<p><strong>ನವದೆಹಲಿ:</strong> ದೇಶದಲ್ಲಿ ಕೊರೊನಾ ವೈರಸ್ ತೀವ್ರವಾಗಿ ಹರಡುತ್ತಿದ್ದರೂ ಕೃಷಿ ಚಟುವಟಿಕೆಯ ಮೇಲೆ ಹೆಚ್ಚಿನ ಪರಿಣಾಮ ಉಂಟಾಗಿಲ್ಲ. ಈ ಬಾರಿಯೂ ದಾಖಲೆ ಪ್ರಮಾಣದಲ್ಲಿ ಆಹಾರ ಧಾನ್ಯಗಳ ಉತ್ಪಾದನೆ ಆಗುವ ನಿರೀಕ್ಷೆ ಮಾಡಲಾಗಿದೆ.</p>.<p>ಮುಂಗಾರು ಉತ್ತಮವಾಗಿ ಸುರಿಯುತ್ತಿದ್ದು, ಆಹಾರ ಧಾನ್ಯಗಳ ಬಿತ್ತನೆ ಪ್ರಮಾಣವು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 7ರಷ್ಟು ಏರಿಕೆಯಾಗಿದೆ. ಇದರಿಂದ ಆಹಾರ ಧಾನ್ಯಗಳ ಉತ್ಪಾದನೆಯು ಕಳೆದ ವರ್ಷದ ದಾಖಲೆ ಮಟ್ಟವನ್ನೂ ಮೀರಲಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ಹೇಳಿದೆ.</p>.<p>ಜೂನ್ 1ರಿಂದ ಬಿತ್ತನೆ ಆರಂಭವಾಗಿದ್ದು, ಇಲ್ಲಿಯವರೆಗೆ 10.82 ಕೋಟಿ ಹೆಕ್ಟೇರ್ ಪ್ರದೇಶಗಳಲ್ಲಿ ಬಿತ್ತನೆ ಕಾರ್ಯ ನಡೆದಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.</p>.<p>‘2020–21ನೇ ಬೆಳೆ ವರ್ಷದಲ್ಲಿ ಉತ್ಪಾದನೆಯು 29.83 ಕೋಟಿ ಟನ್ಗಳ ಗುರಿಯನ್ನೂ ದಾಟುವ ವಿಶ್ವಾಸವಿದೆ’ ಎಂದು ಕೃಷಿ ಸಚಿವ ನರೇಂದ್ರ ಸಿಮಗ್ ತೊಮರ್ ಹೇಳಿದ್ದಾರೆ.</p>.<p>2019–20ನೇ ಬೆಳೆ ವರ್ಷದಲ್ಲಿ 29.56 ಕೋಟಿ ಟನ್ಗಳಷ್ಟು ಉತ್ಪಾದನೆ ಆಗಿತ್ತು.</p>.<p>ದೇಶದಲ್ಲಿ ಸರಾಸರಿಗಿಂತಲೂ ಶೇ 24ರಷ್ಟು ಹೆಚ್ಚು ಮಳೆಯಾಗಿದೆ. ಇದರಿಂದ ಕೃಷಿ ಚಟುವಟಿಕೆಗಳು ವೇಗ ಪಡೆದುಕೊಂಡಿವೆ.</p>.<p>52 ಲಕ್ಷ ಹೆಕ್ಟೇರ್ಗಳಲ್ಲಿ ಕಬ್ಬು ಬಿತ್ತನೆಯಾಗಿದೆ. ಜೋಳ ಬಿತ್ತನೆಯು 70 ಲಕ್ಷ ಹೆಕ್ಟೇರ್ಗಳಿಂದ 80 ಲಕ್ಷ ಹೆಕ್ಟೇರ್ಗಳಿಗೆ ಅಲ್ಪ ಏರಿಕೆ ಕಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ಕೊರೊನಾ ವೈರಸ್ ತೀವ್ರವಾಗಿ ಹರಡುತ್ತಿದ್ದರೂ ಕೃಷಿ ಚಟುವಟಿಕೆಯ ಮೇಲೆ ಹೆಚ್ಚಿನ ಪರಿಣಾಮ ಉಂಟಾಗಿಲ್ಲ. ಈ ಬಾರಿಯೂ ದಾಖಲೆ ಪ್ರಮಾಣದಲ್ಲಿ ಆಹಾರ ಧಾನ್ಯಗಳ ಉತ್ಪಾದನೆ ಆಗುವ ನಿರೀಕ್ಷೆ ಮಾಡಲಾಗಿದೆ.</p>.<p>ಮುಂಗಾರು ಉತ್ತಮವಾಗಿ ಸುರಿಯುತ್ತಿದ್ದು, ಆಹಾರ ಧಾನ್ಯಗಳ ಬಿತ್ತನೆ ಪ್ರಮಾಣವು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 7ರಷ್ಟು ಏರಿಕೆಯಾಗಿದೆ. ಇದರಿಂದ ಆಹಾರ ಧಾನ್ಯಗಳ ಉತ್ಪಾದನೆಯು ಕಳೆದ ವರ್ಷದ ದಾಖಲೆ ಮಟ್ಟವನ್ನೂ ಮೀರಲಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ಹೇಳಿದೆ.</p>.<p>ಜೂನ್ 1ರಿಂದ ಬಿತ್ತನೆ ಆರಂಭವಾಗಿದ್ದು, ಇಲ್ಲಿಯವರೆಗೆ 10.82 ಕೋಟಿ ಹೆಕ್ಟೇರ್ ಪ್ರದೇಶಗಳಲ್ಲಿ ಬಿತ್ತನೆ ಕಾರ್ಯ ನಡೆದಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.</p>.<p>‘2020–21ನೇ ಬೆಳೆ ವರ್ಷದಲ್ಲಿ ಉತ್ಪಾದನೆಯು 29.83 ಕೋಟಿ ಟನ್ಗಳ ಗುರಿಯನ್ನೂ ದಾಟುವ ವಿಶ್ವಾಸವಿದೆ’ ಎಂದು ಕೃಷಿ ಸಚಿವ ನರೇಂದ್ರ ಸಿಮಗ್ ತೊಮರ್ ಹೇಳಿದ್ದಾರೆ.</p>.<p>2019–20ನೇ ಬೆಳೆ ವರ್ಷದಲ್ಲಿ 29.56 ಕೋಟಿ ಟನ್ಗಳಷ್ಟು ಉತ್ಪಾದನೆ ಆಗಿತ್ತು.</p>.<p>ದೇಶದಲ್ಲಿ ಸರಾಸರಿಗಿಂತಲೂ ಶೇ 24ರಷ್ಟು ಹೆಚ್ಚು ಮಳೆಯಾಗಿದೆ. ಇದರಿಂದ ಕೃಷಿ ಚಟುವಟಿಕೆಗಳು ವೇಗ ಪಡೆದುಕೊಂಡಿವೆ.</p>.<p>52 ಲಕ್ಷ ಹೆಕ್ಟೇರ್ಗಳಲ್ಲಿ ಕಬ್ಬು ಬಿತ್ತನೆಯಾಗಿದೆ. ಜೋಳ ಬಿತ್ತನೆಯು 70 ಲಕ್ಷ ಹೆಕ್ಟೇರ್ಗಳಿಂದ 80 ಲಕ್ಷ ಹೆಕ್ಟೇರ್ಗಳಿಗೆ ಅಲ್ಪ ಏರಿಕೆ ಕಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>