ರಸಗೊಬ್ಬರ ಸಬ್ಸಿಡಿ ಯೋಜನೆ ‘ಪ್ರಧಾನಮಂತ್ರಿ ಭಾರತೀಯ ಜನಉರ್ವರಕ್ ಪರಿಯೋಜನಾ’ (ಪಿಎಂಬಿಜೆಪಿ) ಅಡಿಯಲ್ಲಿ ಜಾರಿಗೆ ತರುತ್ತಿರುವ ‘ಒಂದು ದೇಶ ಒಂದು ರಸಗೊಬ್ಬರ’ ಎಂಬ ಹೊಸ ಉಪಕ್ರಮದ ಬಗ್ಗೆ ಮಾಹಿತಿ ನೀಡಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಮನಸುಖ್ ಮಾಂಡವೀಯ ಅವರು, ‘ಕಂಪನಿಗಳು ತಮ್ಮ ಬ್ರ್ಯಾಂಡ್, ಹೆಸರು, ಲೋಗೊ ಮತ್ತು ಉತ್ಪನ್ನಕ್ಕೆ ಸಂಬಂಧಿಸಿದ ಇತರ ಅಗತ್ಯ ವಿವರಗಳನ್ನು ಚೀಲದ ಮೂರನೆಯ ಒಂದರಷ್ಟು ಭಾಗದಲ್ಲಿ ಪ್ರದರ್ಶಿಸಬಹುದು’ ಎಂದು ತಿಳಿಸಿದ್ದಾರೆ.