<p><strong>ಬೆಂಗಳೂರು</strong>: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ನಿಂದ (ನಬಾರ್ಡ್) ಕರ್ನಾಟಕದ ಆದ್ಯತಾ ವಲಯಕ್ಕೆ 2025–26ನೇ ಆರ್ಥಿಕ ವರ್ಷದಲ್ಲಿ ₹4.47 ಲಕ್ಷ ಕೋಟಿ ಸಾಲ ವಿತರಿಸುವ ಗುರಿ ನಿಗದಿಪಡಿಸಲಾಗಿದೆ.</p>.<p>2024–25ನೇ ಸಾಲಿನಡಿ ₹3.97 ಲಕ್ಷ ಕೋಟಿ ಸಾಲ ನಿಗದಿಪಡಿಸಲಾಗಿದೆ. ಇದಕ್ಕೆ ಹೋಲಿಸಿದರೆ ಶೇ 12.55ರಷ್ಟು ಹೆಚ್ಚಿದೆ. ವಿವಿಧ ಬ್ಯಾಂಕ್ಗಳ ಮೂಲಕ ಈ ಸಾಲ ವಿತರಣೆಗೆ ಗುರಿ ಹೊಂದಲಾಗಿದೆ.</p>.<p>ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಮಾಹಿತಿ ಸಂಗ್ರಹಿಸಿ ಆದ್ಯತಾ ವಲಯಗಳಿಗೆ ಅಗತ್ಯವಿರುವ ಆರ್ಥಿಕ ನೆರವಿನ ಕುರಿತು ನಬಾರ್ಡ್ ಸಿದ್ಧಪಡಿಸಿರುವ ಈ ಆದ್ಯತಾ ಪತ್ರವನ್ನು (ಸ್ಟೇಟ್ ಫೋಕಸ್ ಪೇಪರ್) ಮಂಗಳವಾರ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಉಮಾ ಮಹಾದೇವನ್ ಅವರು, ಬಿಡುಗಡೆಗೊಳಿಸಿದರು.</p>.<p>ಬಳಿಕ ಮಾತನಾಡಿದ ಅವರು ರೈತರು, ಮಹಿಳೆಯರು, ಎಂಎಸ್ಎಂಇ ವಲಯದ ಸಬಲೀಕರಣಕ್ಕೆ ಬ್ಯಾಂಕ್ಗಳು ಮತ್ತಷ್ಟು ಆರ್ಥಿಕ ನೆರವು ಒದಗಿಸಲು ಮುಂದಾಗಬೇಕಿದೆ ಎಂದು ಸಲಹೆ ನೀಡಿದರು.</p>.<p>ಜಲಾನಯನ, ಕೃಷಿ ಮೂಲಸೌಕರ್ಯ, ಎಂಎಸ್ಎಂಇ ವಲಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ನಬಾರ್ಡ್ ಕಾರ್ಯ ಶ್ಲಾಘನೀಯವಾದುದು ಎಂದರು.</p>.<p>ನಬಾರ್ಡ್ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಕೆ.ವಿ.ಎಸ್.ಎಸ್.ಎಲ್.ವಿ. ಪ್ರಸಾದ ರಾವ್ ಮಾತನಾಡಿ, ‘2025-26ನೇ ಆರ್ಥಿಕ ವರ್ಷಕ್ಕೆ ನಿಗದಿಪಡಿಸಿರುವ ಸಾಲದಲ್ಲಿ ಕೃಷಿಗೆ ₹2.04 ಲಕ್ಷ ಕೋಟಿ, ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗೆ (ಎಂಎಸ್ಎಂಇ) ₹1.88 ಲಕ್ಷ ಕೋಟಿ ಮತ್ತು ಇತರೆ ಆದ್ಯತೆಯ ವಲಯದ ಚಟುವಟಿಕೆಗಳಿಗೆ ₹56 ಸಾವಿರ ಕೋಟಿ ಎಂದು ನಿಗದಿಪಡಿಸಲಾಗಿದೆ’ ಎಂದು ವಿವರಿಸಿದರು.</p>.<p>ಪ್ರಸಕ್ತ ಸಾಲಿನಡಿ ರಾಜ್ಯಕ್ಕೆ ₹2,056 ಕೋಟಿ ಮೊತ್ತದ ಆರ್ಐಡಿಎಫ್ ನೆರವು ಒಳಗೊಂಡಂತೆ 298 ಗ್ರಾಮೀಣ ಮೂಲಸೌಕರ್ಯ ಯೋಜನೆಗಳನ್ನು ಮಂಜೂರು ಮಾಡಲಾಗಿದೆ ಎಂದರು.</p>.<p>ಎಸ್ಬಿಐ ಬೆಂಗಳೂರು ವೃತ್ತದ ಮುಖ್ಯ ಪ್ರಧಾನ ವ್ಯವಸ್ಥಾಪಕಿ ಜೂಹಿ ಸ್ಮಿತಾ ಸಿನ್ಹಾ ಮಾತನಾಡಿ, ‘ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ನಬಾರ್ಡ್ ಪ್ರಮುಖ ಪಾತ್ರ ವಹಿಸುತ್ತಿದೆ. ಕೃಷಿ ವಲಯದ ಅಭಿವೃದ್ಧಿಗೆ ಬ್ಯಾಂಕ್ಗಳು ವಿವಿಧ ಸಾಲ ಸೌಲಭ್ಯ ಕಲ್ಪಿಸುತ್ತಿವೆ’ ಎಂದು ಹೇಳಿದರು.</p>.<p>ಇದೇ ವೇಳೆ ನಬಾರ್ಡ್ನಿಂದ ಕೃಷಿ ಕುರಿತು ತಯಾರಿಸಿರುವ ‘ಜೀವ’ ಕಿರುಚಿತ್ರವನ್ನು ಬಿಡುಗಡೆ ಮಾಡಲಾಯಿತು.</p>.<p>ಕಾರ್ಯಕ್ರಮದಲ್ಲಿ ಆರ್ಬಿಐನ ಪ್ರಾದೇಶಿಕ ಕಚೇರಿತ ನಿರ್ದೇಶಕಿ ಸೋನಾಲಿ ಸೇನ್ ಗುಪ್ತಾ, ಕೆನರಾ ಬ್ಯಾಂಕ್ನ ಕಾರ್ಯ ನಿರ್ವಾಹಕ ನಿರ್ದೇಶಕ ಭವೇಂದ್ರ ಕುಮಾರ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ನಿಂದ (ನಬಾರ್ಡ್) ಕರ್ನಾಟಕದ ಆದ್ಯತಾ ವಲಯಕ್ಕೆ 2025–26ನೇ ಆರ್ಥಿಕ ವರ್ಷದಲ್ಲಿ ₹4.47 ಲಕ್ಷ ಕೋಟಿ ಸಾಲ ವಿತರಿಸುವ ಗುರಿ ನಿಗದಿಪಡಿಸಲಾಗಿದೆ.</p>.<p>2024–25ನೇ ಸಾಲಿನಡಿ ₹3.97 ಲಕ್ಷ ಕೋಟಿ ಸಾಲ ನಿಗದಿಪಡಿಸಲಾಗಿದೆ. ಇದಕ್ಕೆ ಹೋಲಿಸಿದರೆ ಶೇ 12.55ರಷ್ಟು ಹೆಚ್ಚಿದೆ. ವಿವಿಧ ಬ್ಯಾಂಕ್ಗಳ ಮೂಲಕ ಈ ಸಾಲ ವಿತರಣೆಗೆ ಗುರಿ ಹೊಂದಲಾಗಿದೆ.</p>.<p>ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಮಾಹಿತಿ ಸಂಗ್ರಹಿಸಿ ಆದ್ಯತಾ ವಲಯಗಳಿಗೆ ಅಗತ್ಯವಿರುವ ಆರ್ಥಿಕ ನೆರವಿನ ಕುರಿತು ನಬಾರ್ಡ್ ಸಿದ್ಧಪಡಿಸಿರುವ ಈ ಆದ್ಯತಾ ಪತ್ರವನ್ನು (ಸ್ಟೇಟ್ ಫೋಕಸ್ ಪೇಪರ್) ಮಂಗಳವಾರ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಉಮಾ ಮಹಾದೇವನ್ ಅವರು, ಬಿಡುಗಡೆಗೊಳಿಸಿದರು.</p>.