<p><strong>ನವದೆಹಲಿ</strong>: ಕರ್ನಾಟಕದ ಕೊಪ್ಪಳದಲ್ಲಿ ಇಂಟಿಗ್ರೇಟೆಡ್ ಉಕ್ಕಿನ ಕಾರ್ಖಾನೆ ಸ್ಥಾಪನೆಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಅನುಮತಿ ನೀಡಿದೆ ಎಂದು ಬಲ್ಡೋಟಾ ಸಮೂಹ ತಿಳಿಸಿದೆ.</p>.<p>ಉಕ್ಕು ಕಾರ್ಖಾನೆ ಸ್ಥಾಪನೆಗೆ ₹54 ಸಾವಿರ ಕೋಟಿ ಹೂಡಿಕೆ ಮಾಡಲಾಗುತ್ತಿದ್ದು, ಒಟ್ಟು 10.5 ದಶಲಕ್ಷ ಟನ್ ಉತ್ಪಾದನೆಯ ಗುರಿ ಹೊಂದಲಾಗಿದೆ ಎಂದು ತಿಳಿಸಿದೆ. </p>.<p>ಬಲ್ಡೋಟಾ ಸಮೂಹವು ನವೀಕರಿಸಬಹುದಾದ ಇಂಧನ (ಪವನ ಮತ್ತು ಸೌರ), ಹಡಗು, ಅನಿಲ ಮತ್ತು ಗಣಿಗಾರಿಕೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ.</p>.<p class="bodytext">‘ಕಾರ್ಖಾನೆಯಿಂದ ಪರಿಸರದ ಮೇಲೆ ಆಗುವ ಪರಿಣಾಮಗಳ ಬಗ್ಗೆ ಮೌಲ್ಯಮಾಪನ ನಡೆಸಿದ ಬಳಿಕವೇ ಸಚಿವಾಲಯವು ಮೊದಲ ಹಂತದಲ್ಲಿ 3.7 ದಶಲಕ್ಷ ಟನ್ ಉತ್ಪಾದನೆಗೆ ಅನುಮತಿ ನೀಡಿದೆ. ಪ್ರಸಕ್ತ ವರ್ಷದಲ್ಲಿಯೇ ಯೋಜನೆಯ ಜಾರಿಗೆ ನಿರ್ಧರಿಸಲಾಗಿದೆ’ ಎಂದು ಕಂಪನಿಯ ಉಪಾಧ್ಯಕ್ಷ ನಾಗರಾಜ್ ಎನ್.ಬಿ. ತಿಳಿಸಿದ್ದಾರೆ.</p>.<p>ಮುಂದಿನ ಐದು ವರ್ಷಗಳಲ್ಲಿ ಹಂತ ಹಂತವಾಗಿ ಉಕ್ಕು ಉತ್ಪಾದನೆಯಲ್ಲಿ ನಿಗದಿತ ಗುರಿ ಸಾಧನೆಗೆ ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. </p>.<p>ಪ್ರಸ್ತುತ ಭಾರತವು 180 ದಶಲಕ್ಷ ಟನ್ನಷ್ಟು ಉಕ್ಕು ಉತ್ಪಾದನಾ ಸಾಮರ್ಥ್ಯ ಹೊಂದಿದೆ. 2030ರ ವೇಳೆಗೆ ಇದನ್ನು 300 ದಶಲಕ್ಷ ಟನ್ಗೆ ವಿಸ್ತರಿಸುವ ಗುರಿ ಹೊಂದಿದೆ. ಇದಕ್ಕೆ ಸಮೂಹವು 10.5 ದಶಲಕ್ಷ ಟನ್ ಕೊಡುಗೆ ನೀಡಲಿದೆ ಎಂದು ವಿವರಿಸಿದ್ದಾರೆ.</p>.<p>ಉದ್ದೇಶಿತ ಈ ಯೋಜನೆಯಡಿ 296 ಮೆಗಾವಾಟ್ ಸಾಮರ್ಥ್ಯದ ವಿದ್ಯುತ್ ಉತ್ಪಾದನಾ ಕಾರ್ಖಾನೆ ವಿಸ್ತರಿಸುವ ಗುರಿಯನ್ನೂ ಹೊಂದಲಾಗಿದೆ ಎಂದು ಹೇಳಿದ್ದಾರೆ. </p>.<p>ಕಾರ್ಖಾನೆ ಸ್ಥಾಪನೆಯಿಂದ ಪರಿಸರದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಹಾಗಾಗಿ, ಸ್ಥಾಪನೆಗೆ ಅನುಮತಿ ನೀಡಬಾರದು ಎಂದು ಕೆಲವು ಸ್ಥಳೀಯ ಸಂಘ–ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿವೆ ಎಂದು ತಿಳಿಸಿದ್ದಾರೆ.</p>.<p>ಹಾಗಾಗಿಯೇ, ಯೋಜನೆಯ ಜಾರಿಯಿಂದ ಪರಿಸರದ ಮೇಲಾಗುವ ಪರಿಣಾಮಗಳ ಬಗ್ಗೆ ಮೌಲ್ಯಮಾಪನ ನಡೆಸಲಾಗಿದೆ. ಯೋಜನೆಯ ವಿನ್ಯಾಸ, ಸುಸ್ಥಿರತೆ, ಪರಿಸರ ಮಾಲಿನ್ಯ ಮತ್ತು ತ್ಯಾಜ್ಯ ನಿರ್ವಹಣೆ ಬಗ್ಗೆ ಕಂಪನಿಯಿಂದ ಕೈಗೊಳ್ಳಲಿರುವ ಸುರಕ್ಷತಾ ಕ್ರಮಗಳ ಬಗ್ಗೆ ಮೌಲ್ಯಮಾಪನ ನಡೆಸಲಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕರ್ನಾಟಕದ ಕೊಪ್ಪಳದಲ್ಲಿ ಇಂಟಿಗ್ರೇಟೆಡ್ ಉಕ್ಕಿನ ಕಾರ್ಖಾನೆ ಸ್ಥಾಪನೆಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಅನುಮತಿ ನೀಡಿದೆ ಎಂದು ಬಲ್ಡೋಟಾ ಸಮೂಹ ತಿಳಿಸಿದೆ.