ಕಳೆದ ಆರು ತಿಂಗಳಿನಿಂದ ನಾವು ಪ್ರತಿನಿತ್ಯ ಬ್ಯಾಂಕ್ ವಹಿವಾಟುಗಳ ಮೇಲೆ ನಿಗಾ ಇರಿಸಿದ್ದೇವೆ. ಆರ್ಬಿಐ ಹೊಸ ಕ್ರಮಗಳನ್ನು ಕೈಗೊಳ್ಳುವ ಮೂಲಕ ಶೀಘ್ರವೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದೆ. ಆರ್ಬಿಐ ಮತ್ತು ಸರ್ಕಾರ ಸಮಸ್ಯೆಗಳ ಪರಿಹಾರಕ್ಕೆ ಯತ್ನಿಸುತ್ತಿದೆ ಎಂದು ನಾನು ಠೇವಣಿದಾರರಿಗೆ ಮತ್ತು ಹೂಡಿಕೆದಾರರಿಗೆ ಭರವಸೆ ನೀಡುತ್ತಿದ್ದೇನೆ. ಆತಂಕ ಪಡುವ ಅಗತ್ಯವಿಲ್ಲ. ನಿಮ್ಮ ಹಣ ಸುರಕ್ಷಿತವಾಗಿದೆ ಎಂದು ಸಚಿವೆ ಹೇಳಿದ್ದಾರೆ.