<p><strong>ನವದೆಹಲಿ</strong>: ‘ಕೃತಕ ಬುದ್ಧಿಮತ್ತೆಯಿಂದ (ಎ.ಐ) ಉಂಟಾಗುವ ಪಲ್ಲಟಗಳು ಅಲ್ಪಕಾಲ ಮಾತ್ರ ಇರುತ್ತದೆ, ಮುಂದೆ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ’ ಎಂದು ರಾಜ್ಯದ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.</p>.<p>ಹೊಸ ಯುಗದ ತಂತ್ರಜ್ಞಾನಗಳಿಗೆ ತಕ್ಕಂತೆ ಪ್ರತಿಭೆಗಳನ್ನು ಸಿದ್ಧಪಡಿಸಲು ರಾಜ್ಯದಲ್ಲಿ ದೊಡ್ಡ ಪ್ರಮಾಣದ ಮರುಕೌಶಲ ಕ್ರಮಗಳು ಜಾರಿಯಲ್ಲಿವೆ. ರಾಜ್ಯ ಸರ್ಕಾರವು ನಾವೀನ್ಯ ಮತ್ತು ಸಹಭಾಗಿತ್ವಕ್ಕೆ ಉತ್ತೇಜನ ನೀಡುತ್ತಿದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. </p>.<p>‘ಎ.ಐನಿಂದ ಕೆಲವು ಉದ್ಯೋಗ ನಷ್ಟ ಆಗಬಹುದು. ಆದರೆ ಕೌಶಲ ಹೆಚ್ಚಳದಿಂದ ಹೊಸ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಅದಕ್ಕಾಗಿಯೇ ನಮಗೆ ಬೃಹತ್ ಮರುಕೌಶಲ ಕಾರ್ಯಕ್ರಮದ ಅಗತ್ಯವಿದೆ’ ಎಂದು ಹೇಳಿದ್ದಾರೆ.</p>.<p>ಮುಂಬರುವ ಆರ್ಥಿಕ ವರ್ಷದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ, ಸೈಬರ್ ಭದ್ರತೆ, ಡಿಜಿಟಲ್ ಫೊರೆನ್ಸಿಕ್ಸ್ ಸೇರಿದಂತೆ ಜಾಗತಿಕವಾಗಿ ಬೇಡಿಕೆ ಇರುವ ತಂತ್ರಜ್ಞಾನದ ಬಗ್ಗೆ 5 ಲಕ್ಷಕ್ಕೂ ಅಧಿಕ ಜನರಿಗೆ ಕೌಶಲ ತರಬೇತಿ ನೀಡುವ ಗುರಿ ಹೊಂದಲಾಗಿದೆ. ಹೊಸ ತಂತ್ರಜ್ಞಾನದ ಬಗ್ಗೆ ತರಬೇತಿ ನೀಡುವ ಕುರಿತು ಕೌಶಲ ಮಂಡಳಿ ಜೊತೆ ಮಾತುಕತೆ ನಡೆಸಲಾಗುತ್ತಿದ್ದು, ಅವರಿಂದ ಪ್ರತಿಕ್ರಿಯೆ ಪಡೆದು ತರಬೇತಿ ನೀಡುವುದನ್ನು ನಿರ್ಧರಿಸಲಾಗುವುದು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಕೃತಕ ಬುದ್ಧಿಮತ್ತೆಯಿಂದ (ಎ.ಐ) ಉಂಟಾಗುವ ಪಲ್ಲಟಗಳು ಅಲ್ಪಕಾಲ ಮಾತ್ರ ಇರುತ್ತದೆ, ಮುಂದೆ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ’ ಎಂದು ರಾಜ್ಯದ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.</p>.<p>ಹೊಸ ಯುಗದ ತಂತ್ರಜ್ಞಾನಗಳಿಗೆ ತಕ್ಕಂತೆ ಪ್ರತಿಭೆಗಳನ್ನು ಸಿದ್ಧಪಡಿಸಲು ರಾಜ್ಯದಲ್ಲಿ ದೊಡ್ಡ ಪ್ರಮಾಣದ ಮರುಕೌಶಲ ಕ್ರಮಗಳು ಜಾರಿಯಲ್ಲಿವೆ. ರಾಜ್ಯ ಸರ್ಕಾರವು ನಾವೀನ್ಯ ಮತ್ತು ಸಹಭಾಗಿತ್ವಕ್ಕೆ ಉತ್ತೇಜನ ನೀಡುತ್ತಿದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. </p>.<p>‘ಎ.ಐನಿಂದ ಕೆಲವು ಉದ್ಯೋಗ ನಷ್ಟ ಆಗಬಹುದು. ಆದರೆ ಕೌಶಲ ಹೆಚ್ಚಳದಿಂದ ಹೊಸ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಅದಕ್ಕಾಗಿಯೇ ನಮಗೆ ಬೃಹತ್ ಮರುಕೌಶಲ ಕಾರ್ಯಕ್ರಮದ ಅಗತ್ಯವಿದೆ’ ಎಂದು ಹೇಳಿದ್ದಾರೆ.</p>.<p>ಮುಂಬರುವ ಆರ್ಥಿಕ ವರ್ಷದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ, ಸೈಬರ್ ಭದ್ರತೆ, ಡಿಜಿಟಲ್ ಫೊರೆನ್ಸಿಕ್ಸ್ ಸೇರಿದಂತೆ ಜಾಗತಿಕವಾಗಿ ಬೇಡಿಕೆ ಇರುವ ತಂತ್ರಜ್ಞಾನದ ಬಗ್ಗೆ 5 ಲಕ್ಷಕ್ಕೂ ಅಧಿಕ ಜನರಿಗೆ ಕೌಶಲ ತರಬೇತಿ ನೀಡುವ ಗುರಿ ಹೊಂದಲಾಗಿದೆ. ಹೊಸ ತಂತ್ರಜ್ಞಾನದ ಬಗ್ಗೆ ತರಬೇತಿ ನೀಡುವ ಕುರಿತು ಕೌಶಲ ಮಂಡಳಿ ಜೊತೆ ಮಾತುಕತೆ ನಡೆಸಲಾಗುತ್ತಿದ್ದು, ಅವರಿಂದ ಪ್ರತಿಕ್ರಿಯೆ ಪಡೆದು ತರಬೇತಿ ನೀಡುವುದನ್ನು ನಿರ್ಧರಿಸಲಾಗುವುದು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>