<p><strong>ಜೈಪುರ</strong>: ರಾಜಸ್ಥಾನದಲ್ಲಿ ಮುಂದಿನ ಐದರಿಂದ ಏಳು ವರ್ಷಗಳಲ್ಲಿ ₹65 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ಉದ್ಯಮಿ ಗೌತಮ್ ಅದಾನಿ ಶುಕ್ರವಾರ ತಿಳಿಸಿದ್ದಾರೆ.</p>.<p>10 ಸಾವಿರ ಮೆಗಾವಾಟ್ ಸಾಮರ್ಥ್ಯದ ಸೌರ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆಗಾಗಿ ₹50 ಸಾವಿರ ಕೋಟಿ ಹೂಡಿಕೆ ಮಾಡಲಾಗುತ್ತಿದೆ. ಸಿಮೆಂಟ್ ತಯಾರಿಕಾ ಸಾಮರ್ಥ್ಯವನ್ನು ದುಪ್ಪಟ್ಟು ಮಾಡಲು ₹7 ಸಾವಿರ ಕೋಟಿ ಹೂಡಿಕೆ ಮಾಡಲಾಗುವುದು ಎಂದು ಅವರು ವಿವರಿಸಿದರು.</p>.<p>ಜೈಪುರದ ವಿಮಾನನಿಲ್ದಾಣ ಮೇಲ್ದರ್ಜೆಗೇರಿಸಲು, ವಾಹನಗಳಿಗೆ ಸಿಎನ್ಜಿ ಪೂರೈಕೆ ಮಾಡಲು ಅಗತ್ಯವಾದ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಹಾಗೂ ಮನೆಗಳಿಗೆ ಮತ್ತು ಕೈಗಾರಿಕೆಗಳಿಗೆ ಕೊಳವೆ ಮಾರ್ಗದ ಮೂಲಕ ಅನಿಲ ಪೂರೈಕೆ ಮಾಡುವ ನಿಟ್ಟಿನಲ್ಲಿಯೂ ಹೂಡಿಕೆ ಮಾಡಲಾಗುವುದು ಎಂದರು.</p>.<p>ರಾಜಸ್ಥಾನ ಹೂಡಿಕೆ ಸಮಾವೇಶದಲ್ಲಿ ಮಾತನಾಡಿದ ಅವರು, ಅದಾನಿ ಸಮೂಹವು ಈಗಾಗಲೇ ರಾಜ್ಯದಲ್ಲಿ ಬಲವಾಗಿ ನೆಲೆಯೂರಿದೆ. ಉಷ್ಣ ವಿದ್ಯುತ್ ಸ್ಥಾವರ ಹೊಂದಿದೆ. ಸೋಲಾರ್ ಪಾರ್ಕ್ ಸ್ಥಾಪಿಸಲಾಗಿದೆ. ರಾಜ್ಯದ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಕಲ್ಲಿದ್ದಲು ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ರಾಜಸ್ಥಾನದಲ್ಲಿ ಮುಂದಿನ ಐದರಿಂದ ಏಳು ವರ್ಷಗಳಲ್ಲಿ ₹65 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ಉದ್ಯಮಿ ಗೌತಮ್ ಅದಾನಿ ಶುಕ್ರವಾರ ತಿಳಿಸಿದ್ದಾರೆ.</p>.<p>10 ಸಾವಿರ ಮೆಗಾವಾಟ್ ಸಾಮರ್ಥ್ಯದ ಸೌರ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆಗಾಗಿ ₹50 ಸಾವಿರ ಕೋಟಿ ಹೂಡಿಕೆ ಮಾಡಲಾಗುತ್ತಿದೆ. ಸಿಮೆಂಟ್ ತಯಾರಿಕಾ ಸಾಮರ್ಥ್ಯವನ್ನು ದುಪ್ಪಟ್ಟು ಮಾಡಲು ₹7 ಸಾವಿರ ಕೋಟಿ ಹೂಡಿಕೆ ಮಾಡಲಾಗುವುದು ಎಂದು ಅವರು ವಿವರಿಸಿದರು.</p>.<p>ಜೈಪುರದ ವಿಮಾನನಿಲ್ದಾಣ ಮೇಲ್ದರ್ಜೆಗೇರಿಸಲು, ವಾಹನಗಳಿಗೆ ಸಿಎನ್ಜಿ ಪೂರೈಕೆ ಮಾಡಲು ಅಗತ್ಯವಾದ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಹಾಗೂ ಮನೆಗಳಿಗೆ ಮತ್ತು ಕೈಗಾರಿಕೆಗಳಿಗೆ ಕೊಳವೆ ಮಾರ್ಗದ ಮೂಲಕ ಅನಿಲ ಪೂರೈಕೆ ಮಾಡುವ ನಿಟ್ಟಿನಲ್ಲಿಯೂ ಹೂಡಿಕೆ ಮಾಡಲಾಗುವುದು ಎಂದರು.</p>.<p>ರಾಜಸ್ಥಾನ ಹೂಡಿಕೆ ಸಮಾವೇಶದಲ್ಲಿ ಮಾತನಾಡಿದ ಅವರು, ಅದಾನಿ ಸಮೂಹವು ಈಗಾಗಲೇ ರಾಜ್ಯದಲ್ಲಿ ಬಲವಾಗಿ ನೆಲೆಯೂರಿದೆ. ಉಷ್ಣ ವಿದ್ಯುತ್ ಸ್ಥಾವರ ಹೊಂದಿದೆ. ಸೋಲಾರ್ ಪಾರ್ಕ್ ಸ್ಥಾಪಿಸಲಾಗಿದೆ. ರಾಜ್ಯದ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಕಲ್ಲಿದ್ದಲು ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>