ಸಿದ್ದರಾಮಯ್ಯ ಸರ್ಕಾರ ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸುವುದಾಗಿ ಹೇಳಿ ಅನುದಾನವನ್ನೂ ಘೋಷಿಸಿತ್ತು. ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಮೈಸೂರಿನಿಂದ ರಾಮನಗರಕ್ಕೆ ಫಿಲಂ ಸಿಟಿಯನ್ನು ಸ್ಥಳಾಂತರ ಮಾಡಿತ್ತು. ಬಿ.ಎಸ್ ಯಡಿಯೂರಪ್ಪ ಸರ್ಕಾರ ರಾಮನಗರದಿಂದ ಬೆಂಗಳೂರು ಹೊರವಲಯದ ರೋರಿಚ್ ಎಸ್ಟೇಟ್ನಲ್ಲಿ ಫಿಲಂ ಸಿಟಿ ನಿರ್ಮಾಣ ಮಾಡುವುದಾಗಿ ಹೇಳಿತ್ತಾದರೂ, ಅದಕ್ಕೆ ರಾಜಕೀಯ ಮತ್ತು ಪರಿಸರ ವಲಯದಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಅದರೊಂದಿಗೆ ಫಿಲಂ ಸಿಟಿ ನಿರ್ಮಾಣದ ವಿಚಾರದಲ್ಲಿ ಅನಿಶ್ಚಿತತೆ ಮನೆ ಮಾಡಿತ್ತು.