<p><strong>ಮುಂಬೈ</strong>: ಉದ್ಯಮಿ ಅನಿಲ್ ಅಂಬಾನಿ ಅವರಿಗೆ ಸಂಬಂಧಿಸಿದ ರಿಲಯನ್ಸ್ ಕಮ್ಯುನಿಕೇಷನ್ಸ್ ಕಂಪನಿಯ ಸಾಲದ ಖಾತೆಯನ್ನು ‘ವಂಚನೆ’ ಎಂದು ವರ್ಗೀಕರಿಸಿದ್ದ ಆದೇಶವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಕೆನರಾ ಬ್ಯಾಂಕ್, ಬಾಂಬೆ ಹೈಕೋರ್ಟ್ಗೆ ಗುರುವಾರ ತಿಳಿಸಿದೆ.</p>.<p>ಬ್ಯಾಂಕ್ನ ಆದೇಶವನ್ನು ಪ್ರಶ್ನಿಸಿ ಅನಿಲ್ ಅಂಬಾನಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ಡೇರೆ ಮತ್ತು ನೀಲಾ ಗೋಖಲೆ ಅವರು ಇದ್ದ ವಿಭಾಗೀಯ ಪೀಠವು ನಡೆಸುತ್ತಿತ್ತು. ಕೆನರಾ ಬ್ಯಾಂಕ್ ನೀಡಿದ ಮಾಹಿತಿಯನ್ನು ಪರಿಗಣಿಸಿದ ಪೀಠವು, ಅರ್ಜಿಯನ್ನು ಇತ್ಯರ್ಥಪಡಿಸಿತು.</p>.<p>‘ವಂಚನೆ’ ಎಂದು ವರ್ಗೀಕರಿಸಿದ್ದ ಆದೇಶ ಹಿಂಪಡೆದಿರುವುದನ್ನು ಭಾರತೀಯ ರಿಸರ್ವ್ ಬ್ಯಾಂಕ್ಗೆ (ಆರ್ಬಿಐ) ತಿಳಿಸಬೇಕು ಎಂದು ಪೀಠವು ಹೇಳಿದೆ.</p>.<p class="bodytext">ಅನಿಲ್ ಅಂಬಾನಿ ಅವರ ರಿಲಯನ್ಸ್ ಕಮ್ಯುನಿಕೇಷನ್ಸ್ ಪಡೆದ ಸಾಲದ ಖಾತೆಗೆ ಸಂಬಂಧಿಸಿದ ವಿಷಯ ಇದಾಗಿದೆ. ಕಂಪನಿಯು ದಿವಾಳಿ ಸಂಹಿತೆಯ ಅಡಿಯಲ್ಲಿ ಕಾರ್ಪೊರೇಟ್ ದಿವಾಳಿ ಪರಿಹಾರ ಪ್ರಕ್ರಿಯೆ ಎದುರಿಸುತ್ತಿದೆ.</p>.<p class="bodytext">ಸಾಲದ ಖಾತೆಯನ್ನು ‘ವಂಚನೆ’ ಎಂದು ಕೆನರಾ ಬ್ಯಾಂಕ್ 2024ರ ನವೆಂಬರ್ 8ರಂದು ವರ್ಗೀಕರಿಸಿತ್ತು. 2017ರಲ್ಲಿ ನೀಡಿದ್ದ ₹1,050 ಕೋಟಿ ಸಾಲವನ್ನು ಕಂಪನಿಯು ಸಮೂಹದ ಇನ್ನೊಂದು ಕಂಪನಿಗೆ ವರ್ಗಾಯಿಸಿ, ಬೇರೆ ಪಾವತಿಗಳಿಗೆ ಬಳಕೆ ಮಾಡಿಕೊಂಡಿತ್ತು ಎಂದು ಬ್ಯಾಂಕ್ ಹೇಳಿತ್ತು.</p>.<p class="bodytext">ಆದರೆ ಈ ಆದೇಶಕ್ಕೆ ಈ ವರ್ಷದ ಫೆಬ್ರುವರಿಯಲ್ಲಿ ಹೈಕೋರ್ಟ್ ತಡೆ ನೀಡಿತ್ತು. ಸಾಲದ ಖಾತೆಯನ್ನು ‘ವಂಚನೆ’ ಎಂದು ವರ್ಗೀಕರಿಸುವ ಮೊದಲು ತಮ್ಮ ವಾದವನ್ನು ಆಲಿಸಿಲ್ಲ ಎಂದು ಅನಿಲ್ ಅಂಬಾನಿ ಅವರು ಹೈಕೋರ್ಟ್ನಲ್ಲಿ ವಾದಿಸಿದ್ದರು.</p>.<p class="bodytext">ಸಾಲದ ಖಾತೆಯನ್ನು ‘ವಂಚನೆ’ ಎಂದು ವರ್ಗೀಕರಿಸುವ ಮೊದಲು ಸಾಲ ಪಡೆದವರ ವಾದ ಆಲಿಸಬೇಕು ಎಂದು ಸುಪ್ರೀಂ ಕೋರ್ಟ್ ನೀಡಿದ್ದ ಸೂಚನೆಯನ್ನು ಮತ್ತೆ ಮತ್ತೆ ಉಲ್ಲಂಘಿಸಿದ ಬ್ಯಾಂಕ್ಗಳ ವಿರುದ್ಧ ಆರ್ಬಿಐ ಕ್ರಮ ಕೈಗೊಳ್ಳಲಿದೆಯೇ ಎಂದು ಹೈಕೋರ್ಟ್ ಪ್ರಶ್ನಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಉದ್ಯಮಿ ಅನಿಲ್ ಅಂಬಾನಿ ಅವರಿಗೆ ಸಂಬಂಧಿಸಿದ ರಿಲಯನ್ಸ್ ಕಮ್ಯುನಿಕೇಷನ್ಸ್ ಕಂಪನಿಯ ಸಾಲದ ಖಾತೆಯನ್ನು ‘ವಂಚನೆ’ ಎಂದು ವರ್ಗೀಕರಿಸಿದ್ದ ಆದೇಶವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಕೆನರಾ ಬ್ಯಾಂಕ್, ಬಾಂಬೆ ಹೈಕೋರ್ಟ್ಗೆ ಗುರುವಾರ ತಿಳಿಸಿದೆ.</p>.<p>ಬ್ಯಾಂಕ್ನ ಆದೇಶವನ್ನು ಪ್ರಶ್ನಿಸಿ ಅನಿಲ್ ಅಂಬಾನಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ಡೇರೆ ಮತ್ತು ನೀಲಾ ಗೋಖಲೆ ಅವರು ಇದ್ದ ವಿಭಾಗೀಯ ಪೀಠವು ನಡೆಸುತ್ತಿತ್ತು. ಕೆನರಾ ಬ್ಯಾಂಕ್ ನೀಡಿದ ಮಾಹಿತಿಯನ್ನು ಪರಿಗಣಿಸಿದ ಪೀಠವು, ಅರ್ಜಿಯನ್ನು ಇತ್ಯರ್ಥಪಡಿಸಿತು.</p>.<p>‘ವಂಚನೆ’ ಎಂದು ವರ್ಗೀಕರಿಸಿದ್ದ ಆದೇಶ ಹಿಂಪಡೆದಿರುವುದನ್ನು ಭಾರತೀಯ ರಿಸರ್ವ್ ಬ್ಯಾಂಕ್ಗೆ (ಆರ್ಬಿಐ) ತಿಳಿಸಬೇಕು ಎಂದು ಪೀಠವು ಹೇಳಿದೆ.</p>.<p class="bodytext">ಅನಿಲ್ ಅಂಬಾನಿ ಅವರ ರಿಲಯನ್ಸ್ ಕಮ್ಯುನಿಕೇಷನ್ಸ್ ಪಡೆದ ಸಾಲದ ಖಾತೆಗೆ ಸಂಬಂಧಿಸಿದ ವಿಷಯ ಇದಾಗಿದೆ. ಕಂಪನಿಯು ದಿವಾಳಿ ಸಂಹಿತೆಯ ಅಡಿಯಲ್ಲಿ ಕಾರ್ಪೊರೇಟ್ ದಿವಾಳಿ ಪರಿಹಾರ ಪ್ರಕ್ರಿಯೆ ಎದುರಿಸುತ್ತಿದೆ.</p>.<p class="bodytext">ಸಾಲದ ಖಾತೆಯನ್ನು ‘ವಂಚನೆ’ ಎಂದು ಕೆನರಾ ಬ್ಯಾಂಕ್ 2024ರ ನವೆಂಬರ್ 8ರಂದು ವರ್ಗೀಕರಿಸಿತ್ತು. 2017ರಲ್ಲಿ ನೀಡಿದ್ದ ₹1,050 ಕೋಟಿ ಸಾಲವನ್ನು ಕಂಪನಿಯು ಸಮೂಹದ ಇನ್ನೊಂದು ಕಂಪನಿಗೆ ವರ್ಗಾಯಿಸಿ, ಬೇರೆ ಪಾವತಿಗಳಿಗೆ ಬಳಕೆ ಮಾಡಿಕೊಂಡಿತ್ತು ಎಂದು ಬ್ಯಾಂಕ್ ಹೇಳಿತ್ತು.</p>.<p class="bodytext">ಆದರೆ ಈ ಆದೇಶಕ್ಕೆ ಈ ವರ್ಷದ ಫೆಬ್ರುವರಿಯಲ್ಲಿ ಹೈಕೋರ್ಟ್ ತಡೆ ನೀಡಿತ್ತು. ಸಾಲದ ಖಾತೆಯನ್ನು ‘ವಂಚನೆ’ ಎಂದು ವರ್ಗೀಕರಿಸುವ ಮೊದಲು ತಮ್ಮ ವಾದವನ್ನು ಆಲಿಸಿಲ್ಲ ಎಂದು ಅನಿಲ್ ಅಂಬಾನಿ ಅವರು ಹೈಕೋರ್ಟ್ನಲ್ಲಿ ವಾದಿಸಿದ್ದರು.</p>.<p class="bodytext">ಸಾಲದ ಖಾತೆಯನ್ನು ‘ವಂಚನೆ’ ಎಂದು ವರ್ಗೀಕರಿಸುವ ಮೊದಲು ಸಾಲ ಪಡೆದವರ ವಾದ ಆಲಿಸಬೇಕು ಎಂದು ಸುಪ್ರೀಂ ಕೋರ್ಟ್ ನೀಡಿದ್ದ ಸೂಚನೆಯನ್ನು ಮತ್ತೆ ಮತ್ತೆ ಉಲ್ಲಂಘಿಸಿದ ಬ್ಯಾಂಕ್ಗಳ ವಿರುದ್ಧ ಆರ್ಬಿಐ ಕ್ರಮ ಕೈಗೊಳ್ಳಲಿದೆಯೇ ಎಂದು ಹೈಕೋರ್ಟ್ ಪ್ರಶ್ನಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>