<p><strong>ಬೆಂಗಳೂರು:</strong> ‘ದೇಶದಲ್ಲಿನ ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನದ ಅಗ್ರ 50 ಕಂಪನಿಗಳನ್ನು ಗುರುತಿಸಲು ರಾಜ್ಯ ಸರ್ಕಾರವು ₹100 ಕೋಟಿ ನಿಧಿಯನ್ನು ಆರಂಭಿಸಲಿದೆ’ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ಹೇಳಿದರು.</p>.<p>ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಮುಂಬರುವ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ, 20 ಸಾವಿರ ನವೋದ್ಯಮಗಳನ್ನು ಪ್ರದರ್ಶಿಸಲು ಫ್ಯೂಚರ್ ಮೇಕರ್ಸ್ ಟ್ರ್ಯಾಕ್ ಅನ್ನು ಅನಾವರಣಗೊಳಿಸುತ್ತೇವೆ ಎಂದರು.</p>.<p>ಕರ್ನಾಟಕ ಇಂದು ಇತರೆ ರಾಜ್ಯಗಳೊಂದಿಗೆ ಸ್ಪರ್ಧಿಸುತ್ತಿಲ್ಲ; ನಾವೀನ್ಯ, ಕೌಶಲ ಮತ್ತು ರಾಜಕೀಯ ಇಚ್ಛಾಶಕ್ತಿಯ ಮೂಲಕ ಜಾಗತಿಕ ಪರಿಹಾರಗಳನ್ನು ರೂಪಿಸಲು ನಾವು ನಮ್ಮೊಂದಿಗೆ ಸ್ಪರ್ಧಿಸುತ್ತಿದ್ದೇವೆ ಎಂದು ಹೇಳಿದರು.</p>.<p>ಕೃಷಿ ತಂತ್ರಜ್ಞಾನದಿಂದ ಬಾಹ್ಯಾಕಾಶದವರೆಗೆ ಪ್ರಗತಿಯನ್ನು ಸಾಧಿಸುವ ಮೂಲಕ ಕರ್ನಾಟಕವು ವಿಶ್ವದ ಅತ್ಯಂತ ನಾವೀನ್ಯ ಕೇಂದ್ರಗಳಲ್ಲಿ ಒಂದಾಗಿ ವಿಕಸನಗೊಂಡಿದೆ. ಕರ್ನಾಟಕ ಕೇವಲ ಹೂಡಿಕೆ ತಾಣವಲ್ಲ, ಜಾಗತಿಕ ಜ್ಞಾನ, ಕೌಶಲದ ಕೇಂದ್ರ. ಮಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಯಾದ್ಯಂತ ನಾವೀನ್ಯತೆ ಕ್ಲಸ್ಟರ್ಗಳನ್ನು ನಿರ್ಮಿಸಲು ₹1,000 ಕೋಟಿ ಹೂಡಿಕೆ ಮಾಡುತ್ತಿದ್ದೇವೆ. ಪ್ರಗತಿಯ ಪ್ರಯೋಜನ ಪ್ರತಿ ಪ್ರದೇಶವನ್ನು ತಲುಪುವಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ದೇಶದಲ್ಲಿನ ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನದ ಅಗ್ರ 50 ಕಂಪನಿಗಳನ್ನು ಗುರುತಿಸಲು ರಾಜ್ಯ ಸರ್ಕಾರವು ₹100 ಕೋಟಿ ನಿಧಿಯನ್ನು ಆರಂಭಿಸಲಿದೆ’ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ಹೇಳಿದರು.</p>.<p>ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಮುಂಬರುವ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ, 20 ಸಾವಿರ ನವೋದ್ಯಮಗಳನ್ನು ಪ್ರದರ್ಶಿಸಲು ಫ್ಯೂಚರ್ ಮೇಕರ್ಸ್ ಟ್ರ್ಯಾಕ್ ಅನ್ನು ಅನಾವರಣಗೊಳಿಸುತ್ತೇವೆ ಎಂದರು.</p>.<p>ಕರ್ನಾಟಕ ಇಂದು ಇತರೆ ರಾಜ್ಯಗಳೊಂದಿಗೆ ಸ್ಪರ್ಧಿಸುತ್ತಿಲ್ಲ; ನಾವೀನ್ಯ, ಕೌಶಲ ಮತ್ತು ರಾಜಕೀಯ ಇಚ್ಛಾಶಕ್ತಿಯ ಮೂಲಕ ಜಾಗತಿಕ ಪರಿಹಾರಗಳನ್ನು ರೂಪಿಸಲು ನಾವು ನಮ್ಮೊಂದಿಗೆ ಸ್ಪರ್ಧಿಸುತ್ತಿದ್ದೇವೆ ಎಂದು ಹೇಳಿದರು.</p>.<p>ಕೃಷಿ ತಂತ್ರಜ್ಞಾನದಿಂದ ಬಾಹ್ಯಾಕಾಶದವರೆಗೆ ಪ್ರಗತಿಯನ್ನು ಸಾಧಿಸುವ ಮೂಲಕ ಕರ್ನಾಟಕವು ವಿಶ್ವದ ಅತ್ಯಂತ ನಾವೀನ್ಯ ಕೇಂದ್ರಗಳಲ್ಲಿ ಒಂದಾಗಿ ವಿಕಸನಗೊಂಡಿದೆ. ಕರ್ನಾಟಕ ಕೇವಲ ಹೂಡಿಕೆ ತಾಣವಲ್ಲ, ಜಾಗತಿಕ ಜ್ಞಾನ, ಕೌಶಲದ ಕೇಂದ್ರ. ಮಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಯಾದ್ಯಂತ ನಾವೀನ್ಯತೆ ಕ್ಲಸ್ಟರ್ಗಳನ್ನು ನಿರ್ಮಿಸಲು ₹1,000 ಕೋಟಿ ಹೂಡಿಕೆ ಮಾಡುತ್ತಿದ್ದೇವೆ. ಪ್ರಗತಿಯ ಪ್ರಯೋಜನ ಪ್ರತಿ ಪ್ರದೇಶವನ್ನು ತಲುಪುವಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>