<p>ಬಳಿಕ ಮಾತನಾಡಿದ ಅವರು ರೈತರು, ಮಹಿಳೆಯರು, ಎಂಎಸ್ಎಂಇ ವಲಯದ ಸಬಲೀಕರಣಕ್ಕೆ ಬ್ಯಾಂಕ್ಗಳು ಮತ್ತಷ್ಟು ಆರ್ಥಿಕ ನೆರವು ಒದಗಿಸಲು ಮುಂದಾಗಬೇಕಿದೆ ಎಂದು ಸಲಹೆ ನೀಡಿದರು.</p>.<p>ಜಲಾನಯನ, ಕೃಷಿ ಮೂಲಸೌಕರ್ಯ, ಎಂಎಸ್ಎಂಇ ವಲಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ನಬಾರ್ಡ್ ಕಾರ್ಯ ಶ್ಲಾಘನೀಯವಾದುದು ಎಂದರು.</p>.<p>ನಬಾರ್ಡ್ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಕೆ.ವಿ.ಎಸ್.ಎಸ್.ಎಲ್.ವಿ. ಪ್ರಸಾದ ರಾವ್ ಮಾತನಾಡಿ, ‘2025-26ನೇ ಆರ್ಥಿಕ ವರ್ಷಕ್ಕೆ ನಿಗದಿಪಡಿಸಿರುವ ಸಾಲದಲ್ಲಿ ಕೃಷಿಗೆ ₹2.04 ಲಕ್ಷ ಕೋಟಿ, ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗೆ (ಎಂಎಸ್ಎಂಇ) ₹1.88 ಲಕ್ಷ ಕೋಟಿ ಮತ್ತು ಇತರೆ ಆದ್ಯತೆಯ ವಲಯದ ಚಟುವಟಿಕೆಗಳಿಗೆ ₹56 ಸಾವಿರ ಕೋಟಿ ಎಂದು ನಿಗದಿಪಡಿಸಲಾಗಿದೆ’ ಎಂದು ವಿವರಿಸಿದರು.</p>.<p>ಪ್ರಸಕ್ತ ಸಾಲಿನಡಿ ರಾಜ್ಯಕ್ಕೆ ₹2,056 ಕೋಟಿ ಮೊತ್ತದ ಆರ್ಐಡಿಎಫ್ ನೆರವು ಒಳಗೊಂಡಂತೆ 298 ಗ್ರಾಮೀಣ ಮೂಲಸೌಕರ್ಯ ಯೋಜನೆಗಳನ್ನು ಮಂಜೂರು ಮಾಡಲಾಗಿದೆ ಎಂದರು.</p>.<p>ಎಸ್ಬಿಐ ಬೆಂಗಳೂರು ವೃತ್ತದ ಮುಖ್ಯ ಪ್ರಧಾನ ವ್ಯವಸ್ಥಾಪಕಿ ಜೂಹಿ ಸ್ಮಿತಾ ಸಿನ್ಹಾ ಮಾತನಾಡಿ, ‘ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ನಬಾರ್ಡ್ ಪ್ರಮುಖ ಪಾತ್ರ ವಹಿಸುತ್ತಿದೆ. ಕೃಷಿ ವಲಯದ ಅಭಿವೃದ್ಧಿಗೆ ಬ್ಯಾಂಕ್ಗಳು ವಿವಿಧ ಸಾಲ ಸೌಲಭ್ಯ ಕಲ್ಪಿಸುತ್ತಿವೆ’ ಎಂದು ಹೇಳಿದರು.</p>.<p>ಇದೇ ವೇಳೆ ನಬಾರ್ಡ್ನಿಂದ ಕೃಷಿ ಕುರಿತು ತಯಾರಿಸಿರುವ ‘ಜೀವ’ ಕಿರುಚಿತ್ರವನ್ನು ಬಿಡುಗಡೆ ಮಾಡಲಾಯಿತು.</p>.<p>ಕಾರ್ಯಕ್ರಮದಲ್ಲಿ ಆರ್ಬಿಐನ ಪ್ರಾದೇಶಿಕ ಕಚೇರಿತ ನಿರ್ದೇಶಕಿ ಸೋನಾಲಿ ಸೇನ್ ಗುಪ್ತಾ, ಕೆನರಾ ಬ್ಯಾಂಕ್ನ ಕಾರ್ಯ ನಿರ್ವಾಹಕ ನಿರ್ದೇಶಕ ಭವೇಂದ್ರ ಕುಮಾರ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>