</p>.<p>ಉಕ್ಕು ಕಾರ್ಖಾನೆ ಸ್ಥಾಪನೆಗೆ ₹54 ಸಾವಿರ ಕೋಟಿ ಹೂಡಿಕೆ ಮಾಡಲಾಗುತ್ತಿದ್ದು, ಒಟ್ಟು 10.5 ದಶಲಕ್ಷ ಟನ್ ಉತ್ಪಾದನೆಯ ಗುರಿ ಹೊಂದಲಾಗಿದೆ ಎಂದು ತಿಳಿಸಿದೆ. </p>.<p>ಬಲ್ಡೋಟಾ ಸಮೂಹವು ನವೀಕರಿಸಬಹುದಾದ ಇಂಧನ (ಪವನ ಮತ್ತು ಸೌರ), ಹಡಗು, ಅನಿಲ ಮತ್ತು ಗಣಿಗಾರಿಕೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ.</p>.<p class="bodytext">‘ಕಾರ್ಖಾನೆಯಿಂದ ಪರಿಸರದ ಮೇಲೆ ಆಗುವ ಪರಿಣಾಮಗಳ ಬಗ್ಗೆ ಮೌಲ್ಯಮಾಪನ ನಡೆಸಿದ ಬಳಿಕವೇ ಸಚಿವಾಲಯವು ಮೊದಲ ಹಂತದಲ್ಲಿ 3.7 ದಶಲಕ್ಷ ಟನ್ ಉತ್ಪಾದನೆಗೆ ಅನುಮತಿ ನೀಡಿದೆ. ಪ್ರಸಕ್ತ ವರ್ಷದಲ್ಲಿಯೇ ಯೋಜನೆಯ ಜಾರಿಗೆ ನಿರ್ಧರಿಸಲಾಗಿದೆ’ ಎಂದು ಕಂಪನಿಯ ಉಪಾಧ್ಯಕ್ಷ ನಾಗರಾಜ್ ಎನ್.ಬಿ. ತಿಳಿಸಿದ್ದಾರೆ.</p>.<p>ಮುಂದಿನ ಐದು ವರ್ಷಗಳಲ್ಲಿ ಹಂತ ಹಂತವಾಗಿ ಉಕ್ಕು ಉತ್ಪಾದನೆಯಲ್ಲಿ ನಿಗದಿತ ಗುರಿ ಸಾಧನೆಗೆ ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. </p>.<p>ಪ್ರಸ್ತುತ ಭಾರತವು 180 ದಶಲಕ್ಷ ಟನ್ನಷ್ಟು ಉಕ್ಕು ಉತ್ಪಾದನಾ ಸಾಮರ್ಥ್ಯ ಹೊಂದಿದೆ. 2030ರ ವೇಳೆಗೆ ಇದನ್ನು 300 ದಶಲಕ್ಷ ಟನ್ಗೆ ವಿಸ್ತರಿಸುವ ಗುರಿ ಹೊಂದಿದೆ. ಇದಕ್ಕೆ ಸಮೂಹವು 10.5 ದಶಲಕ್ಷ ಟನ್ ಕೊಡುಗೆ ನೀಡಲಿದೆ ಎಂದು ವಿವರಿಸಿದ್ದಾರೆ.</p>.<p>ಉದ್ದೇಶಿತ ಈ ಯೋಜನೆಯಡಿ 296 ಮೆಗಾವಾಟ್ ಸಾಮರ್ಥ್ಯದ ವಿದ್ಯುತ್ ಉತ್ಪಾದನಾ ಕಾರ್ಖಾನೆ ವಿಸ್ತರಿಸುವ ಗುರಿಯನ್ನೂ ಹೊಂದಲಾಗಿದೆ ಎಂದು ಹೇಳಿದ್ದಾರೆ. </p>.<p>ಕಾರ್ಖಾನೆ ಸ್ಥಾಪನೆಯಿಂದ ಪರಿಸರದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಹಾಗಾಗಿ, ಸ್ಥಾಪನೆಗೆ ಅನುಮತಿ ನೀಡಬಾರದು ಎಂದು ಕೆಲವು ಸ್ಥಳೀಯ ಸಂಘ–ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿವೆ ಎಂದು ತಿಳಿಸಿದ್ದಾರೆ.</p>.<p>ಹಾಗಾಗಿಯೇ, ಯೋಜನೆಯ ಜಾರಿಯಿಂದ ಪರಿಸರದ ಮೇಲಾಗುವ ಪರಿಣಾಮಗಳ ಬಗ್ಗೆ ಮೌಲ್ಯಮಾಪನ ನಡೆಸಲಾಗಿದೆ. ಯೋಜನೆಯ ವಿನ್ಯಾಸ, ಸುಸ್ಥಿರತೆ, ಪರಿಸರ ಮಾಲಿನ್ಯ ಮತ್ತು ತ್ಯಾಜ್ಯ ನಿರ್ವಹಣೆ ಬಗ್ಗೆ ಕಂಪನಿಯಿಂದ ಕೈಗೊಳ್ಳಲಿರುವ ಸುರಕ್ಷತಾ ಕ್ರಮಗಳ ಬಗ್ಗೆ ಮೌಲ್ಯಮಾಪನ ನಡೆಸಲಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>