<p><strong>ನವದೆಹಲಿ</strong>: ಸಹಕಾರ ಸಂಘಗಳಲ್ಲಿ ಚುನಾವಣಾ ಪ್ರಕ್ರಿಯೆಯು ಹೆಚ್ಚು ಪಾರದರ್ಶಕವಾಗಬೇಕು ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ‘ಒಬ್ಬನೇ ವ್ಯಕ್ತಿ ಪ್ರತಿ ವರ್ಷವೂ ಚುನಾಯಿತನಾಗುವ ವ್ಯವಸ್ಥೆ ಸರಿಯಲ್ಲ’ ಎಂದು ಅವರು ಕಾರ್ಯಕ್ರಮವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>‘ಸಹಕಾರ ಕ್ಷೇತ್ರದಲ್ಲಿ ಬಹಳ ವೇಗವಾಗಿ ಬದಲಾವಣೆ ತರುವ ಅಗತ್ಯವಿದೆ. ನಾವು ಬದಲಾಗದಿದ್ದರೆ ಜನರೇ ನಮ್ಮನ್ನು ಬದಲಾಯಿಸುತ್ತಾರೆ’ ಎಂದು ಅವರು ಹೇಳಿದ್ದಾರೆ.</p>.<p>‘ಚುನಾವಣಾ ಪ್ರಕ್ರಿಯೆಯು ಪಾರದರ್ಶಕ ಆಗಬೇಕು. ನಾವು ಬದಲಾವಣೆ ತರಲು ಬಯಸಿದ್ದೇವೆ’ ಎಂದು ಅವರು ತಿಳಿಸಿದ್ದಾರೆ. ಸಹಕಾರ ಸಂಘಗಳಿಗೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗದ ಮಾದರಿಯಲ್ಲಿ ವ್ಯವಸ್ಥೆಯೊಂದನ್ನು ರೂಪಿಸಲಾಗುವುದು ಎಂದಿದ್ದಾರೆ.</p>.<p>ಶಾ ಅವರು ತಾವು ಕೂಡ 25 ವರ್ಷಗಳಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವೊಂದಕ್ಕೆ ಅಧ್ಯಕ್ಷರಾಗಿದ್ದು ಅಲ್ಲಿ ಈ ವರ್ಷ ಬದಲಾವಣೆ ಆಗಲಿದೆ ಎಂದಿದ್ದಾರೆ. ಸಹಕಾರ ಕ್ಷೇತ್ರದಲ್ಲಿನ ನೇಮಕಾತಿ ವ್ಯವಸ್ಥೆಯಲ್ಲಿ ಕೂಡ ಬದಲಾವಣೆ ತರಬೇಕಾದ ಅಗತ್ಯ ಇದೆ. ಸಚಿವಾಲಯವು ಅದಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸುತ್ತಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಹಕಾರ ಸಂಘಗಳಲ್ಲಿ ಚುನಾವಣಾ ಪ್ರಕ್ರಿಯೆಯು ಹೆಚ್ಚು ಪಾರದರ್ಶಕವಾಗಬೇಕು ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ‘ಒಬ್ಬನೇ ವ್ಯಕ್ತಿ ಪ್ರತಿ ವರ್ಷವೂ ಚುನಾಯಿತನಾಗುವ ವ್ಯವಸ್ಥೆ ಸರಿಯಲ್ಲ’ ಎಂದು ಅವರು ಕಾರ್ಯಕ್ರಮವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>‘ಸಹಕಾರ ಕ್ಷೇತ್ರದಲ್ಲಿ ಬಹಳ ವೇಗವಾಗಿ ಬದಲಾವಣೆ ತರುವ ಅಗತ್ಯವಿದೆ. ನಾವು ಬದಲಾಗದಿದ್ದರೆ ಜನರೇ ನಮ್ಮನ್ನು ಬದಲಾಯಿಸುತ್ತಾರೆ’ ಎಂದು ಅವರು ಹೇಳಿದ್ದಾರೆ.</p>.<p>‘ಚುನಾವಣಾ ಪ್ರಕ್ರಿಯೆಯು ಪಾರದರ್ಶಕ ಆಗಬೇಕು. ನಾವು ಬದಲಾವಣೆ ತರಲು ಬಯಸಿದ್ದೇವೆ’ ಎಂದು ಅವರು ತಿಳಿಸಿದ್ದಾರೆ. ಸಹಕಾರ ಸಂಘಗಳಿಗೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗದ ಮಾದರಿಯಲ್ಲಿ ವ್ಯವಸ್ಥೆಯೊಂದನ್ನು ರೂಪಿಸಲಾಗುವುದು ಎಂದಿದ್ದಾರೆ.</p>.<p>ಶಾ ಅವರು ತಾವು ಕೂಡ 25 ವರ್ಷಗಳಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವೊಂದಕ್ಕೆ ಅಧ್ಯಕ್ಷರಾಗಿದ್ದು ಅಲ್ಲಿ ಈ ವರ್ಷ ಬದಲಾವಣೆ ಆಗಲಿದೆ ಎಂದಿದ್ದಾರೆ. ಸಹಕಾರ ಕ್ಷೇತ್ರದಲ್ಲಿನ ನೇಮಕಾತಿ ವ್ಯವಸ್ಥೆಯಲ್ಲಿ ಕೂಡ ಬದಲಾವಣೆ ತರಬೇಕಾದ ಅಗತ್ಯ ಇದೆ. ಸಚಿವಾಲಯವು ಅದಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸುತ್ತಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>