<p><strong>ನವದೆಹಲಿ: </strong>ಭಾರತವು ಕೋವಿಡ್ ಪರಿಸ್ಥಿತಿ ನಿಭಾಯಿಸಿದ ಬಗೆಯನ್ನು ಸಮರ್ಥಿಸಿಕೊಂಡಿರುವ ಉದ್ಯಮಿ ಗೌತಮ್ ಅದಾನಿ, ‘ಮಾಧ್ಯಮ ವರದಿಗಳು ಪತ್ರಿಕಾ ಸ್ವಾತಂತ್ರ್ಯದ ಹೆಸರಿನಲ್ಲಿ ಪಕ್ಷಪಾತಿಯಾಗಿ ಇರಬಾರದು, ದೇಶದ ಘನತೆಗೆ ಕುಂದುತರುವಂತೆಯೂ ಇರಬಾರದು’ ಎಂದು ಹೇಳಿದ್ದಾರೆ.</p>.<p>ಯುರೋಪ್, ಉತ್ತರ ಅಮೆರಿಕಾ ಮತ್ತು ಓಷ್ಯಾನಿಯಾಗಿಂತ ಹೆಚ್ಚಿನ ಜನಸಂಖ್ಯೆ ಇರುವ ದೇಶವು ಕೋವಿಡ್ ಬಿಕ್ಕಟ್ಟನ್ನು ಎಷ್ಟು ಸಮರ್ಥವಾಗಿ ನಿಭಾಯಿಸಿತು ಎಂಬುದನ್ನು ತಪ್ಪು ಹುಡುಕುವ ಭರದಲ್ಲಿ ಅಲಕ್ಷಿಸಲಾಯಿತು ಎಂದು ಅವರು ಹೇಳಿದ್ದಾರೆ.</p>.<p>‘ಕೆಲವು ವಿಚಾರಗಳಲ್ಲಿ ನಾವು ಇನ್ನಷ್ಟು ಉತ್ತಮವಾಗಿ ಕೆಲಸ ಮಾಡಬಹುದಿತ್ತೇನೋ. ಆದರೆ ಈ ದೇಶದ ಜನಸಂಖ್ಯೆ ಹೆಚ್ಚಿರುವ ಕಾರಣದಿಂದಾಗಿ, ಕೋವಿಡ್ ಸಾಂಕ್ರಾಮಿಕವು ಭಾರತಕ್ಕೆ ತಂದಿತ್ತ ಸವಾಲು ಇತರ ದೇಶಗಳಿಗೆ ಎದುರಾದ ಸವಾಲಿಗಿಂತ ದೊಡ್ಡದಾಗಿತ್ತು’ ಎಂದು ಅದಾನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>ಅದಾನಿ ಅವರು ತಮ್ಮ ಸಮೂಹದ ಮಾಧ್ಯಮ ಚಟುವಟಿಕೆಗಳನ್ನು ನಿಭಾಯಿಸಲು ಹಿರಿಯ ಪತ್ರಕರ್ತ ಸಂಜಯ್ ಪುಗಾಲಿಯಾ ಅವರನ್ನು ಈಚೆಗೆ ನೇಮಕ ಮಾಡಿಕೊಂಡಿದ್ದಾರೆ. ಅದಾನಿ ಸಮೂಹವು ಟಿ.ವಿ. ಹಾಗೂ ಡಿಜಿಟಲ್ ಮಾಧ್ಯಮ ಕ್ಷೇತ್ರವನ್ನು ಪ್ರವೇಶಿಸಬಹುದು ಎಂಬ ಊಹಾಪೋಹಗಳು ಇದರಿಂದಾಗಿ ಸೃಷ್ಟಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಭಾರತವು ಕೋವಿಡ್ ಪರಿಸ್ಥಿತಿ ನಿಭಾಯಿಸಿದ ಬಗೆಯನ್ನು ಸಮರ್ಥಿಸಿಕೊಂಡಿರುವ ಉದ್ಯಮಿ ಗೌತಮ್ ಅದಾನಿ, ‘ಮಾಧ್ಯಮ ವರದಿಗಳು ಪತ್ರಿಕಾ ಸ್ವಾತಂತ್ರ್ಯದ ಹೆಸರಿನಲ್ಲಿ ಪಕ್ಷಪಾತಿಯಾಗಿ ಇರಬಾರದು, ದೇಶದ ಘನತೆಗೆ ಕುಂದುತರುವಂತೆಯೂ ಇರಬಾರದು’ ಎಂದು ಹೇಳಿದ್ದಾರೆ.</p>.<p>ಯುರೋಪ್, ಉತ್ತರ ಅಮೆರಿಕಾ ಮತ್ತು ಓಷ್ಯಾನಿಯಾಗಿಂತ ಹೆಚ್ಚಿನ ಜನಸಂಖ್ಯೆ ಇರುವ ದೇಶವು ಕೋವಿಡ್ ಬಿಕ್ಕಟ್ಟನ್ನು ಎಷ್ಟು ಸಮರ್ಥವಾಗಿ ನಿಭಾಯಿಸಿತು ಎಂಬುದನ್ನು ತಪ್ಪು ಹುಡುಕುವ ಭರದಲ್ಲಿ ಅಲಕ್ಷಿಸಲಾಯಿತು ಎಂದು ಅವರು ಹೇಳಿದ್ದಾರೆ.</p>.<p>‘ಕೆಲವು ವಿಚಾರಗಳಲ್ಲಿ ನಾವು ಇನ್ನಷ್ಟು ಉತ್ತಮವಾಗಿ ಕೆಲಸ ಮಾಡಬಹುದಿತ್ತೇನೋ. ಆದರೆ ಈ ದೇಶದ ಜನಸಂಖ್ಯೆ ಹೆಚ್ಚಿರುವ ಕಾರಣದಿಂದಾಗಿ, ಕೋವಿಡ್ ಸಾಂಕ್ರಾಮಿಕವು ಭಾರತಕ್ಕೆ ತಂದಿತ್ತ ಸವಾಲು ಇತರ ದೇಶಗಳಿಗೆ ಎದುರಾದ ಸವಾಲಿಗಿಂತ ದೊಡ್ಡದಾಗಿತ್ತು’ ಎಂದು ಅದಾನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>ಅದಾನಿ ಅವರು ತಮ್ಮ ಸಮೂಹದ ಮಾಧ್ಯಮ ಚಟುವಟಿಕೆಗಳನ್ನು ನಿಭಾಯಿಸಲು ಹಿರಿಯ ಪತ್ರಕರ್ತ ಸಂಜಯ್ ಪುಗಾಲಿಯಾ ಅವರನ್ನು ಈಚೆಗೆ ನೇಮಕ ಮಾಡಿಕೊಂಡಿದ್ದಾರೆ. ಅದಾನಿ ಸಮೂಹವು ಟಿ.ವಿ. ಹಾಗೂ ಡಿಜಿಟಲ್ ಮಾಧ್ಯಮ ಕ್ಷೇತ್ರವನ್ನು ಪ್ರವೇಶಿಸಬಹುದು ಎಂಬ ಊಹಾಪೋಹಗಳು ಇದರಿಂದಾಗಿ ಸೃಷ್ಟಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>