<p><strong>ನವದೆಹಲಿ</strong>: ನಗರ ಸಹಕಾರಿ ಬ್ಯಾಂಕ್ಗಳಲ್ಲಿ ಡಿಜಿಟಲ್ ಪಾವತಿಯ ಬಳಕೆಯನ್ನು ಹೆಚ್ಚಿಸಲು ‘ಸಹಕಾರ್ ಡಿಜಿ ಪೇ’ ಮತ್ತು ‘ಸಹಕಾರ್ ಡಿಜಿ ಲೋನ್’ ಎಂಬ ಎರಡು ಮೊಬೈಲ್ ಆ್ಯಪ್ಗಳಿಗೆ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸೋಮವಾರ ಚಾಲನೆ ನೀಡಿದ್ದಾರೆ. </p>.<p>ನಗದು ರಹಿತ ಪಾವತಿ ವಿಧಾನ ಹೆಚ್ಚುತ್ತಿದ್ದು, ಸಹಕಾರಿ ಬ್ಯಾಂಕ್ಗಳ ಉಳಿವಿಗೆ ಡಿಜಿಟಲ್ ಪಾವತಿ ಅಳವಡಿಕೆ ಅಗತ್ಯ. ನಗರ ಸಹಕಾರಿ ಬ್ಯಾಂಕ್ಗಳು (ಯುಸಿಬಿ) ಮತ್ತು ಪತ್ತಿನ ಸಹಕಾರ ಸಂಘಗಳ ವೃತ್ತಿಪರತೆ ಹೆಚ್ಚಿಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ ಎಂದು ಕಾರ್ಯಕ್ರಮದಲ್ಲಿ ಹೇಳಿದ್ದಾರೆ. </p>.<p>ದೇಶದ ಸಹಕಾರ ವಲಯದ ಎನ್ಪಿಎ ಕಳೆದ ಎರಡು ವರ್ಷದ ಹಿಂದೆ ಶೇ 2.8ರಷ್ಟಿತ್ತು. ಅದು ಈಗ ಶೇ 0.6ಕ್ಕೆ ಇಳಿದಿದೆ. ಎನ್ಪಿಎ ಸುಧಾರಣೆ ಕಂಡಿದೆ. ಬ್ಯಾಂಕ್ಗಳ ಕಾರ್ಯಾಚರಣೆಯಲ್ಲಿ ಸುಧಾರಣೆ ಮತ್ತು ಆರ್ಥಿಕ ಶಿಸ್ತು ಉಂಟಾಗಿದೆ ಎಂದಿದ್ದಾರೆ.</p>.<p>ರಾಷ್ಟ್ರೀಯ ನಗರ ಸಹಕಾರಿ ಬ್ಯಾಂಕ್ ಹಾಗೂ ಪತ್ತಿನ ಸಂಸ್ಥೆಗಳ ಒಕ್ಕೂಟವು (ಎನ್ಎಎಫ್ಸಿಯುಬಿ) ಮುಂದಿನ ಐದು ವರ್ಷದೊಳಗೆ ಎರಡು ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಇರುವ ಪ್ರತಿ ಪಟ್ಟಣದಲ್ಲಿ ಕನಿಷ್ಠ ಒಂದಾದರೂ ಹೆಚ್ಚುವರಿ ನಗರ ಸಹಕಾರಿ ಬ್ಯಾಂಕ್ ಸ್ಥಾಪಿಸುವ ಗುರಿ ಸಾಧಿಸಬೇಕು ಎಂದು ಸೂಚಿಸಿದ್ದಾರೆ. </p>.<p>‘ಡಿಜಿ ಪೇ ಇಂದು ಅಗತ್ಯವಾಗಿದೆ. ನಗರ ಸಹಕಾರಿ ಬ್ಯಾಂಕ್ಗಳು ಈ ಪಾವತಿ ವಿಧಾನಕ್ಕೆ ಹೊಂದಿಕೊಳ್ಳದಿದ್ದರೆ, ಸ್ಪರ್ಧೆಯಿಂದ ಹೊರಗುಳಿಯುತ್ತವೆ. ಎರಡು ವರ್ಷದೊಳಗೆ 1,500 ಬ್ಯಾಂಕ್ಗಳು ಈ ಅಪ್ಲಿಕೇಷನ್ ಅನ್ನು ಅಳವಡಿಸಿಕೊಳ್ಳಬೇಕು’ ಎಂದು ಹೇಳಿದ್ದಾರೆ.</p>.<p>ಎನ್ಎಫ್ಸಿಯುಬಿ ಗೌರವಾಧ್ಯಕ್ಷ ಮತ್ತು ಕರ್ನಾಟಕದ ಕಾನೂನು ಸಚಿವ ಎಚ್.ಕೆ.