<p><strong>ನವದೆಹಲಿ</strong>: ಏರ್ ಇಂಡಿಯಾ ಕಂಪನಿಯನ್ನು ಟಾಟಾ ಸನ್ಸ್ಗೆ ಮಾರಾಟ ಮಾಡಿದ್ದನ್ನು ವಿರೋಧ ಪಕ್ಷ ಕಾಂಗ್ರೆಸ್ ಟೀಕಿಸಿದೆಯಾದರೂ, ‘ಟಾಟಾದವರಿಗೆ ಸಿಕ್ಕಿರುವುದು ಲಾಭ ತಂದುಕೊಡುತ್ತಿದ್ದ ಕಂಪನಿಯೇನೂ ಅಲ್ಲ’ ಎಂದು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ ತಿರುಗೇಟು ನೀಡಿದ್ದಾರೆ.</p>.<p>ಹಳೆಯ ವಿಮಾನಗಳನ್ನು ಸರಿಪಡಿಸಲು ಹಣ ಖರ್ಚು ಮಾಡಬೇಕು, ಒಂದು ವರ್ಷದವರೆಗೆ ಕಂಪನಿಯ ಯಾವ ನೌಕರನನ್ನೂ ಕೆಲಸದಿಂದ ತೆಗೆಯುವಂತೆ ಇಲ್ಲ, ವಿಆರ್ಎಸ್ (ಸ್ವಯಂ ನಿವೃತ್ತಿ ಯೋಜನೆ) ಜಾರಿಗೊಳಿಸಿದ ನಂತರವೇ ಸಿಬ್ಬಂದಿ ಸಂಖ್ಯೆಯಲ್ಲಿ ಮರುಹೊಂದಾಣಿಕೆ ಮಾಡಿಕೊಳ್ಳಲು ಅವಕಾಶ ಇದೆ ಎಂದು ಪಾಂಡೆ ಅವರು ಹೇಳಿದ್ದಾರೆ.</p>.<p>‘ಇವೆಲ್ಲವೂ ಬಹಳ ಸುಲಭವಾಗಿ ಆಗುವ ಕೆಲಸಗಳಲ್ಲ. ಏರ್ ಇಂಡಿಯಾ ವರ್ಷಗಳಿಂದ ಅನುಭವಿಸಿದ ನಷ್ಟವನ್ನು ಸರಿದೂಗಿಸಲು ಮಾಡಿದ ಸಾಲವನ್ನು ಪೂರ್ತಿಯಾಗಿ ವಹಿಸಿಕೊಳ್ಳಬೇಕಿಲ್ಲ ಎಂಬುದೊಂದೇ ಅವರಿಗೆ (ಟಾಟಾ ಸನ್ಸ್) ಅನುಕೂಲಕರ ಅಂಶ. ಏರ್ ಇಂಡಿಯಾ ಮಾರಾಟದಿಂದಾಗಿ ಸಾರ್ವಜನಿಕರ ಹಣ ಉಳಿತಾಯ ಆಗಿದೆ’ ಎಂದು ಅವರು ಹೇಳಿದ್ದಾರೆ.</p>.<p>ಟಾಟಾ ಸನ್ಸ್ಗೆ ಏರ್ ಇಂಡಿಯಾ ಕಂಪನಿಯ 141 ವಿಮಾನಗಳು ದೊರೆಯಲಿವೆ. ಈ ಪೈಕಿ 42 ವಿಮಾಗಳು ಲೀಸ್ ಆಧಾರದಲ್ಲಿ ತೆಗೆದುಕೊಂಡವು. ಇನ್ನುಳಿದ 99 ವಿಮಾನಗಳು ಸ್ವಂತದ್ದು. ‘ಏರ್ ಇಂಡಿಯಾ ಕಂಪನಿಯನ್ನು ನಡೆಸುವುದಾಗಿ ನಾವು ಪ್ರತಿದಿನ ₹ 20 ಕೋಟಿ ಖರ್ಚು ಮಾಡುತ್ತಿದ್ದೇವೆ. ಹಾಗಾಗಿ, ಈ ಕಂಪನಿಯ ಹಸ್ತಾಂತರ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲಿದ್ದೇವೆ. ಏರ್ ಇಂಡಿಯಾದ ಹೊಸ ಮಾಲೀಕ ದೊಡ್ಡ ಪ್ರಮಾಣದ ಬಂಡವಾಳ ಹೂಡಿಕೆ ಮಾಡಬೇಕಾಗುತ್ತದೆ. ಆಗ ಮಾತ್ರ ಕಂಪನಿಯನ್ನು ಹಳಿಗೆ ತರಲು ಸಾಧ್ಯ’ ಎಂದು ಪಾಂಡೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಏರ್ ಇಂಡಿಯಾ ಕಂಪನಿಯನ್ನು ಟಾಟಾ ಸನ್ಸ್ಗೆ ಮಾರಾಟ ಮಾಡಿದ್ದನ್ನು ವಿರೋಧ ಪಕ್ಷ ಕಾಂಗ್ರೆಸ್ ಟೀಕಿಸಿದೆಯಾದರೂ, ‘ಟಾಟಾದವರಿಗೆ ಸಿಕ್ಕಿರುವುದು ಲಾಭ ತಂದುಕೊಡುತ್ತಿದ್ದ ಕಂಪನಿಯೇನೂ ಅಲ್ಲ’ ಎಂದು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ ತಿರುಗೇಟು ನೀಡಿದ್ದಾರೆ.</p>.<p>ಹಳೆಯ ವಿಮಾನಗಳನ್ನು ಸರಿಪಡಿಸಲು ಹಣ ಖರ್ಚು ಮಾಡಬೇಕು, ಒಂದು ವರ್ಷದವರೆಗೆ ಕಂಪನಿಯ ಯಾವ ನೌಕರನನ್ನೂ ಕೆಲಸದಿಂದ ತೆಗೆಯುವಂತೆ ಇಲ್ಲ, ವಿಆರ್ಎಸ್ (ಸ್ವಯಂ ನಿವೃತ್ತಿ ಯೋಜನೆ) ಜಾರಿಗೊಳಿಸಿದ ನಂತರವೇ ಸಿಬ್ಬಂದಿ ಸಂಖ್ಯೆಯಲ್ಲಿ ಮರುಹೊಂದಾಣಿಕೆ ಮಾಡಿಕೊಳ್ಳಲು ಅವಕಾಶ ಇದೆ ಎಂದು ಪಾಂಡೆ ಅವರು ಹೇಳಿದ್ದಾರೆ.</p>.<p>‘ಇವೆಲ್ಲವೂ ಬಹಳ ಸುಲಭವಾಗಿ ಆಗುವ ಕೆಲಸಗಳಲ್ಲ. ಏರ್ ಇಂಡಿಯಾ ವರ್ಷಗಳಿಂದ ಅನುಭವಿಸಿದ ನಷ್ಟವನ್ನು ಸರಿದೂಗಿಸಲು ಮಾಡಿದ ಸಾಲವನ್ನು ಪೂರ್ತಿಯಾಗಿ ವಹಿಸಿಕೊಳ್ಳಬೇಕಿಲ್ಲ ಎಂಬುದೊಂದೇ ಅವರಿಗೆ (ಟಾಟಾ ಸನ್ಸ್) ಅನುಕೂಲಕರ ಅಂಶ. ಏರ್ ಇಂಡಿಯಾ ಮಾರಾಟದಿಂದಾಗಿ ಸಾರ್ವಜನಿಕರ ಹಣ ಉಳಿತಾಯ ಆಗಿದೆ’ ಎಂದು ಅವರು ಹೇಳಿದ್ದಾರೆ.</p>.<p>ಟಾಟಾ ಸನ್ಸ್ಗೆ ಏರ್ ಇಂಡಿಯಾ ಕಂಪನಿಯ 141 ವಿಮಾನಗಳು ದೊರೆಯಲಿವೆ. ಈ ಪೈಕಿ 42 ವಿಮಾಗಳು ಲೀಸ್ ಆಧಾರದಲ್ಲಿ ತೆಗೆದುಕೊಂಡವು. ಇನ್ನುಳಿದ 99 ವಿಮಾನಗಳು ಸ್ವಂತದ್ದು. ‘ಏರ್ ಇಂಡಿಯಾ ಕಂಪನಿಯನ್ನು ನಡೆಸುವುದಾಗಿ ನಾವು ಪ್ರತಿದಿನ ₹ 20 ಕೋಟಿ ಖರ್ಚು ಮಾಡುತ್ತಿದ್ದೇವೆ. ಹಾಗಾಗಿ, ಈ ಕಂಪನಿಯ ಹಸ್ತಾಂತರ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲಿದ್ದೇವೆ. ಏರ್ ಇಂಡಿಯಾದ ಹೊಸ ಮಾಲೀಕ ದೊಡ್ಡ ಪ್ರಮಾಣದ ಬಂಡವಾಳ ಹೂಡಿಕೆ ಮಾಡಬೇಕಾಗುತ್ತದೆ. ಆಗ ಮಾತ್ರ ಕಂಪನಿಯನ್ನು ಹಳಿಗೆ ತರಲು ಸಾಧ್ಯ’ ಎಂದು ಪಾಂಡೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>