ಆಯ್ಕೆ ಸಮಿತಿಯು ಅಂತಿಮಗೊಳಿಸಿದ್ದ 17 ಮಂದಿ ಉದ್ಯಮಿಗಳಲ್ಲಿ ಶಾ ಅವರಿಗೆ ಪ್ರಶಸ್ತಿ ಲಭಿಸಿದೆ. ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಭಾರತದ ಜೈವಿಕ ತಂತ್ರಜ್ಞಾನ ಉದ್ಯಮಕ್ಕೆ ಪರ್ಯಾಯ ಹೆಸರಾದ ಕಿರಣ್ ಮಜುಂದಾರ್ ಶಾ ವರು ಆವಿಷ್ಕಾರದಲ್ಲಿ ಮುಂಚೂಣಿಯಲ್ಲಿದ್ದಾರೆ. ಕೈಗೆಟುಕುವ, ಜೀವ ರಕ್ಷಕ ಔಷಧಗಳ ಸಂಶೋಧನೆಗಳಿಗೆ ಅವರು ನೀಡುತ್ತಿರುವ ಪ್ರೋತ್ಸಾಹ ಪರಿಗಣಿಸಲಾಗಿದೆ ಎಂದು ಆಯ್ಕೆ ಸಮಿತಿ ತಿಳಿಸಿದೆ. ಗೋದ್ರೆಜ್ ಸಮೂಹದ ಆದಿ ಗೋದ್ರೆಜ್ ಅವರ ಜೀವಮಾನದ ಸಾಧನೆ ಪರಿಗಣಿಸಿ ವಿಶೇಷ ಪ್ರಶಸ್ತಿ ನೀಡಲಾಗಿದೆ.