<p><strong>ನವದೆಹಲಿ:</strong> ಹೊಂದಾಣಿಕೆ ಮಾಡಿದ ಒಟ್ಟು ವರಮಾನದ (ಎಜಿಆರ್) ಬಾಕಿ ಮೊತ್ತಕ್ಕೆ ಸಂಬಂಧಿಸಿದಂತೆ ತನ್ನ ತೀರ್ಪನ್ನು ಉಲ್ಲಂಘಿಸಿದರೆ ನ್ಯಾಯಾಂಗ ನಿಂದನೆಗೆ ಗುರಿಯಾಗಬೇಕಾದೀತು ಎಂದುಸುಪ್ರೀಂಕೋರ್ಟ್ ಬುಧವಾರ ಕೇಂದ್ರ ಸರ್ಕಾರ ಮತ್ತು ಮೊಬೈಲ್ ಕಂಪನಿಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಿದೆ.</p>.<p>‘ಎಜಿಆರ್’ ಬಾಕಿ ಪಾವತಿಯ ಕುರಿತಾಗಿ ಮೊಬೈಲ್ ಕಂಪನಿಗಳು ಒಟ್ಟಾರೆ ₹ 1.47 ಲಕ್ಷ ಕೋಟಿ ಬಾಕಿ ಪಾವತಿಸುವಂತೆ ಸುಪ್ರೀಂಕೋರ್ಟ್ ಅಕ್ಟೋಬರ್ 24ರ ತೀರ್ಪಿನಲ್ಲಿ ಆದೇಶಿಸಿತ್ತು. ಆದರೆ, ಬಾಕಿ ಮೊತ್ತದ ಬಗ್ಗೆ ಕಂಪನಿಗಳೇ ಖುದ್ದು ಲೆಕ್ಕಾಚಾರ ಹಾಕಿರುವ ಮಾಹಿತಿಯನ್ನು ಸರ್ಕಾರಕ್ಕೆ ನೀಡಿವೆ. ಈ ಕುರಿತು ಸುಪ್ರೀಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ಕಂಪನಿಗಳಿಗೆ ಖುದ್ದು ಲೆಕ್ಕಾಚಾರ ಹಾಕಲು ಅನುಮತಿ ನೀಡಿರುವ ದೂರಸಂಪರ್ಕ ಇಲಾಖೆಯ ಕಾರ್ಯದರ್ಶಿಗಳು ಮತ್ತು ಅಧಿಕಾರಿಗಳಿಗೆ ಸಮನ್ಸ್ ನೀಡಲಾಗುವುದು. ಕೋರ್ಟ್ ತೀರ್ಪುಗೆ ವಿರುದ್ಧವಾಗಿ ಕಂಪನಿಗಳು ತಮ್ಮ ಲೆಕ್ಕಾಚಾರವನ್ನು ಮುಂದಿಡುವ ಮೂಲಕ ಗಂಭೀರವಾದ ವಂಚನೆ ಎಸಗಿವೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹೊಂದಾಣಿಕೆ ಮಾಡಿದ ಒಟ್ಟು ವರಮಾನದ (ಎಜಿಆರ್) ಬಾಕಿ ಮೊತ್ತಕ್ಕೆ ಸಂಬಂಧಿಸಿದಂತೆ ತನ್ನ ತೀರ್ಪನ್ನು ಉಲ್ಲಂಘಿಸಿದರೆ ನ್ಯಾಯಾಂಗ ನಿಂದನೆಗೆ ಗುರಿಯಾಗಬೇಕಾದೀತು ಎಂದುಸುಪ್ರೀಂಕೋರ್ಟ್ ಬುಧವಾರ ಕೇಂದ್ರ ಸರ್ಕಾರ ಮತ್ತು ಮೊಬೈಲ್ ಕಂಪನಿಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಿದೆ.</p>.<p>‘ಎಜಿಆರ್’ ಬಾಕಿ ಪಾವತಿಯ ಕುರಿತಾಗಿ ಮೊಬೈಲ್ ಕಂಪನಿಗಳು ಒಟ್ಟಾರೆ ₹ 1.47 ಲಕ್ಷ ಕೋಟಿ ಬಾಕಿ ಪಾವತಿಸುವಂತೆ ಸುಪ್ರೀಂಕೋರ್ಟ್ ಅಕ್ಟೋಬರ್ 24ರ ತೀರ್ಪಿನಲ್ಲಿ ಆದೇಶಿಸಿತ್ತು. ಆದರೆ, ಬಾಕಿ ಮೊತ್ತದ ಬಗ್ಗೆ ಕಂಪನಿಗಳೇ ಖುದ್ದು ಲೆಕ್ಕಾಚಾರ ಹಾಕಿರುವ ಮಾಹಿತಿಯನ್ನು ಸರ್ಕಾರಕ್ಕೆ ನೀಡಿವೆ. ಈ ಕುರಿತು ಸುಪ್ರೀಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ಕಂಪನಿಗಳಿಗೆ ಖುದ್ದು ಲೆಕ್ಕಾಚಾರ ಹಾಕಲು ಅನುಮತಿ ನೀಡಿರುವ ದೂರಸಂಪರ್ಕ ಇಲಾಖೆಯ ಕಾರ್ಯದರ್ಶಿಗಳು ಮತ್ತು ಅಧಿಕಾರಿಗಳಿಗೆ ಸಮನ್ಸ್ ನೀಡಲಾಗುವುದು. ಕೋರ್ಟ್ ತೀರ್ಪುಗೆ ವಿರುದ್ಧವಾಗಿ ಕಂಪನಿಗಳು ತಮ್ಮ ಲೆಕ್ಕಾಚಾರವನ್ನು ಮುಂದಿಡುವ ಮೂಲಕ ಗಂಭೀರವಾದ ವಂಚನೆ ಎಸಗಿವೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>