<p><strong>ನವದೆಹಲಿ</strong>: ಹಲವು ಬ್ಯಾಂಕ್ ಒಕ್ಕೂಟಗಳು ಇದೇ 15 ಮತ್ತು 16ರಂದು ಮುಷ್ಕರಕ್ಕೆ ಕರೆ ನೀಡಿವೆ. ಇದರಿಂದಾಗಿ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಉಂಟಾಗುವ ಸಂಭವವಿದೆ ಎಂದು ಕೆನರಾ ಬ್ಯಾಂಕ್ ಗುರುವಾರ ಹೇಳಿದೆ.</p>.<p>ಬ್ಯಾಂಕ್ ಒಕ್ಕೂಟಗಳ ಸಂಯುಕ್ತ ವೇದಿಕೆಯು (ಯುಎಫ್ಬಿಯು) ಇದೇ ತಿಂಗಳ 15 ಮತ್ತು 16ರಂದು ಮುಷ್ಕರಕ್ಕೆ ಕರೆ ನೀಡಿದೆ. ಬ್ಯಾಂಕ್ಗೆ ಸಂಬಂಧಿಸಿದ ಸಮಸ್ಯೆಗಳಿಗಾಗಿ ಅಲ್ಲ, ಉದ್ಯಮದ ಮಟ್ಟದಲ್ಲಿ ಇರುವ ಸಮಸ್ಯೆಗಳ ನಿವಾರಣೆಗೆ ಒತ್ತಾಯಿಸಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಭಾರತೀಯ ಬ್ಯಾಂಕ್ಗಳ ಒಕ್ಕೂಟವು (ಐಬಿಎ) ಮಾಹಿತಿ ನೀಡಿದೆ ಎಂದು ಷೇರುಪೇಟೆಗೆ ಕೆನರಾ ಬ್ಯಾಂಕ್ ತಿಳಿಸಿದೆ.</p>.<p>ಉದ್ದೇಶಿತ ಮುಷ್ಕರದ ದಿನ ಕಚೇರಿಗಳು ಮತ್ತು ಶಾಖೆಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಆಗದಂತೆ ಮಾಡಲು ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಹೀಗಿದ್ದರೂ ಸೇವೆಗಳ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಬ್ಯಾಂಕ್ ಹೇಳಿದೆ.</p>.<p>ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್ಗಳನ್ನು ಖಾಸಗೀಕರಣಗೊಳಿಸುವ ಉದ್ದೇಶದ ವಿರುದ್ಧ ಬ್ಯಾಂಕ್ ನೌಕರರ ಒಕ್ಕೂಟಗಳು ಮುಷ್ಕರಕ್ಕೆ ಕರೆ ನೀಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹಲವು ಬ್ಯಾಂಕ್ ಒಕ್ಕೂಟಗಳು ಇದೇ 15 ಮತ್ತು 16ರಂದು ಮುಷ್ಕರಕ್ಕೆ ಕರೆ ನೀಡಿವೆ. ಇದರಿಂದಾಗಿ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಉಂಟಾಗುವ ಸಂಭವವಿದೆ ಎಂದು ಕೆನರಾ ಬ್ಯಾಂಕ್ ಗುರುವಾರ ಹೇಳಿದೆ.</p>.<p>ಬ್ಯಾಂಕ್ ಒಕ್ಕೂಟಗಳ ಸಂಯುಕ್ತ ವೇದಿಕೆಯು (ಯುಎಫ್ಬಿಯು) ಇದೇ ತಿಂಗಳ 15 ಮತ್ತು 16ರಂದು ಮುಷ್ಕರಕ್ಕೆ ಕರೆ ನೀಡಿದೆ. ಬ್ಯಾಂಕ್ಗೆ ಸಂಬಂಧಿಸಿದ ಸಮಸ್ಯೆಗಳಿಗಾಗಿ ಅಲ್ಲ, ಉದ್ಯಮದ ಮಟ್ಟದಲ್ಲಿ ಇರುವ ಸಮಸ್ಯೆಗಳ ನಿವಾರಣೆಗೆ ಒತ್ತಾಯಿಸಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಭಾರತೀಯ ಬ್ಯಾಂಕ್ಗಳ ಒಕ್ಕೂಟವು (ಐಬಿಎ) ಮಾಹಿತಿ ನೀಡಿದೆ ಎಂದು ಷೇರುಪೇಟೆಗೆ ಕೆನರಾ ಬ್ಯಾಂಕ್ ತಿಳಿಸಿದೆ.</p>.<p>ಉದ್ದೇಶಿತ ಮುಷ್ಕರದ ದಿನ ಕಚೇರಿಗಳು ಮತ್ತು ಶಾಖೆಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಆಗದಂತೆ ಮಾಡಲು ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಹೀಗಿದ್ದರೂ ಸೇವೆಗಳ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಬ್ಯಾಂಕ್ ಹೇಳಿದೆ.</p>.<p>ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್ಗಳನ್ನು ಖಾಸಗೀಕರಣಗೊಳಿಸುವ ಉದ್ದೇಶದ ವಿರುದ್ಧ ಬ್ಯಾಂಕ್ ನೌಕರರ ಒಕ್ಕೂಟಗಳು ಮುಷ್ಕರಕ್ಕೆ ಕರೆ ನೀಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>