<p><strong>ನವದೆಹಲಿ:</strong> ಬಾಬಾ ರಾಮ್ ದೇವ್, ಅವರ ತಮ್ಮ ರಾಮ್ ಭರತ್ ಹಾಗೂ ಆಚಾರ್ಯ ಬಾಲಕೃಷ್ಣ ಅವರುಖಾದ್ಯ ತೈಲ ತಯಾರಿಸುವ ರುಚಿ ಸೋಯಾ ಕಂಪನಿಯ ಆಡಳಿತ ಮಂಡಳಿ ಸೇರಲಿದ್ದಾರೆ.</p>.<p>ಹಿಂದಿನ ವರ್ಷ ನಡೆದ ದಿವಾಳಿ ಪ್ರಕ್ರಿಯೆಯಲ್ಲಿ ಪತಂಜಲಿ ಆಯುರ್ವೇದ ಸಂಸ್ಥೆಯು ರುಚಿ ಸೋಯಾ ಕಂಪನಿಯನ್ನು ಸ್ವಾಧೀನಪಡಿಸಿಕೊಂಡಿತ್ತು. ಇದರಿಂದಾಗಿ ಹೊಸ ಆಡಳಿತ ಮಂಡಳಿಯು ಈ ಮೂವರನ್ನು ನೇಮಕ ಮಾಡಿಕೊಳ್ಳುವ ಹಕ್ಕನ್ನು ಪಡೆದುಕೊಂಡಿದ್ದು, ಅದಕ್ಕೆ ಒಪ್ಪಿಗೆ ನೀಡುವಂತೆ ರುಚಿ ಸೋಯಾ ಇಂಡಸ್ಟ್ರೀಸ್ ಲಿಮಿಟೆಡ್ ತನ್ನ ಷೇರುದಾರರನ್ನು ಕೇಳಿದೆ.</p>.<p>ಆಗಸ್ಟ್ 19ರಂದು ನಡೆದ ನಿರ್ದೇಶಕ ಮಂಡಳಿ ಸಭೆಯಲ್ಲಿ ಭರತ್ ಅವರನ್ನು ಆಗಸ್ಟ್ 19ರಿಂದ 2022ರ ಡಿಸೆಂಬರ್ 17ರವರೆಗಿನ ಅವಧಿಗೆ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಆಚಾರ್ಯ ಬಾಲಕೃಷ್ಣ ಅವರನ್ನು ಕಂಪನಿಯ ಅಧ್ಯಕ್ಷರನ್ನಾಗಿ ಹಾಗೂ ರಾಮ್ದೇವ್ ಅವರನ್ನು ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಈ ನೇಮಕಕ್ಕೆ ಷೇರುದಾರರ ಒಪ್ಪಿಗೆ ಬೇಕಿದೆ ಎಂದು ರುಚಿ ಸೋಯಾ ತಿಳಿಸಿದೆ.</p>.<p>ಪತಂಜಲಿ ಆಯುರ್ವೇದ ಸಂಸ್ಥೆಯು ₹ 4,350 ಕೋಟಿಗೆ ಸ್ವಾಧೀನ ಪಡಿಸಿಕೊಂಡಿತ್ತು. ಇದರಲ್ಲಿ ₹ 4,235 ಕೋಟಿಯನ್ನು ರುಚಿ ಸೋಯಾ ಕಂಪನಿಯ ಸಾಲ ಮರುಪಾವತಿಸಲು ಹಾಗೂ ಉಳಿದ ₹ 115 ಕೋಟಿಯನ್ನು ದುಡಿಯುವ ಬಂಡವಾಳದ ಉದ್ದೇಶಕ್ಕೆ ಬಳಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಾಬಾ ರಾಮ್ ದೇವ್, ಅವರ ತಮ್ಮ ರಾಮ್ ಭರತ್ ಹಾಗೂ ಆಚಾರ್ಯ ಬಾಲಕೃಷ್ಣ ಅವರುಖಾದ್ಯ ತೈಲ ತಯಾರಿಸುವ ರುಚಿ ಸೋಯಾ ಕಂಪನಿಯ ಆಡಳಿತ ಮಂಡಳಿ ಸೇರಲಿದ್ದಾರೆ.</p>.<p>ಹಿಂದಿನ ವರ್ಷ ನಡೆದ ದಿವಾಳಿ ಪ್ರಕ್ರಿಯೆಯಲ್ಲಿ ಪತಂಜಲಿ ಆಯುರ್ವೇದ ಸಂಸ್ಥೆಯು ರುಚಿ ಸೋಯಾ ಕಂಪನಿಯನ್ನು ಸ್ವಾಧೀನಪಡಿಸಿಕೊಂಡಿತ್ತು. ಇದರಿಂದಾಗಿ ಹೊಸ ಆಡಳಿತ ಮಂಡಳಿಯು ಈ ಮೂವರನ್ನು ನೇಮಕ ಮಾಡಿಕೊಳ್ಳುವ ಹಕ್ಕನ್ನು ಪಡೆದುಕೊಂಡಿದ್ದು, ಅದಕ್ಕೆ ಒಪ್ಪಿಗೆ ನೀಡುವಂತೆ ರುಚಿ ಸೋಯಾ ಇಂಡಸ್ಟ್ರೀಸ್ ಲಿಮಿಟೆಡ್ ತನ್ನ ಷೇರುದಾರರನ್ನು ಕೇಳಿದೆ.</p>.<p>ಆಗಸ್ಟ್ 19ರಂದು ನಡೆದ ನಿರ್ದೇಶಕ ಮಂಡಳಿ ಸಭೆಯಲ್ಲಿ ಭರತ್ ಅವರನ್ನು ಆಗಸ್ಟ್ 19ರಿಂದ 2022ರ ಡಿಸೆಂಬರ್ 17ರವರೆಗಿನ ಅವಧಿಗೆ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಆಚಾರ್ಯ ಬಾಲಕೃಷ್ಣ ಅವರನ್ನು ಕಂಪನಿಯ ಅಧ್ಯಕ್ಷರನ್ನಾಗಿ ಹಾಗೂ ರಾಮ್ದೇವ್ ಅವರನ್ನು ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಈ ನೇಮಕಕ್ಕೆ ಷೇರುದಾರರ ಒಪ್ಪಿಗೆ ಬೇಕಿದೆ ಎಂದು ರುಚಿ ಸೋಯಾ ತಿಳಿಸಿದೆ.</p>.<p>ಪತಂಜಲಿ ಆಯುರ್ವೇದ ಸಂಸ್ಥೆಯು ₹ 4,350 ಕೋಟಿಗೆ ಸ್ವಾಧೀನ ಪಡಿಸಿಕೊಂಡಿತ್ತು. ಇದರಲ್ಲಿ ₹ 4,235 ಕೋಟಿಯನ್ನು ರುಚಿ ಸೋಯಾ ಕಂಪನಿಯ ಸಾಲ ಮರುಪಾವತಿಸಲು ಹಾಗೂ ಉಳಿದ ₹ 115 ಕೋಟಿಯನ್ನು ದುಡಿಯುವ ಬಂಡವಾಳದ ಉದ್ದೇಶಕ್ಕೆ ಬಳಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>