<p><strong>ನವದೆಹಲಿ:</strong> ‘ಅಪಘಾತ ನಡೆಸಿ ಪರಾರಿ’ಯಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾರಿಯಾಗಲಿರುವ ಹೊಸ ಕಾನೂನು ವಿರೋಧಿಸಿ ದೇಶದ ವಿವಿಧ ರಾಜ್ಯಗಳಲ್ಲಿ ಟ್ರಕ್, ಟ್ಯಾಂಕರ್ ಮತ್ತು ವಾಣಿಜ್ಯ ವಾಹನಗಳ ಚಾಲಕರು ನಡೆಸುತ್ತಿರುವ ಪ್ರತಿಭಟನೆಯು ಎರಡನೇ ದಿನವಾದ ಮಂಗಳವಾರ ತೀವ್ರಗೊಂಡಿದೆ.</p>.<p>ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರದ ವಿವಿಧೆಡೆ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಸರಕು ಸಾಗಣೆ ಸೇವೆಯು ಅಸ್ತವ್ಯಸ್ತಗೊಂಡಿದೆ.</p>.<p>ಈ ಪ್ರದೇಶಗಳ ವ್ಯಾಪ್ತಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇಂಧನದ ಅಭಾವ ತಲೆದೋರಬಹುದು ಎಂಬ ಭೀತಿಯಿಂದ ಪೆಟ್ರೋಲ್ ಬಂಕ್ಗಳ ಬಳಿ ಖರೀದಿಗೆ ಗ್ರಾಹಕರ ನೂಕುನುಗ್ಗಲು ಉಂಟಾಗಿತ್ತು. </p>.<p>‘ಪಶ್ಚಿಮ ಮತ್ತು ಉತ್ತರ ಭಾರತ ಭಾಗದ ಎರಡು ಸಾವಿರಕ್ಕೂ ಹೆಚ್ಚು ಪೆಟ್ರೋಲ್ ಬಂಕ್ಗಳಲ್ಲಿ ದಾಸ್ತಾನು ಖಾಲಿಯಾಗಿದ್ದು, ಗ್ರಾಹಕರು ಪರದಾಡುವಂತಾಗಿದೆ’ ಎಂದು ಸಾರಿಗೆ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕೆಲವು ಬಂಕ್ಗಳ ಮುಂಭಾಗ ‘ಇಂಧನ ಖಾಲಿಯಾಗಿದೆ’ ಎಂದು ಬರೆದಿರುವ ಫಲಕಗಳನ್ನು ತೂಗು ಹಾಕಲಾಗಿತ್ತು. </p>.<p>ದೇಶದಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಂದ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಸಿಲಿಂಡರ್ ಪೂರೈಸುವ ಒಂದು ಲಕ್ಷಕ್ಕೂ ಹೆಚ್ಚು ಟ್ರಕ್ ಮತ್ತು ಟ್ಯಾಂಕರ್ಗಳಿವೆ.</p>.<p>ಬುಧವಾರವರೆಗೆ ಹೋರಾಟ ನಡೆಸಲು ಚಾಲಕರು ನಿರ್ಧರಿಸಿದ್ದಾರೆ. ಅಲ್ಲದೇ, ಹೋರಾಟವು ರಾಷ್ಟ್ರ ವ್ಯಾಪಿ ವಿಸ್ತರಣೆಯಾಗುವ ಸಾಧ್ಯತೆಯಿದೆ. ಅನಿರ್ದಿಷ್ಟಾವಧಿವರೆಗೆ ಮುಂದುವರಿದರೆ ತರಕಾರಿ, ಹಣ್ಣುಗಳು, ಹಾಲು ಪೂರೈಕೆಯಲ್ಲಿ ವ್ಯತ್ಯಯವಾಗಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಲಾರಿ ಚಾಲಕರ ಸಂಘವಾದ ಆಲ್ ಇಂಡಿಯಾ ಮೋಟರ್ ಟ್ರಾನ್ಸ್ಪೋರ್ಟ್ ಅಸೋಸಿಯೇಷನ್ ದೇಶದಾದ್ಯಂತ ಹೋರಾಟಕ್ಕೆ ಕರೆ ನೀಡಿಲ್ಲ. ಗೃಹ ಸಚಿವಾಲಯದ ಅಧಿಕಾರಿಗಳ ಸಭೆಯಲ್ಲಿ ಚಾಲಕರ ಸಮಸ್ಯೆ ಮಂಡಿಸಿ ಪರಿಹಾರ ಕೋರಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p><strong>ರಾಜಸ್ಥಾನ:</strong> ಪೊಲೀಸ್ ವಾಹನಕ್ಕೆ ಬೆಂಕಿ ರಾಜಸ್ಥಾನದ ಕೆಕ್ರಿ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು ಉದ್ರಿಕ್ತ ಗುಂಪೊಂದು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದೆ. ಈ ವೇಳೆ ನಡೆದ ಕಲ್ಲು ತೂರಾಟದಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಅಪಘಾತ ನಡೆಸಿ ಪರಾರಿ’ಯಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾರಿಯಾಗಲಿರುವ ಹೊಸ ಕಾನೂನು ವಿರೋಧಿಸಿ ದೇಶದ ವಿವಿಧ ರಾಜ್ಯಗಳಲ್ಲಿ ಟ್ರಕ್, ಟ್ಯಾಂಕರ್ ಮತ್ತು ವಾಣಿಜ್ಯ ವಾಹನಗಳ ಚಾಲಕರು ನಡೆಸುತ್ತಿರುವ ಪ್ರತಿಭಟನೆಯು ಎರಡನೇ ದಿನವಾದ ಮಂಗಳವಾರ ತೀವ್ರಗೊಂಡಿದೆ.