<p><strong>ನವದೆಹಲಿ</strong>: ಭಾರತ ಇಂದು ಪರಿವರ್ತನೆಯ ಹಾದಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಸರಿಯಾಗಿ ಬಳಸಿಕೊಳ್ಳಲು ಅದ್ಭುತ ಅವಕಾಶ ಇದೆ ಎಂದು ಟಾಟಾ ಸನ್ಸ್ ಚೇರ್ಮನ್ ಎನ್. ಚಂದ್ರಶೇಖರನ್ ಹೇಳಿದರು.</p><p>ನೀತಿ ಆಯೋಗ ಆಯೋಜಿಸಿದ್ದ 'AI for Viksit Bharat: The Opportunity for Accelerated Economic Growth' ವರದಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ವರದಿ ಬಿಡುಗಡೆ ಮಾಡಿ ಮಾತನಾಡಿದರು.</p><p>ಎಐ ಬಳಸಿಕೊಂಡು ಭಾರತದಲ್ಲಿ ಅದ್ಭುತ ಬದಲಾವಣೆ ತರಲು ಸದಾವಕಾಶ ಒದಗಿ ಬಂದಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯಪೃವೃತ್ತರಾಗಬೇಕು ಎಂದು ಹೇಳಿದರು.</p><p>ಎಐ ಬಳಸಿಕೊಂಡು ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗಗಳನ್ನು ಹುಟ್ಟಿಹಾಕಬಹುದಾಗಿದೆ ಎಂದು ಅವರು ಪ್ರತಿಪಾದಿಸಿದರು.</p><p>ದೇಶದಲ್ಲಿ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿರುವ ಆರೋಗ್ಯ ಕ್ಷೇತ್ರ ಹಾಗೂ ಶಿಕ್ಷಣ ಕ್ಷೇತ್ರವನ್ನು ಎಐ ಬಳಸಿಕೊಂಡು ಸಬಲೀಕರಣಗೊಳಿಸಬಹುದು. ಎಐನಿಂದ ಅಸಮಾನತೆಗಳನ್ನು ತೊಡೆದು ಹಾಕಿ ದೇಶ ಕಟ್ಟಬಹುದು ಎಂದು ಹೇಳಿದರು.</p><p>ಈ ರೀತಿಯ ಬದಲಾವಣೆಗಳನ್ನು ತರಬೇಕಾದರೆ ಮುಖ್ಯವಾಗಿ ಸರ್ಕಾರಗಳು, ತಂತ್ರಜ್ಞಾನ ಜಗತ್ತು ಹಾಗೂ ಸಮಾಜ ಒಟ್ಟಾಗಿ ಪರಸ್ಪರ ಸ್ಪಂದಿಸುತ್ತಾ ಕೆಲಸ ಮಾಡಬೇಕಾಗುತ್ತದೆ ಎಂದು ಅವರು ಒತ್ತಿ ಹೇಳಿದರು.</p>.Asia Cup: ಹಸ್ತಲಾಘವ ಮಾಡಲು ಭಾರತ ನಿರಾಕರಣೆ; ಪ್ರತಿಭಟನೆ ದಾಖಲಿಸಿದ ಪಾಕಿಸ್ತಾನ.ಭಾರತ ನಮ್ಮ ಜೋಳ ಖರೀದಿಸುತ್ತಿಲ್ಲ: ಅಮೆರಿಕ ವಾಣಿಜ್ಯ ಕಾರ್ಯದರ್ಶಿ ಹೊವರ್ಡ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತ ಇಂದು ಪರಿವರ್ತನೆಯ ಹಾದಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಸರಿಯಾಗಿ ಬಳಸಿಕೊಳ್ಳಲು ಅದ್ಭುತ ಅವಕಾಶ ಇದೆ ಎಂದು ಟಾಟಾ ಸನ್ಸ್ ಚೇರ್ಮನ್ ಎನ್. ಚಂದ್ರಶೇಖರನ್ ಹೇಳಿದರು.</p><p>ನೀತಿ ಆಯೋಗ ಆಯೋಜಿಸಿದ್ದ 'AI for Viksit Bharat: The Opportunity for Accelerated Economic Growth' ವರದಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ವರದಿ ಬಿಡುಗಡೆ ಮಾಡಿ ಮಾತನಾಡಿದರು.</p><p>ಎಐ ಬಳಸಿಕೊಂಡು ಭಾರತದಲ್ಲಿ ಅದ್ಭುತ ಬದಲಾವಣೆ ತರಲು ಸದಾವಕಾಶ ಒದಗಿ ಬಂದಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯಪೃವೃತ್ತರಾಗಬೇಕು ಎಂದು ಹೇಳಿದರು.</p><p>ಎಐ ಬಳಸಿಕೊಂಡು ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗಗಳನ್ನು ಹುಟ್ಟಿಹಾಕಬಹುದಾಗಿದೆ ಎಂದು ಅವರು ಪ್ರತಿಪಾದಿಸಿದರು.</p><p>ದೇಶದಲ್ಲಿ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿರುವ ಆರೋಗ್ಯ ಕ್ಷೇತ್ರ ಹಾಗೂ ಶಿಕ್ಷಣ ಕ್ಷೇತ್ರವನ್ನು ಎಐ ಬಳಸಿಕೊಂಡು ಸಬಲೀಕರಣಗೊಳಿಸಬಹುದು. ಎಐನಿಂದ ಅಸಮಾನತೆಗಳನ್ನು ತೊಡೆದು ಹಾಕಿ ದೇಶ ಕಟ್ಟಬಹುದು ಎಂದು ಹೇಳಿದರು.</p><p>ಈ ರೀತಿಯ ಬದಲಾವಣೆಗಳನ್ನು ತರಬೇಕಾದರೆ ಮುಖ್ಯವಾಗಿ ಸರ್ಕಾರಗಳು, ತಂತ್ರಜ್ಞಾನ ಜಗತ್ತು ಹಾಗೂ ಸಮಾಜ ಒಟ್ಟಾಗಿ ಪರಸ್ಪರ ಸ್ಪಂದಿಸುತ್ತಾ ಕೆಲಸ ಮಾಡಬೇಕಾಗುತ್ತದೆ ಎಂದು ಅವರು ಒತ್ತಿ ಹೇಳಿದರು.</p>.Asia Cup: ಹಸ್ತಲಾಘವ ಮಾಡಲು ಭಾರತ ನಿರಾಕರಣೆ; ಪ್ರತಿಭಟನೆ ದಾಖಲಿಸಿದ ಪಾಕಿಸ್ತಾನ.ಭಾರತ ನಮ್ಮ ಜೋಳ ಖರೀದಿಸುತ್ತಿಲ್ಲ: ಅಮೆರಿಕ ವಾಣಿಜ್ಯ ಕಾರ್ಯದರ್ಶಿ ಹೊವರ್ಡ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>