ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಗ್ರಾಹಕರಿಗೆ ರಾಜ್ಯದ ಈರುಳ್ಳಿ: ಕೇಂದ್ರ ಸರ್ಕಾರದ ನಿರ್ಧಾರ.

ರಾಜ್ಯಕ್ಕೆ ಇಂದು ಅಂತರ್‌ ಸಚಿವಾಲಯ ತಂಡ
Last Updated 7 ನವೆಂಬರ್ 2019, 19:28 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಎರಡು ತಿಂಗಳಿಂದ ಪ್ರತಿ ಕಿಲೊ ಈರುಳ್ಳಿಗೆ ₹ 80ರಿಂದ ₹ 100 ತೆರುತ್ತಿರುವ ಗ್ರಾಹಕರಿಗೆ ನೆರವಾಗಲು ಕರ್ನಾಟಕ ಮತ್ತು ರಾಜಸ್ಥಾನಗಳಿಂದ ಈರುಳ್ಳಿ ಖರೀದಿಸಲು ಕೇಂದ್ರ ಗ್ರಾಹಕರ ವ್ಯವಹಾರಗಳ ಸಚಿವಾಲಯ ಬುಧವಾರ ನಡೆಸಿದ ಸಭೆಯಲ್ಲಿ ನಿರ್ಧರಿಸಿದೆ.

ಅಂತರ್‌ ಸಚಿವಾಲಯ ಅಧಿಕಾರಿಗಳ ಪ್ರತ್ಯೇಕ ತಂಡಗಳನ್ನು ಈ ರಾಜ್ಯಗಳಿಗೆ ಕಳುಹಿಸಲಿದ್ದು, ತಂಡದ ಜೊತೆ ತನ್ನ ಅಧಿಕಾರಿಗಳನ್ನೂ ಕಳುಹಿಸಲು ದೆಹಲಿ ಸರ್ಕಾರಕ್ಕೆ ಸೂಚಿಸಲಿದೆ.

ಭೇಟಿ ವೇಳೆ ಅಧಿಕಾರಿಗಳು ಈರುಳ್ಳಿ ವ್ಯಾಪಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಲಭ್ಯವಿರುವ ಈರುಳ್ಳಿ ಬೆಳೆಗಾರರನ್ನು ಪ್ರೋತ್ಸಾಹಿಸಲು ದರ ನಿಗದಿಪಡಿಸಲು ತಂಡಕ್ಕೆ ಸೂಚಿಸಲಾಗಿದೆ ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT