ಮಲ್ಯ ಪ್ರಕರಣ: ಬ್ಯಾಂಕ್ಗಳಿಂದ ₹ 792 ಕೋಟಿ ವಸೂಲು

ನವದೆಹಲಿ: ಉದ್ಯಮಿ ವಿಜಯ್ ಮಲ್ಯ ಅವರಿಗೆ ಸಾಲ ನೀಡಿದ ಎಸ್ಬಿಐ ನೇತೃತ್ವದ ಬ್ಯಾಂಕ್ಗಳ ಒಕ್ಕೂಟಕ್ಕೆ ಶುಕ್ರವಾರ ₹ 792.11 ಕೋಟಿ ಮರುಪಾವತಿ ಆಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಅಡಿ ಈ ಹಿಂದೆ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದ ಕೆಲವು ಷೇರುಗಳನ್ನು ಮಾರಾಟ ಮಾಡಿ ಈ ಮೊತ್ತವನ್ನು ಪಡೆಯಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ.) ತಿಳಿಸಿದೆ.
ಹಿಂದಿನ ತಿಂಗಳಲ್ಲಿ ಕೂಡ ಇದೇ ಬಗೆಯಲ್ಲಿ ಷೇರುಗಳ ಮಾರಾಟದ ಮೂಲಕ ಎಸ್ಬಿಐ ನೇತೃತ್ವದ ಬ್ಯಾಂಕ್ಗಳ ಒಕ್ಕೂಟವು ಮಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ₹ 7,181 ಕೋಟಿ ವಸೂಲು ಮಾಡಿತ್ತು. ಮಲ್ಯ ಅವರು ಭಾರತದ ಬ್ಯಾಂಕ್ಗಳಿಗೆ ₹ 9 ಸಾವಿರ ಕೋಟಿ ವಂಚಿಸಿರುವ ಆರೋಪ ಎದುರಿಸುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.