<p><strong>ಬೆಂಗಳೂರು:</strong> ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಅಕ್ಷಯ ತೃತೀಯ ದಿನವಾದ ಬುಧವಾರ ಆಭರಣದ ಅಂಗಡಿಗಳಲ್ಲಿ ಚಿನ್ನ ಮತ್ತು ಬೆಳ್ಳಿ ಖರೀದಿ ಜೋರಾಗಿತ್ತು.</p>.<p>ಈ ಮಂಗಳಕರ ದಿನದಂದು ಚಿನ್ನಾಭರಣ ಖರೀದಿಸಿದರೆ ಸಂಪತ್ತು ವೃದ್ಧಿಯಾಗಲಿದೆ ಎಂಬುದು ಜನರ ನಂಬಿಕೆ. ಹಾಗಾಗಿ, ಹಳದಿ ಲೋಹ ಮತ್ತು ಬೆಳ್ಳಿ ಬೆಲೆ ಏರಿಕೆಯಾದರೂ ಗ್ರಾಹಕರಲ್ಲಿ ಖರೀದಿ ಉತ್ಸಾಹ ಕಡಿಮೆಯಾಗಿರಲಿಲ್ಲ. ಬೆಳಿಗ್ಗೆಯಿಂದಲೇ ಅಂಗಡಿಗಳಿಗೆ ದಾಂಗುಡಿ ಇಟ್ಟಿದ್ದರು. </p>.<p>ಕರ್ನಾಟಕ ರಾಜ್ಯ ಆಭರಣ ವರ್ತಕರ ಒಕ್ಕೂಟದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಒಂದೇ ದಿನ ಸುಮಾರು ₹3 ಸಾವಿರ ಕೋಟಿ ವಹಿವಾಟು ನಡೆದಿದೆ. ಕಳೆದ ವರ್ಷದ ಅಕ್ಷಯ ತೃತೀಯ ದಿನದಂದು ನಡೆದ ವಹಿವಾಟಿಗೆ ಹೋಲಿಸಿದರೆ ಚಿನ್ನಾಭರಣ ಮಾರಾಟದಲ್ಲಿ ಶೇ 30ರಷ್ಟು ಹೆಚ್ಚಳವಾಗಿದೆ.</p>.<p>‘ಮಂಗಳಕರ ದಿನದಂದು ಗ್ರಾಹಕರು ಉತ್ಸಾಹದಿಂದಲೇ ಚಿನ್ನದ ಆಭರಣಗಳ ಖರೀದಿಗೆ ಮುಂದಾಗಿದ್ದರು. ರಾಜ್ಯದಲ್ಲಿ 2,380 ಕೆ.ಜಿ ಚಿನ್ನ ಮತ್ತು 4,560 ಕೆ.ಜಿ ಬೆಳ್ಳಿ ಮಾರಾಟವಾಗಿದೆ’ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ. ರಾಮಾಚಾರಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕಳೆದ ವರ್ಷಕ್ಕೆ ಹೋಲಿಸಿದರೆ ಚಿನ್ನಾಭರಣ ಮಾರಾಟದಲ್ಲಿ ಶೇ 30ರಷ್ಟು ಮತ್ತು ಬೆಳ್ಳಿ ಆಭರಣಗಳ ಮಾರಾಟದಲ್ಲಿ ಶೇ 50ರಷ್ಟು ಹೆಚ್ಚಳವಾಗಿದೆ’ ಎಂದರು.</p>.<p>ಈ ಬಾರಿ ಜಗಜ್ಯೋತಿ ಬಸವೇಶ್ವರ ಜಯಂತಿ ಮತ್ತು ಅಕ್ಷಯ ತೃತೀಯ ಹಬ್ಬವನ್ನು ಒಂದೇ ದಿನ ಆಚರಿಸಲಾಗುತ್ತಿದೆ. ಹಾಗಾಗಿ, ಬಸವಣ್ಣ, ಶಂಕರಾಚಾರ್ಯ ಅವರ ಚಿತ್ರವಿರುವ ನಾಣ್ಯಗಳಿಗೆ ಹೆಚ್ಚಿನ ಬೇಡಿಕೆ ಇತ್ತು ಎಂದು ವಿವರಿಸಿದರು.</p>.<p>‘ಸಿನಿಮಾ ನಟರು ಧರಿಸುವ ಕರುಂಗಲಿ ಮಾಲೆ ಇತ್ತೀಚೆಗೆ ಹೆಚ್ಚು ಪ್ರಸಿದ್ಧಿ ಪಡೆದಿದೆ. ಈ ಬಾರಿ ಚಿನ್ನದ ಕರುಂಗಲಿ ಮಾಲೆಗಳಿಗೆ ಹೆಚ್ಚಿನ ಬೇಡಿಕೆ ಕಂಡುಬಂದಿತು’ ಎಂದರು.</p>.<p>ಗ್ರಾಹಕರನ್ನು ಸೆಳೆಯಲು ಚಿನ್ನದ ಅಂಗಡಿಳಿಂದ ರಿಯಾಯಿತಿ ಘೋಷಿಸಲಾಗಿತ್ತು. ಅಲ್ಲದೆ, ಪ್ರಮುಖ ಜ್ಯುವೆಲ್ಲರಿ ಬ್ರ್ಯಾಂಡ್ಗಳಿಂದ ಚಿನ್ನ, ಬೆಳ್ಳಿ, ವಜ್ರದ ಆಭರಣಗಳ ತಯಾರಿಕೆ ವೆಚ್ಚದಲ್ಲಿ ರಿಯಾಯಿತಿ ಪ್ರಕಟಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಅಕ್ಷಯ ತೃತೀಯ ದಿನವಾದ ಬುಧವಾರ ಆಭರಣದ ಅಂಗಡಿಗಳಲ್ಲಿ ಚಿನ್ನ ಮತ್ತು ಬೆಳ್ಳಿ ಖರೀದಿ ಜೋರಾಗಿತ್ತು.