<p><strong>ಮುಂಬೈ</strong>: ಮುಂಗಾರು ವಿಳಂಬ ಆಗಿರುವುದರಿಂದ ಹತ್ತಿ, ಸೋಯಾಬೀನ್, ಕಡಲೆ ಮತ್ತು ಬೇಳೆಕಾಳು ಬಿತ್ತನೆಗೆ ಹಿನ್ನಡೆಯಾಗಿದೆ. ಹೀಗಾಗಿ ಇಳುವರಿ ತಡವಾಗಲಿದೆ ಎಂದು ಸಾಲ್ವೆಂಟ್ ಎಕ್ಸ್ಟ್ರಾಕ್ಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಎಸ್ಇಎ) ಹೇಳಿದೆ.</p>.<p>ಸೋಯಾಬೀನ್, ಬೇಳೆಕಾಳು ಮತ್ತು ಕಡಲೆ ಬಿತ್ತನೆ 8ರಿಂದ 10 ದಿನ ತಡವಾಗುವ ಅಂದಾಜು ಮಾಡಲಾಗಿದೆ. ಮುಂಗಾರು ಇನ್ನಷ್ಟು ವಿಳಂಬವಾದಲ್ಲಿ ರೈತರು ಬೇರೆ ಬೆಳೆಗಳನ್ನು ಬಿತ್ತನೆ ಮಾಡುವ ಸಾಧ್ಯತೆ ಇದೆ ಎಂದು ಎಸ್ಇಎನ ಕಾರ್ಯಕಾರಿ ನಿರ್ದೇಶಕ ಬಿ.ವಿ. ಮೆಹ್ತಾ ತಿಳಿಸಿದ್ದಾರೆ.</p>.<p>‘ಹತ್ತಿ ಬೆಳೆಯುವ ರಾಜ್ಯಗಳಾದ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿ ಹತ್ತಿ ಬಿತ್ತನೆ ಎರಡು ವಾರಗಳವರೆಗೆ ತಡವಾಗಿದೆ. ಹಿಂದಿನ ವರ್ಷ ಜೂನ್ ಮೊದಲ ವಾರದಲ್ಲಿ ಮಳೆಯಾಗಿತ್ತು. ಆದರೆ ಈ ವರ್ಷ ಎರಡನೇ ವಾರ ಕಳೆದರೂ ಈ ರಾಜ್ಯಗಳಲ್ಲಿ ಮಳೆಯಾಗುತ್ತಿಲ್ಲ’ ಎಂದು ಹತ್ತಿ ಒಕ್ಕೂಟದ ಅಧ್ಯಕ್ಷ ಅತುಲ್ ಗಣಾತ್ರ ತಿಳಿಸಿದ್ದಾರೆ.</p>.<p>‘ಮುಂಗಾರು ವಿಳಂಬವಾದಷ್ಟೂ ಇಳುವರಿ ಸಿಗಲು ತಡವಾಗುತ್ತದೆ. ಸಾಮಾನ್ಯವಾಗಿ ಅಕ್ಟೋಬರ್ ಮೊದಲ ವಾರದಲ್ಲಿ ಬೆಳೆ ಬರಲು ಆರಂಭವಾಗುತ್ತದೆ. ಆದರೆ, ಈ ಬಾರಿ ಅಕ್ಟೋಬರ್ನ ಮೂರನೇ ಅಥವಾ ನಾಲ್ಕನೇ ವಾರಕ್ಕೆ ಹೋಗಲಿದೆ. ಕಾರ್ಖಾನೆಗಳಿಗೆ ಹತ್ತಿ ಪೂರೈಕೆ ವಿಳಂಬವಾದರೆ, ಬೆಲೆಯಲ್ಲಿ ವ್ಯತ್ಯಾಸ ಆಗಬಹುದು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮುಂಗಾರು ವಿಳಂಬ ಆಗಿರುವುದರಿಂದ ಹತ್ತಿ, ಸೋಯಾಬೀನ್, ಕಡಲೆ ಮತ್ತು ಬೇಳೆಕಾಳು ಬಿತ್ತನೆಗೆ ಹಿನ್ನಡೆಯಾಗಿದೆ. ಹೀಗಾಗಿ ಇಳುವರಿ ತಡವಾಗಲಿದೆ ಎಂದು ಸಾಲ್ವೆಂಟ್ ಎಕ್ಸ್ಟ್ರಾಕ್ಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಎಸ್ಇಎ) ಹೇಳಿದೆ.</p>.<p>ಸೋಯಾಬೀನ್, ಬೇಳೆಕಾಳು ಮತ್ತು ಕಡಲೆ ಬಿತ್ತನೆ 8ರಿಂದ 10 ದಿನ ತಡವಾಗುವ ಅಂದಾಜು ಮಾಡಲಾಗಿದೆ. ಮುಂಗಾರು ಇನ್ನಷ್ಟು ವಿಳಂಬವಾದಲ್ಲಿ ರೈತರು ಬೇರೆ ಬೆಳೆಗಳನ್ನು ಬಿತ್ತನೆ ಮಾಡುವ ಸಾಧ್ಯತೆ ಇದೆ ಎಂದು ಎಸ್ಇಎನ ಕಾರ್ಯಕಾರಿ ನಿರ್ದೇಶಕ ಬಿ.ವಿ. ಮೆಹ್ತಾ ತಿಳಿಸಿದ್ದಾರೆ.</p>.<p>‘ಹತ್ತಿ ಬೆಳೆಯುವ ರಾಜ್ಯಗಳಾದ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿ ಹತ್ತಿ ಬಿತ್ತನೆ ಎರಡು ವಾರಗಳವರೆಗೆ ತಡವಾಗಿದೆ. ಹಿಂದಿನ ವರ್ಷ ಜೂನ್ ಮೊದಲ ವಾರದಲ್ಲಿ ಮಳೆಯಾಗಿತ್ತು. ಆದರೆ ಈ ವರ್ಷ ಎರಡನೇ ವಾರ ಕಳೆದರೂ ಈ ರಾಜ್ಯಗಳಲ್ಲಿ ಮಳೆಯಾಗುತ್ತಿಲ್ಲ’ ಎಂದು ಹತ್ತಿ ಒಕ್ಕೂಟದ ಅಧ್ಯಕ್ಷ ಅತುಲ್ ಗಣಾತ್ರ ತಿಳಿಸಿದ್ದಾರೆ.</p>.<p>‘ಮುಂಗಾರು ವಿಳಂಬವಾದಷ್ಟೂ ಇಳುವರಿ ಸಿಗಲು ತಡವಾಗುತ್ತದೆ. ಸಾಮಾನ್ಯವಾಗಿ ಅಕ್ಟೋಬರ್ ಮೊದಲ ವಾರದಲ್ಲಿ ಬೆಳೆ ಬರಲು ಆರಂಭವಾಗುತ್ತದೆ. ಆದರೆ, ಈ ಬಾರಿ ಅಕ್ಟೋಬರ್ನ ಮೂರನೇ ಅಥವಾ ನಾಲ್ಕನೇ ವಾರಕ್ಕೆ ಹೋಗಲಿದೆ. ಕಾರ್ಖಾನೆಗಳಿಗೆ ಹತ್ತಿ ಪೂರೈಕೆ ವಿಳಂಬವಾದರೆ, ಬೆಲೆಯಲ್ಲಿ ವ್ಯತ್ಯಾಸ ಆಗಬಹುದು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>