ಕಾರ್ಪೊರೇಟ್ ಕಂಪನಿಗಳಿಂದ ಬ್ಯಾಂಕ್; ಆರ್ಬಿಐ ಅಭಿಪ್ರಾಯ ಅಲ್ಲ: ದಾಸ್ ಸ್ಪಷ್ಟನೆ

ಮುಂಬೈ: ‘ಕಾರ್ಪೊರೇಟ್ ಕಂಪನಿಗಳಿಗೆ ಬ್ಯಾಂಕ್ ಆರಂಭಿಸಲು ಅವಕಾಶ ಕೊಡಬೇಕು ಎನ್ನುವುದು ಆರ್ಬಿಐನ ಅಭಿಪ್ರಾಯ ಅಥವಾ ನಿರ್ಧಾರ ಅಲ್ಲ. ಆ ಕುರಿತು ಆರ್ಬಿಐನ ಆಂತರಿಕ ಸಮಿತಿ ಸಲಹೆ ನೀಡಿದೆಯಷ್ಟೇ’ ಎಂದು ಗವರ್ನರ್ ಶಕ್ತಿಕಾಂತ್ ದಾಸ್ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಷೇರುದಾರರು ಮತ್ತು ಸಾರ್ವಜನಿಕರ ಅಭಿಪ್ರಾಯ ಪಡೆದ ನಂತರ ಆರ್ಬಿಐ ಒಂದು ನಿರ್ಧಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.
ಆರ್ಬಿಐನ ಮಾಜಿ ಗವರ್ನರ್ ರಘುರಾಂ ರಾಜನ್ ಸೇರಿದಂತೆ ಹಲವರಿಂದ ಸಮಿತಿಯ ಸಲಹೆಗಳಿಗೆ ತೀವ್ರ ವಿರೋಧ ವ್ಯಕ್ತವಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.