</p>.<p>ಈ ಮಂಗಳಕರ ದಿನದಂದು ಚಿನ್ನಾಭರಣ ಖರೀದಿಸಿದರೆ ಸಂಪತ್ತು ವೃದ್ಧಿಯಾಗಲಿದೆ ಎಂಬುದು ಜನರ ನಂಬಿಕೆ. ಹಾಗಾಗಿ, ಹಳದಿ ಲೋಹ ಮತ್ತು ಬೆಳ್ಳಿ ಬೆಲೆ ಏರಿಕೆಯಾದರೂ ಗ್ರಾಹಕರಲ್ಲಿ ಖರೀದಿ ಉತ್ಸಾಹ ಕಡಿಮೆಯಾಗಿರಲಿಲ್ಲ. ಬೆಳಿಗ್ಗೆಯಿಂದಲೇ ಅಂಗಡಿಗಳಿಗೆ ದಾಂಗುಡಿ ಇಟ್ಟಿದ್ದರು. </p>.<p>ಕರ್ನಾಟಕ ರಾಜ್ಯ ಆಭರಣ ವರ್ತಕರ ಒಕ್ಕೂಟದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಒಂದೇ ದಿನ ಸುಮಾರು ₹3 ಸಾವಿರ ಕೋಟಿ ವಹಿವಾಟು ನಡೆದಿದೆ. ಕಳೆದ ವರ್ಷದ ಅಕ್ಷಯ ತೃತೀಯ ದಿನದಂದು ನಡೆದ ವಹಿವಾಟಿಗೆ ಹೋಲಿಸಿದರೆ ಚಿನ್ನಾಭರಣ ಮಾರಾಟದಲ್ಲಿ ಶೇ 30ರಷ್ಟು ಹೆಚ್ಚಳವಾಗಿದೆ.</p>.<p>‘ಮಂಗಳಕರ ದಿನದಂದು ಗ್ರಾಹಕರು ಉತ್ಸಾಹದಿಂದಲೇ ಚಿನ್ನದ ಆಭರಣಗಳ ಖರೀದಿಗೆ ಮುಂದಾಗಿದ್ದರು. ರಾಜ್ಯದಲ್ಲಿ 2,380 ಕೆ.ಜಿ ಚಿನ್ನ ಮತ್ತು 4,560 ಕೆ.ಜಿ ಬೆಳ್ಳಿ ಮಾರಾಟವಾಗಿದೆ’ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ. ರಾಮಾಚಾರಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕಳೆದ ವರ್ಷಕ್ಕೆ ಹೋಲಿಸಿದರೆ ಚಿನ್ನಾಭರಣ ಮಾರಾಟದಲ್ಲಿ ಶೇ 30ರಷ್ಟು ಮತ್ತು ಬೆಳ್ಳಿ ಆಭರಣಗಳ ಮಾರಾಟದಲ್ಲಿ ಶೇ 50ರಷ್ಟು ಹೆಚ್ಚಳವಾಗಿದೆ’ ಎಂದರು.</p>.<p>ಈ ಬಾರಿ ಜಗಜ್ಯೋತಿ ಬಸವೇಶ್ವರ ಜಯಂತಿ ಮತ್ತು ಅಕ್ಷಯ ತೃತೀಯ ಹಬ್ಬವನ್ನು ಒಂದೇ ದಿನ ಆಚರಿಸಲಾಗುತ್ತಿದೆ. ಹಾಗಾಗಿ, ಬಸವಣ್ಣ, ಶಂಕರಾಚಾರ್ಯ ಅವರ ಚಿತ್ರವಿರುವ ನಾಣ್ಯಗಳಿಗೆ ಹೆಚ್ಚಿನ ಬೇಡಿಕೆ ಇತ್ತು ಎಂದು ವಿವರಿಸಿದರು.</p>.<p>‘ಸಿನಿಮಾ ನಟರು ಧರಿಸುವ ಕರುಂಗಲಿ ಮಾಲೆ ಇತ್ತೀಚೆಗೆ ಹೆಚ್ಚು ಪ್ರಸಿದ್ಧಿ ಪಡೆದಿದೆ. ಈ ಬಾರಿ ಚಿನ್ನದ ಕರುಂಗಲಿ ಮಾಲೆಗಳಿಗೆ ಹೆಚ್ಚಿನ ಬೇಡಿಕೆ ಕಂಡುಬಂದಿತು’ ಎಂದರು.</p>.<p>ಗ್ರಾಹಕರನ್ನು ಸೆಳೆಯಲು ಚಿನ್ನದ ಅಂಗಡಿಳಿಂದ ರಿಯಾಯಿತಿ ಘೋಷಿಸಲಾಗಿತ್ತು. ಅಲ್ಲದೆ, ಪ್ರಮುಖ ಜ್ಯುವೆಲ್ಲರಿ ಬ್ರ್ಯಾಂಡ್ಗಳಿಂದ ಚಿನ್ನ, ಬೆಳ್ಳಿ, ವಜ್ರದ ಆಭರಣಗಳ ತಯಾರಿಕೆ ವೆಚ್ಚದಲ್ಲಿ ರಿಯಾಯಿತಿ ಪ್ರಕಟಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>