿದ ಅವರು ‘ಹೊಸ ರೀತಿಯ, ಅಭಿವೃದ್ಧಿಗೆ ಪೂರಕವಾದ ಯೋಜನೆಗಳು ಬಜೆಟ್ ನಲ್ಲಿ ಇಲ್ಲ. ನದಿ ಜೋಡಣೆ ಯೋಜನೆಯನ್ನು ಕೇಂದ್ರ ಸರ್ಕಾರ ಹಲವು ವರ್ಷಗಳಿಂದಲೂ ಚರ್ಚಿಸುತ್ತಾ ಬಂದಿದ್ದು, ಈ ಬಾರಿಯ ಬಜೆಟ್ನಲ್ಲೂ ಅದನ್ನು ಪ್ರಸ್ತಾಪಿಸಿದ್ದಾರೆ ಅಷ್ಟೇ. ಅದನ್ನು ಹೊರತುಪಡಿಸಿ ಜನರಿಗೆ ಹೆಚ್ಚುವರಿ ತೆರಿಗೆಗಳ ಭಾರ ಹೊರಿಸಿಲ್ಲ ಎಂಬುದೇ ಸಮಾಧಾನದ ಸಂಗತಿ’ ಎಂದರು.