ಅದಾನಿ ಸಮೂಹದ ಷೇರುಗಳ ಮೌಲ್ಯವು ಕೃತಕವಾಗಿ ಕುಸಿಯುವಂತೆ ಮಾಡಿ ಮುಗ್ಧ ಹೂಡಿಕೆದಾರರನ್ನು ಶೋಷಿಸಲಾಗಿದೆ ಎಂದು ಆರೋಪಿಸಿ ಸಲ್ಲಿಕೆ ಆಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೂಡಿಕೆದಾರರ ಹಿತರಕ್ಷಣೆ ಮಾಡುವ ಸಂಬಂಧ ಕೇಂದ್ರ ಮತ್ತು ಸೆಬಿ ಅಭಿಪ್ರಾಯ ಕೇಳಿದೆ. ಈ ಕುರಿತು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವೆ, ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಏನನ್ನು ಹೇಳಲಿದೆ ಎಂದು ನಾನು ಬಹಿರಂಗಪಡಿಸುವುದಿಲ್ಲ ಎಂದಿದ್ದಾರೆ. ದೇಶದ ನಿಯಂತ್ರಣ ಸಂಸ್ಥೆಗಳಿಗೆ ಉತ್ತಮ ಅನುಭವ ಇದ್ದು ತಮ್ಮ ಕಾರ್ಯ ಕ್ಷೇತ್ರದಲ್ಲಿ ಪರಿಣತಿಯನ್ನೂ ಹೊಂದಿವೆ ಎಂದು ಹೇಳಿದ್ದಾರೆ.