ಪಾಟೀಲ, 20 ನಗರ ಸಹಕಾರಿ ಬ್ಯಾಂಕ್ಗಳು ಮುಚ್ಚುವ ಹಂತಕ್ಕೆ ಬಂದಿವೆ ಎಂದು ಆತಂಕ ವ್ಯಕ್ತಪಡಿಸಿದರು. ಇವುಗಳ ಪುನರುಜ್ಜೀವನಕ್ಕೆ ಕ್ರಮ ತೆಗೆದು ಕೊಳ್ಳಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನಗರ ಸಹಕಾರಿ ಬ್ಯಾಂಕ್ಗಳಲ್ಲಿ ಡಿಜಿಟಲ್ ಪಾವತಿಯ ಬಳಕೆಯನ್ನು ಹೆಚ್ಚಿಸಲು ‘ಸಹಕಾರ್ ಡಿಜಿ ಪೇ’ ಮತ್ತು ‘ಸಹಕಾರ್ ಡಿಜಿ ಲೋನ್’ ಎಂಬ ಎರಡು ಮೊಬೈಲ್ ಆ್ಯಪ್ಗಳಿಗೆ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸೋಮವಾರ ಚಾಲನೆ ನೀಡಿದ್ದಾರೆ. </p>.<p>ನಗದು ರಹಿತ ಪಾವತಿ ವಿಧಾನ ಹೆಚ್ಚುತ್ತಿದ್ದು, ಸಹಕಾರಿ ಬ್ಯಾಂಕ್ಗಳ ಉಳಿವಿಗೆ ಡಿಜಿಟಲ್ ಪಾವತಿ ಅಳವಡಿಕೆ ಅಗತ್ಯ. ನಗರ ಸಹಕಾರಿ ಬ್ಯಾಂಕ್ಗಳು (ಯುಸಿಬಿ) ಮತ್ತು ಪತ್ತಿನ ಸಹಕಾರ ಸಂಘಗಳ ವೃತ್ತಿಪರತೆ ಹೆಚ್ಚಿಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ ಎಂದು ಕಾರ್ಯಕ್ರಮದಲ್ಲಿ ಹೇಳಿದ್ದಾರೆ. </p>.<p>ದೇಶದ ಸಹಕಾರ ವಲಯದ ಎನ್ಪಿಎ ಕಳೆದ ಎರಡು ವರ್ಷದ ಹಿಂದೆ ಶೇ 2.8ರಷ್ಟಿತ್ತು. ಅದು ಈಗ ಶೇ 0.6ಕ್ಕೆ ಇಳಿದಿದೆ. ಎನ್ಪಿಎ ಸುಧಾರಣೆ ಕಂಡಿದೆ. ಬ್ಯಾಂಕ್ಗಳ ಕಾರ್ಯಾಚರಣೆಯಲ್ಲಿ ಸುಧಾರಣೆ ಮತ್ತು ಆರ್ಥಿಕ ಶಿಸ್ತು ಉಂಟಾಗಿದೆ ಎಂದಿದ್ದಾರೆ.</p>.<p>ರಾಷ್ಟ್ರೀಯ ನಗರ ಸಹಕಾರಿ ಬ್ಯಾಂಕ್ ಹಾಗೂ ಪತ್ತಿನ ಸಂಸ್ಥೆಗಳ ಒಕ್ಕೂಟವು (ಎನ್ಎಎಫ್ಸಿಯುಬಿ) ಮುಂದಿನ ಐದು ವರ್ಷದೊಳಗೆ ಎರಡು ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಇರುವ ಪ್ರತಿ ಪಟ್ಟಣದಲ್ಲಿ ಕನಿಷ್ಠ ಒಂದಾದರೂ ಹೆಚ್ಚುವರಿ ನಗರ ಸಹಕಾರಿ ಬ್ಯಾಂಕ್ ಸ್ಥಾಪಿಸುವ ಗುರಿ ಸಾಧಿಸಬೇಕು ಎಂದು ಸೂಚಿಸಿದ್ದಾರೆ. </p>.<p>‘ಡಿಜಿ ಪೇ ಇಂದು ಅಗತ್ಯವಾಗಿದೆ. ನಗರ ಸಹಕಾರಿ ಬ್ಯಾಂಕ್ಗಳು ಈ ಪಾವತಿ ವಿಧಾನಕ್ಕೆ ಹೊಂದಿಕೊಳ್ಳದಿದ್ದರೆ, ಸ್ಪರ್ಧೆಯಿಂದ ಹೊರಗುಳಿಯುತ್ತವೆ. ಎರಡು ವರ್ಷದೊಳಗೆ 1,500 ಬ್ಯಾಂಕ್ಗಳು ಈ ಅಪ್ಲಿಕೇಷನ್ ಅನ್ನು ಅಳವಡಿಸಿಕೊಳ್ಳಬೇಕು’ ಎಂದು ಹೇಳಿದ್ದಾರೆ.</p>.<p>ಎನ್ಎಫ್ಸಿಯುಬಿ ಗೌರವಾಧ್ಯಕ್ಷ ಮತ್ತು ಕರ್ನಾಟಕದ ಕಾನೂನು ಸಚಿವ ಎಚ್.ಕೆ.ಪಾಟೀಲ, 20 ನಗರ ಸಹಕಾರಿ ಬ್ಯಾಂಕ್ಗಳು ಮುಚ್ಚುವ ಹಂತಕ್ಕೆ ಬಂದಿವೆ ಎಂದು ಆತಂಕ ವ್ಯಕ್ತಪಡಿಸಿದರು. ಇವುಗಳ ಪುನರುಜ್ಜೀವನಕ್ಕೆ ಕ್ರಮ ತೆಗೆದು ಕೊಳ್ಳಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>