ಬೆಂಗಳೂರು: ವಿವಿಧ ಬ್ಯಾಂಕ್ ಸಂಘಟನೆಗಳ ಮುಷ್ಕರದಿಂದಾಗಿ ರಾಷ್ಟ್ರೀಕೃತ ಬ್ಯಾಂಕ್ಗಳ ಶಾಖೆಗಳಲ್ಲಿ ಹಣ ವರ್ಗಾವಣೆ, ಸ್ವೀಕೃತಿ, ಸಾಲ ಮಂಜೂರಾತಿ, ಚೆಕ್ ಕ್ಲಿಯರೆನ್ಸ್ನಂತಹ ಸೇವೆಗಳಿಗೆ ಮಂಗಳವಾರವೂ ಅಡ್ಡಿ ಉಂಟಾಯಿತು.
‘ಎರಡು ದಿನ ಮಾತ್ರವೇ ಮುಷ್ಕರ ನಡೆಸಲು ನಿರ್ಧರಿಸಲಾಗಿತ್ತು. ಇನ್ನೂ ಕೆಲವು ದಿನ ನೋಡಿ ನಮ್ಮ ಮುಂದಿನ ನಡೆ ಬಗ್ಗೆ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ (ಯುಎಫ್ಬಿಯು) ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆಯ (ಐಎನ್ಬಿಇಎಫ್) ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಕೆ. ನರಸಿಂಹಮೂರ್ತಿ ತಿಳಿಸಿದರು.
ಕೇಂದ್ರ ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್ಗಳ ಖಾಸಗೀಕರಣ ಪ್ರಸ್ತಾವ ವಿರೋಧಿಸಿ ಈ ಮುಷ್ಕರ ನಡೆದಿದೆ.