</p>.<p>ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರದ ವಿವಿಧೆಡೆ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಸರಕು ಸಾಗಣೆ ಸೇವೆಯು ಅಸ್ತವ್ಯಸ್ತಗೊಂಡಿದೆ.</p>.<p>ಈ ಪ್ರದೇಶಗಳ ವ್ಯಾಪ್ತಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇಂಧನದ ಅಭಾವ ತಲೆದೋರಬಹುದು ಎಂಬ ಭೀತಿಯಿಂದ ಪೆಟ್ರೋಲ್ ಬಂಕ್ಗಳ ಬಳಿ ಖರೀದಿಗೆ ಗ್ರಾಹಕರ ನೂಕುನುಗ್ಗಲು ಉಂಟಾಗಿತ್ತು. </p>.<p>‘ಪಶ್ಚಿಮ ಮತ್ತು ಉತ್ತರ ಭಾರತ ಭಾಗದ ಎರಡು ಸಾವಿರಕ್ಕೂ ಹೆಚ್ಚು ಪೆಟ್ರೋಲ್ ಬಂಕ್ಗಳಲ್ಲಿ ದಾಸ್ತಾನು ಖಾಲಿಯಾಗಿದ್ದು, ಗ್ರಾಹಕರು ಪರದಾಡುವಂತಾಗಿದೆ’ ಎಂದು ಸಾರಿಗೆ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕೆಲವು ಬಂಕ್ಗಳ ಮುಂಭಾಗ ‘ಇಂಧನ ಖಾಲಿಯಾಗಿದೆ’ ಎಂದು ಬರೆದಿರುವ ಫಲಕಗಳನ್ನು ತೂಗು ಹಾಕಲಾಗಿತ್ತು. </p>.<p>ದೇಶದಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಂದ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಸಿಲಿಂಡರ್ ಪೂರೈಸುವ ಒಂದು ಲಕ್ಷಕ್ಕೂ ಹೆಚ್ಚು ಟ್ರಕ್ ಮತ್ತು ಟ್ಯಾಂಕರ್ಗಳಿವೆ.</p>.<p>ಬುಧವಾರವರೆಗೆ ಹೋರಾಟ ನಡೆಸಲು ಚಾಲಕರು ನಿರ್ಧರಿಸಿದ್ದಾರೆ. ಅಲ್ಲದೇ, ಹೋರಾಟವು ರಾಷ್ಟ್ರ ವ್ಯಾಪಿ ವಿಸ್ತರಣೆಯಾಗುವ ಸಾಧ್ಯತೆಯಿದೆ. ಅನಿರ್ದಿಷ್ಟಾವಧಿವರೆಗೆ ಮುಂದುವರಿದರೆ ತರಕಾರಿ, ಹಣ್ಣುಗಳು, ಹಾಲು ಪೂರೈಕೆಯಲ್ಲಿ ವ್ಯತ್ಯಯವಾಗಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಲಾರಿ ಚಾಲಕರ ಸಂಘವಾದ ಆಲ್ ಇಂಡಿಯಾ ಮೋಟರ್ ಟ್ರಾನ್ಸ್ಪೋರ್ಟ್ ಅಸೋಸಿಯೇಷನ್ ದೇಶದಾದ್ಯಂತ ಹೋರಾಟಕ್ಕೆ ಕರೆ ನೀಡಿಲ್ಲ. ಗೃಹ ಸಚಿವಾಲಯದ ಅಧಿಕಾರಿಗಳ ಸಭೆಯಲ್ಲಿ ಚಾಲಕರ ಸಮಸ್ಯೆ ಮಂಡಿಸಿ ಪರಿಹಾರ ಕೋರಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p><strong>ರಾಜಸ್ಥಾನ:</strong> ಪೊಲೀಸ್ ವಾಹನಕ್ಕೆ ಬೆಂಕಿ ರಾಜಸ್ಥಾನದ ಕೆಕ್ರಿ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು ಉದ್ರಿಕ್ತ ಗುಂಪೊಂದು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದೆ. ಈ ವೇಳೆ ನಡೆದ ಕಲ್ಲು ತೂರಾಟದಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>