<p><strong>ನವದೆಹಲಿ</strong>: ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ಬಾಕಿ ಉಳಿಸಿಕೊಂಡಿರುವ ಜಿಎಸ್ಟಿ ಪರಿಹಾರ ಮೊತ್ತದಲ್ಲಿ ಕರ್ನಾಟಕ ರಾಜ್ಯಕ್ಕೆ ₹ 3,528 ಕೋಟಿ ಬರಬೇಕಿದೆ. ಅತಿ ಹೆಚ್ಚಿನ ಬಾಕಿ ಮಹಾರಾಷ್ಟ್ರಕ್ಕೆ ಬರಬೇಕಿದೆ.</p>.<p>ಸೆಪ್ಟೆಂಬರ್ ತಿಂಗಳ ಅಂತ್ಯದವರೆಗಿನ ಮಾಹಿತಿಯ ಪ್ರಕಾರ, ಕೇಂದ್ರ ಸರ್ಕಾರವು ರಾಜ್ಯಗಳಿಗೆ ನೀಡಬೇಕಿರುವ ಜಿಎಸ್ಟಿ ಪರಿಹಾರದ ಬಾಕಿ ಮೊತ್ತವು ಒಟ್ಟು₹ 51,798 ಕೋಟಿಗಳಷ್ಟಿದೆಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ಲೋಕಸಭೆಗೆ ಮಾಹಿತಿ ನೀಡಿದ್ದಾರೆ.</p>.<p>2020–21ರಲ್ಲಿ ₹ 1.10 ಲಕ್ಷ ಕೋಟಿ ಹಾಗೂ 2021–22ರಲ್ಲಿ ₹ 1.59 ಲಕ್ಷ ಕೋಟಿ ಜಿಎಸ್ಟಿ ಪರಿಹಾರ ಮೊತ್ತವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಕೋವಿಡ್ ಸಾಂಕ್ರಾಮಿಕದಿಂದಾಗಿ ಜಿಎಸ್ಟಿ ಸಂಗ್ರಹ ಕಡಿಮೆ ಆಗಿದ್ದರಿಂದ ಹೆಚ್ಚಿನ ಪ್ರಮಾಣದ ಜಿಎಸ್ಟಿ ಪರಿಹಾರ ಮೊತ್ತದ ಅಗತ್ಯ ಎದುರಾಗಿದೆ. ಇದೇ ವೇಳೆ ಜಿಎಸ್ಟಿ ಪರಿಹಾರ ಸೆಸ್ ಸಂಗ್ರಹವೂ ಕಡಿಮೆ ಆಗಿದೆ ಎಂದು ಹೇಳಿದ್ದಾರೆ.</p>.<p><strong>ಪ್ರಮುಖ ರಾಜ್ಯಗಳಿಗೆ ಬರಬೇಕಿರುವುದು (₹ ಕೋಟಿಗಳಲ್ಲಿ)</strong></p>.<p>ಮಹಾರಾಷ್ಟ್ರ; 13,153</p>.<p>ಉತ್ತರ ಪ್ರದೇಶ; 5,441</p>.<p>ತಮಿಳುನಾಡು; 4,943</p>.<p>ದೆಹಲಿ; 4,647</p>.<p>ಕರ್ನಾಟಕ; 3,528</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ಬಾಕಿ ಉಳಿಸಿಕೊಂಡಿರುವ ಜಿಎಸ್ಟಿ ಪರಿಹಾರ ಮೊತ್ತದಲ್ಲಿ ಕರ್ನಾಟಕ ರಾಜ್ಯಕ್ಕೆ ₹ 3,528 ಕೋಟಿ ಬರಬೇಕಿದೆ. ಅತಿ ಹೆಚ್ಚಿನ ಬಾಕಿ ಮಹಾರಾಷ್ಟ್ರಕ್ಕೆ ಬರಬೇಕಿದೆ.</p>.<p>ಸೆಪ್ಟೆಂಬರ್ ತಿಂಗಳ ಅಂತ್ಯದವರೆಗಿನ ಮಾಹಿತಿಯ ಪ್ರಕಾರ, ಕೇಂದ್ರ ಸರ್ಕಾರವು ರಾಜ್ಯಗಳಿಗೆ ನೀಡಬೇಕಿರುವ ಜಿಎಸ್ಟಿ ಪರಿಹಾರದ ಬಾಕಿ ಮೊತ್ತವು ಒಟ್ಟು₹ 51,798 ಕೋಟಿಗಳಷ್ಟಿದೆಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ಲೋಕಸಭೆಗೆ ಮಾಹಿತಿ ನೀಡಿದ್ದಾರೆ.</p>.<p>2020–21ರಲ್ಲಿ ₹ 1.10 ಲಕ್ಷ ಕೋಟಿ ಹಾಗೂ 2021–22ರಲ್ಲಿ ₹ 1.59 ಲಕ್ಷ ಕೋಟಿ ಜಿಎಸ್ಟಿ ಪರಿಹಾರ ಮೊತ್ತವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಕೋವಿಡ್ ಸಾಂಕ್ರಾಮಿಕದಿಂದಾಗಿ ಜಿಎಸ್ಟಿ ಸಂಗ್ರಹ ಕಡಿಮೆ ಆಗಿದ್ದರಿಂದ ಹೆಚ್ಚಿನ ಪ್ರಮಾಣದ ಜಿಎಸ್ಟಿ ಪರಿಹಾರ ಮೊತ್ತದ ಅಗತ್ಯ ಎದುರಾಗಿದೆ. ಇದೇ ವೇಳೆ ಜಿಎಸ್ಟಿ ಪರಿಹಾರ ಸೆಸ್ ಸಂಗ್ರಹವೂ ಕಡಿಮೆ ಆಗಿದೆ ಎಂದು ಹೇಳಿದ್ದಾರೆ.</p>.<p><strong>ಪ್ರಮುಖ ರಾಜ್ಯಗಳಿಗೆ ಬರಬೇಕಿರುವುದು (₹ ಕೋಟಿಗಳಲ್ಲಿ)</strong></p>.<p>ಮಹಾರಾಷ್ಟ್ರ; 13,153</p>.<p>ಉತ್ತರ ಪ್ರದೇಶ; 5,441</p>.<p>ತಮಿಳುನಾಡು; 4,943</p>.<p>ದೆಹಲಿ; 4,647</p>.<p>ಕರ್ನಾಟಕ; 3,528</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>