ಇತ್ತೀಚೆಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ಸಂದರ್ಭ ಗಮನಿಸಿದ ಅಂಶಗಳನ್ನು ವಿದ್ಯಾರ್ಥಿಗಳ ಜೊತೆಗೆ ಹಂಚಿಕೊಂಡರು. 'ಸಮಾಜಕ್ಕೆ ನಿಮ್ಮ (ವಿದ್ಯಾರ್ಥಿಗಳ) ಕೊಡುಗೆ ಬೇಕಿದೆ. ಭಾರತದಲ್ಲೀಗ ತೀವ್ರ ಸಂಕಷ್ಟದ ಸ್ಥಿತಿಯಿದೆ. ನಾನು ಪಶ್ಚಿಮ ಬಂಗಾಳದ ಗ್ರಾಮೀಣ ಪ್ರದೇಶದಲ್ಲಿ ಕೆಲವು ಸಮಯ ಕಳೆದಿದ್ದೆ. ಅಭಿವೃದ್ಧಿಯ ಕನಸು ಕಟ್ಟಿಕೊಂಡವರು ಸಂಕಷ್ಟದಲ್ಲಿದ್ದಾರೆ. ಸಣ್ಣ ವ್ಯಾಪಾರಿಗಳು ಮತ್ತಷ್ಟು ಸಣ್ಣವರಾಗಿದ್ದಾರೆ' ಎಂದರು.