<p><strong>ನವದೆಹಲಿ:</strong>ಟೆಲಿಕಾಂ ಕಂಪನಿಗಳು ದಿವಾಳಿಯಾದರೆ ಬ್ಯಾಂಕ್ಗಳೇ ಬೆಲೆ ತೆರಬೇಕಾದೀತು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಅಧ್ಯಕ್ಷ ರಜನೀಶ್ ಕುಮಾರ್ ಶನಿವಾರ ಹೇಳಿದ್ದಾರೆ.</p>.<p>ಕೆಂದ್ರ ಸರ್ಕಾರಕ್ಕೆ ₹ 1.47 ಲಕ್ಷ ಕೋಟಿ ಬಾಕಿ ಪಾವತಿಸುವ ಸಂಬಂಧ ಸುಪ್ರೀಂಕೋರ್ಟ್ ಶುಕ್ರವಾರ ದೂರಸಂಪರ್ಕ ಸೇವಾ ಕಂಪನಿಗಳನ್ನು ತರಾಟೆಗೆ ತೆಗೆದುಕೊಂಡಿತ್ತು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/sc-orders-telecos-to-clear-agr-dues-by-march-17-705536.html" target="_blank">₹1.47 ಲಕ್ಷ ಕೋಟಿ ಬಾಕಿ ಪಾವತಿಸದ ಮೊಬೈಲ್ ಕಂಪೆನಿಗಳಿಗೆ ಕೋರ್ಟ್ ತೀವ್ರ ತರಾಟೆ</a></p>.<p>ನಾವು ಕಾದು ನೋಡಲಿದ್ದೇವೆ ಎಂದಿರುವರಜನೀಶ್ ಕುಮಾರ್, ಟೆಲಿಕಾಂ ಕಂಪನಿಗಳು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸುತ್ತವೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳುವ ಹೊಣೆಗಾರಿಕೆ ಸರ್ಕಾರದ ಅಧೀನದಲ್ಲಿರುವ ದೂರಸಂಪರ್ಕ ಇಲಾಖೆಗೆ ಸಂಬಂಧಿಸಿದ್ದು ಎಂದಿದ್ದಾರೆ.</p>.<p>‘ಯಾವುದೇ ಒಂದು ಉದ್ಯಮದ ಮೇಲೆ ನಕಾರಾತ್ಮಕ ಪರಿಣಾಮವಾದರೆ ಅದು ದೊಡ್ಡ ವ್ಯವಸ್ಥೆಯೊಂದರ ಮೇಲೆಯೇ ಪರಿಣಾಮ ಬೀರುತ್ತದೆ. ಬ್ಯಾಂಕ್, ಉದ್ಯೋಗಿ, ಗ್ರಾಹಕ ಎಲ್ಲರಿಗೂ ಅದು ತಟ್ಟುತ್ತದೆ. ಹೀಗಾಗಿ ನಾವೂ ಬೆಲೆ ತೆರಬೇಕಾಗುತ್ತದೆ’ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಟೆಲಿಕಾಂ ಕಂಪನಿಗಳು ದಿವಾಳಿಯಾದರೆ ಬ್ಯಾಂಕ್ಗಳೇ ಬೆಲೆ ತೆರಬೇಕಾದೀತು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಅಧ್ಯಕ್ಷ ರಜನೀಶ್ ಕುಮಾರ್ ಶನಿವಾರ ಹೇಳಿದ್ದಾರೆ.</p>.<p>ಕೆಂದ್ರ ಸರ್ಕಾರಕ್ಕೆ ₹ 1.47 ಲಕ್ಷ ಕೋಟಿ ಬಾಕಿ ಪಾವತಿಸುವ ಸಂಬಂಧ ಸುಪ್ರೀಂಕೋರ್ಟ್ ಶುಕ್ರವಾರ ದೂರಸಂಪರ್ಕ ಸೇವಾ ಕಂಪನಿಗಳನ್ನು ತರಾಟೆಗೆ ತೆಗೆದುಕೊಂಡಿತ್ತು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/sc-orders-telecos-to-clear-agr-dues-by-march-17-705536.html" target="_blank">₹1.47 ಲಕ್ಷ ಕೋಟಿ ಬಾಕಿ ಪಾವತಿಸದ ಮೊಬೈಲ್ ಕಂಪೆನಿಗಳಿಗೆ ಕೋರ್ಟ್ ತೀವ್ರ ತರಾಟೆ</a></p>.<p>ನಾವು ಕಾದು ನೋಡಲಿದ್ದೇವೆ ಎಂದಿರುವರಜನೀಶ್ ಕುಮಾರ್, ಟೆಲಿಕಾಂ ಕಂಪನಿಗಳು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸುತ್ತವೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳುವ ಹೊಣೆಗಾರಿಕೆ ಸರ್ಕಾರದ ಅಧೀನದಲ್ಲಿರುವ ದೂರಸಂಪರ್ಕ ಇಲಾಖೆಗೆ ಸಂಬಂಧಿಸಿದ್ದು ಎಂದಿದ್ದಾರೆ.</p>.<p>‘ಯಾವುದೇ ಒಂದು ಉದ್ಯಮದ ಮೇಲೆ ನಕಾರಾತ್ಮಕ ಪರಿಣಾಮವಾದರೆ ಅದು ದೊಡ್ಡ ವ್ಯವಸ್ಥೆಯೊಂದರ ಮೇಲೆಯೇ ಪರಿಣಾಮ ಬೀರುತ್ತದೆ. ಬ್ಯಾಂಕ್, ಉದ್ಯೋಗಿ, ಗ್ರಾಹಕ ಎಲ್ಲರಿಗೂ ಅದು ತಟ್ಟುತ್ತದೆ. ಹೀಗಾಗಿ ನಾವೂ ಬೆಲೆ ತೆರಬೇಕಾಗುತ್ತದೆ’ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>