<p>ನವದೆಹಲಿ (ಪಿಟಿಐ): ಪಾಕಿಸ್ತಾನವು ತನ್ನ ವಾಯುಪ್ರದೇಶದಲ್ಲಿ ಭಾರತದ ವಿಮಾನಗಳ ಹಾರಾಟಕ್ಕೆ ನಿರ್ಬಂಧ ಹೇರಿದ್ದರಿಂದ ಎದುರಾಗಿರುವ ತೊಂದರೆಗಳ ಕುರಿತು ಸಮಗ್ರ ಪರಿಶೀಲನೆಯ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮ್ಮೋಹನ್ನಾಯ್ಡು ಸೋಮವಾರ ಹೇಳಿದ್ದಾರೆ.</p>.<p>ಈಗಿನ ಪರಿಸ್ಥಿತಿಯನ್ನು ಸರ್ಕಾರವು ವಿಮಾನಯಾನ ಸಂಸ್ಥೆಗಳೊಂದಿಗೆ ಅವಲೋಕಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಿದೆ. ಪಾಕಿಸ್ತಾನ ಕಳೆದ ವಾರ ತನ್ನ ವಾಯುಪ್ರದೇಶವನ್ನು ಭಾರತೀಯ ವಿಮಾನಯಾನ ಸಂಸ್ಥೆಗಳು ಬಳಸುವುದನ್ನು ನಿಷೇಧಿಸಿತ್ತು.</p>.<p>ಇದು ಉತ್ತರ ಭಾರತದ ಪ್ರಮುಖ ನಗರಗಳಿಂದ ಸಾಗುವ ಅಂತರರಾಷ್ಟ್ರೀಯ ವಿಮಾನಗಳ ಮೇಲೆ ಪರಿಣಾಮ ಬೀರಿದೆ. ಪ್ರಯಾಣದ ಅವಧಿ ಹೆಚ್ಚಳ, ಇಂಧನ ವೆಚ್ಚ ಹೆಚ್ಚಾಗಲಿದೆ. ಅದರ ಜತೆಗೆ ಪ್ರಯಾಣ ದರದಲ್ಲೂ ಏರಿಕೆಯಾಗಲಿದೆ. ಈ ಎಲ್ಲ ವಿಷಯಗಳನ್ನು ಅವಲೋಕಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.</p>.<p>ಪ್ರಸ್ತುತ ಸಂದರ್ಭದಲ್ಲಿ ವಿಮಾನಯಾನ ಸಚಿವಾಲಯವು ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಿದೆ ಎಂದು ಸಚಿವರು ತಿಳಿಸಿದ್ದಾರೆ.</p>.<p>ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸೇರಿದ 800ಕ್ಕೂ ಹೆಚ್ಚು ವಿಮಾನಗಳು ಪ್ರತಿ ವಾರ ಉತ್ತರ ಭಾರತದ ಪ್ರಮುಖ ನಗರಗಳಿಂದ ಬ್ರಿಟನ್ ಸೇರಿದಂತೆ ಯುರೋಪ್ನ ವಿವಿಧ ದೇಶಗಳು, ಉತ್ತರ ಅಮೆರಿಕ, ಮತ್ತು ಮಧ್ಯಪ್ರಾಚ್ಯದತ್ತ ಸಂಚರಿಸುತ್ತವೆ ಎಂದು ಅಂಕಿ ಅಂಶಗಳು ತಿಳಿಸುತ್ತವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಪಾಕಿಸ್ತಾನವು ತನ್ನ ವಾಯುಪ್ರದೇಶದಲ್ಲಿ ಭಾರತದ ವಿಮಾನಗಳ ಹಾರಾಟಕ್ಕೆ ನಿರ್ಬಂಧ ಹೇರಿದ್ದರಿಂದ ಎದುರಾಗಿರುವ ತೊಂದರೆಗಳ ಕುರಿತು ಸಮಗ್ರ ಪರಿಶೀಲನೆಯ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮ್ಮೋಹನ್ನಾಯ್ಡು ಸೋಮವಾರ ಹೇಳಿದ್ದಾರೆ.</p>.<p>ಈಗಿನ ಪರಿಸ್ಥಿತಿಯನ್ನು ಸರ್ಕಾರವು ವಿಮಾನಯಾನ ಸಂಸ್ಥೆಗಳೊಂದಿಗೆ ಅವಲೋಕಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಿದೆ. ಪಾಕಿಸ್ತಾನ ಕಳೆದ ವಾರ ತನ್ನ ವಾಯುಪ್ರದೇಶವನ್ನು ಭಾರತೀಯ ವಿಮಾನಯಾನ ಸಂಸ್ಥೆಗಳು ಬಳಸುವುದನ್ನು ನಿಷೇಧಿಸಿತ್ತು.</p>.<p>ಇದು ಉತ್ತರ ಭಾರತದ ಪ್ರಮುಖ ನಗರಗಳಿಂದ ಸಾಗುವ ಅಂತರರಾಷ್ಟ್ರೀಯ ವಿಮಾನಗಳ ಮೇಲೆ ಪರಿಣಾಮ ಬೀರಿದೆ. ಪ್ರಯಾಣದ ಅವಧಿ ಹೆಚ್ಚಳ, ಇಂಧನ ವೆಚ್ಚ ಹೆಚ್ಚಾಗಲಿದೆ. ಅದರ ಜತೆಗೆ ಪ್ರಯಾಣ ದರದಲ್ಲೂ ಏರಿಕೆಯಾಗಲಿದೆ. ಈ ಎಲ್ಲ ವಿಷಯಗಳನ್ನು ಅವಲೋಕಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.</p>.<p>ಪ್ರಸ್ತುತ ಸಂದರ್ಭದಲ್ಲಿ ವಿಮಾನಯಾನ ಸಚಿವಾಲಯವು ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಿದೆ ಎಂದು ಸಚಿವರು ತಿಳಿಸಿದ್ದಾರೆ.</p>.<p>ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸೇರಿದ 800ಕ್ಕೂ ಹೆಚ್ಚು ವಿಮಾನಗಳು ಪ್ರತಿ ವಾರ ಉತ್ತರ ಭಾರತದ ಪ್ರಮುಖ ನಗರಗಳಿಂದ ಬ್ರಿಟನ್ ಸೇರಿದಂತೆ ಯುರೋಪ್ನ ವಿವಿಧ ದೇಶಗಳು, ಉತ್ತರ ಅಮೆರಿಕ, ಮತ್ತು ಮಧ್ಯಪ್ರಾಚ್ಯದತ್ತ ಸಂಚರಿಸುತ್ತವೆ ಎಂದು ಅಂಕಿ ಅಂಶಗಳು ತಿಳಿಸುತ್ತವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>