ಬೆಂಗಳೂರು: ಕೇಂದ್ರ ಸರ್ಕಾರದ ಮಾಲೀಕತ್ವದ ‘ನವರತ್ನ’ ಕಂಪನಿಗಳಲ್ಲಿ ಒಂದಾಗಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಕಂಪನಿಯು ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯಿಂದ ಪಿಎಂ ಕೇರ್ಸ್ ನಿಧಿಗೆ ₹ 5.45 ಕೋಟಿ ದೇಣಿಗೆ ನೀಡಿದೆ.
ಸಿಎಸ್ಆರ್ ನಿಧಿಯಲ್ಲಿ ಇರುವ ₹ 4 ಕೋಟಿಯನ್ನು ಬಿಇಎಲ್, ಆರು ರಾಜ್ಯಗಳಲ್ಲಿನ 12 ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಆರಂಭಿಸಲು ವಿನಿಯೋಗಿಸಲಿದೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.