ನವದೆಹಲಿ: ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಎರಡು ದಿನಗಳ ಮುಷ್ಕರಕ್ಕೆ ಕೆಲವು ಬ್ಯಾಂಕ್ ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ, ಸೋಮವಾರ ಮತ್ತು ಮಂಗಳವಾರ ಬ್ಯಾಂಕಿಂಗ್ ಸೇವೆಗಳಿಗೆ ಭಾಗಶಃ ಅಡ್ಡಿಯಾಗುವ ಸಾಧ್ಯತೆ ಇದೆ. ‘ಕೇಂದ್ರ ಸರ್ಕಾರವು ಜನ ವಿರೋಧಿ ಆರ್ಥಿಕ ನೀತಿಗಳು ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ, ಇದನ್ನು ವಿರೋಧಿಸಬೇಕು’ ಎಂದು ಈ ಮುಷ್ಕರಕ್ಕೆ ಕರೆ ನೀಡಲಾಗಿದೆ.