ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚರಾಜ್ಯ ಚುನಾವಣೆ: ಗೋಧಿಗೆ ನೀಡುವ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ

Published 18 ಅಕ್ಟೋಬರ್ 2023, 11:29 IST
Last Updated 18 ಅಕ್ಟೋಬರ್ 2023, 11:29 IST
ಅಕ್ಷರ ಗಾತ್ರ

ನವದೆಹಲಿ: ಗೋಧಿ ಬೆಳೆಯುವ ಪ್ರಮುಖ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಕೇಂದ್ರ ಸರ್ಕಾರ, ಗೋಧಿಗೆ ನೀಡುವ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಿದೆ.

ಗೋಧಿಗೆ ನೀಡುವ ಬೆಂಬಲ ಬೆಲೆಯನ್ನು ಕ್ವಿಂಟಲ್‌ಗೆ ₹ 150ರಷ್ಟು ಹೆಚ್ಚಿಸಲಾಗಿದೆ. ಈಗ ಗೋಧಿಗೆ ಕ್ವಿಂಟಲ್‌ಗೆ ₹2,275 ಬೆಂಬಲ ಬೆಲೆ ಸಿಗಲಿದೆ ಎಂದು ಸರ್ಕಾರ ತಿಳಿಸಿದೆ.

ಈ ಹೆಚ್ಚಳವು 2024–25ನೇ ಮಾರುಕಟ್ಟೆ ವರ್ಷದ ಬೆಳೆಗಳಿಗೆ ಅನ್ವಯಿಸಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ ಸಂಪುಟ ಸಮಿತಿಯು ಈ ತೀರ್ಮಾನ ಕೈಗೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೆಚ್ಚಿಸಿದ ಗರಿಷ್ಠ ಮೊತ್ತ ಇದಾಗಿದೆ.

2023–24ನೇ ಮಾರುಕಟ್ಟೆ ವರ್ಷದಲ್ಲಿ ಗೋಧಿಗೆ ನೀಡುತ್ತಿದ್ದ ಬೆಂಬಲ ಬೆಲೆ ಕ್ವಿಂಟಲ್‌ಗೆ ₹2,125ರಷ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT