<p><strong>ಬೆಂಗಳೂರು</strong>: ಸರ್ಕಾರವು ಕಾರ್ಮಿಕರ ವೇತನ ಹೆಚ್ಚಳ ಮಾಡಿರುವುದರಿಂದ ಗ್ರಾಹಕರ ಮೇಲೆ ದುಷ್ಪರಿಣಾಮ ಬೀರಲಿದೆ. ಬಿರಿಯಾನಿ ದರ ₹500ಕ್ಕೆ ತಲುಪಲಿದೆ ಎಂದು ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ (ಕೆಎಸ್ಎಚ್ಎ) ಎಚ್ಚರಿಸಿದೆ.</p>.<p>ಪ್ರಸ್ತುತ ಇರುವ ವೇತನಕ್ಕೆ ಹೋಲಿಸಿದರೆ, ಕನಿಷ್ಠ ವೇತನದಲ್ಲಿ ಸರಾಸರಿ ಶೇ 60ರಷ್ಟು ಏರಿಕೆ ಮಾಡಲಾಗಿದೆ. ಇದು ಹೋಟೆಲ್, ಉಪಾಹಾರ ಗೃಹಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಒಂದು ಪ್ಲೇಟ್ ಇಡ್ಲಿ ಬೆಲೆ ಪ್ರಸ್ತುತ ₹50 ಇರುವುದು ₹90ಕ್ಕೆ ಏರಬಹುದು. ₹80-90 ಇರುವ ಮಸಾಲೆ ದೋಸೆ ದರ ₹150ಕ್ಕೆ ತಲುಪಬಹುದು. ಸಸ್ಯಾಹಾರಿ ಊಟದ ದರ ₹250ಕ್ಕೆ ಏರಬಹುದು ಎಂದು ಸಂಘದ ಅಧ್ಯಕ್ಷ ಜಿ.ಕೆ. ಶೆಟ್ಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಸರ್ಕಾರವು ತಾಲ್ಲೂಕು ಮಟ್ಟದಲ್ಲಿ ಕೌಶಲರಹಿತ ಕಾರ್ಮಿಕರಿಗೆ ₹19,300, ಜಿಬಿಎ ವ್ಯಾಪ್ತಿಯಲ್ಲಿ ₹23,376ರಿಂದ ಹಿಡಿದು ಕೌಶಲ ಹೊಂದಿದ ಕಾರ್ಮಿಕರಿಗೆ ₹31,100ರವರೆಗೆ ಕನಿಷ್ಠ ವೇತನ ಪರಿಷ್ಕರಿಸಿದೆ. ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ ₹1,884 ರಿಂದ ₹3,152ಕ್ಕೆ ಏರಿಕೆಯಾಗಿದೆ. ಎಲ್ಲ ದಿನಸಿ ವಸ್ತುಗಳು, ವಿದ್ಯುತ್ ದರ ಹಾಗೂ ಕಸದ ಸೆಸ್ ಏರಿಕೆಯಾಗಿದ್ದು, ಸಣ್ಣ ಹೋಟೆಲ್ ಮಾಲೀಕರ ಮೇಲಿನ ಒತ್ತಡವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಿದ್ದಾರೆ.</p>.<p>ಕನಿಷ್ಠ ವೇತನ ಪರಿಷ್ಕರಣೆ ಜಾರಿಗೊಳಿಸುವ ಸಂದರ್ಭದಲ್ಲಿ ಆತಿಥ್ಯ ಕ್ಷೇತ್ರವನ್ನು ಪ್ರತ್ಯೇಕ ವರ್ಗವಾಗಿ ಪರಿಗಣಿಸುವಂತೆ ಸರ್ಕಾರಕ್ಕೆ ಸಂಘ ಮನವಿ ಮಾಡಿತ್ತು. ಆದರೆ, ಆ ಮನವಿಯನ್ನು ಸರ್ಕಾರ ಪರಿಗಣಿಸಿಲ್ಲ. ಹೋಟೆಲ್ ಉದ್ಯಮಕ್ಕೆ ಸಂಬಂಧಿಸಿದಂತೆ ಕನಿಷ್ಠ ವೇತನದ ಬಗ್ಗೆ ಮರುಪರಿಶೀಲನೆ ನಡೆಸಬೇಕು. ಸಣ್ಣ ಹೋಟೆಲ್ಗಳ ಮಾಲೀಕರು ಹಾಗೂ ಗ್ರಾಹಕರಿಗೆ ಆಗಬಹುದಾದ ಸಂಕಷ್ಟವನ್ನು ತಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-4-1307371574</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸರ್ಕಾರವು ಕಾರ್ಮಿಕರ ವೇತನ ಹೆಚ್ಚಳ ಮಾಡಿರುವುದರಿಂದ ಗ್ರಾಹಕರ ಮೇಲೆ ದುಷ್ಪರಿಣಾಮ ಬೀರಲಿದೆ. ಬಿರಿಯಾನಿ ದರ ₹500ಕ್ಕೆ ತಲುಪಲಿದೆ ಎಂದು ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ (ಕೆಎಸ್ಎಚ್ಎ) ಎಚ್ಚರಿಸಿದೆ.</p>.<p>ಪ್ರಸ್ತುತ ಇರುವ ವೇತನಕ್ಕೆ ಹೋಲಿಸಿದರೆ, ಕನಿಷ್ಠ ವೇತನದಲ್ಲಿ ಸರಾಸರಿ ಶೇ 60ರಷ್ಟು ಏರಿಕೆ ಮಾಡಲಾಗಿದೆ. ಇದು ಹೋಟೆಲ್, ಉಪಾಹಾರ ಗೃಹಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಒಂದು ಪ್ಲೇಟ್ ಇಡ್ಲಿ ಬೆಲೆ ಪ್ರಸ್ತುತ ₹50 ಇರುವುದು ₹90ಕ್ಕೆ ಏರಬಹುದು. ₹80-90 ಇರುವ ಮಸಾಲೆ ದೋಸೆ ದರ ₹150ಕ್ಕೆ ತಲುಪಬಹುದು. ಸಸ್ಯಾಹಾರಿ ಊಟದ ದರ ₹250ಕ್ಕೆ ಏರಬಹುದು ಎಂದು ಸಂಘದ ಅಧ್ಯಕ್ಷ ಜಿ.ಕೆ. ಶೆಟ್ಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಸರ್ಕಾರವು ತಾಲ್ಲೂಕು ಮಟ್ಟದಲ್ಲಿ ಕೌಶಲರಹಿತ ಕಾರ್ಮಿಕರಿಗೆ ₹19,300, ಜಿಬಿಎ ವ್ಯಾಪ್ತಿಯಲ್ಲಿ ₹23,376ರಿಂದ ಹಿಡಿದು ಕೌಶಲ ಹೊಂದಿದ ಕಾರ್ಮಿಕರಿಗೆ ₹31,100ರವರೆಗೆ ಕನಿಷ್ಠ ವೇತನ ಪರಿಷ್ಕರಿಸಿದೆ. ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ ₹1,884 ರಿಂದ ₹3,152ಕ್ಕೆ ಏರಿಕೆಯಾಗಿದೆ. ಎಲ್ಲ ದಿನಸಿ ವಸ್ತುಗಳು, ವಿದ್ಯುತ್ ದರ ಹಾಗೂ ಕಸದ ಸೆಸ್ ಏರಿಕೆಯಾಗಿದ್ದು, ಸಣ್ಣ ಹೋಟೆಲ್ ಮಾಲೀಕರ ಮೇಲಿನ ಒತ್ತಡವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಿದ್ದಾರೆ.</p>.<p>ಕನಿಷ್ಠ ವೇತನ ಪರಿಷ್ಕರಣೆ ಜಾರಿಗೊಳಿಸುವ ಸಂದರ್ಭದಲ್ಲಿ ಆತಿಥ್ಯ ಕ್ಷೇತ್ರವನ್ನು ಪ್ರತ್ಯೇಕ ವರ್ಗವಾಗಿ ಪರಿಗಣಿಸುವಂತೆ ಸರ್ಕಾರಕ್ಕೆ ಸಂಘ ಮನವಿ ಮಾಡಿತ್ತು. ಆದರೆ, ಆ ಮನವಿಯನ್ನು ಸರ್ಕಾರ ಪರಿಗಣಿಸಿಲ್ಲ. ಹೋಟೆಲ್ ಉದ್ಯಮಕ್ಕೆ ಸಂಬಂಧಿಸಿದಂತೆ ಕನಿಷ್ಠ ವೇತನದ ಬಗ್ಗೆ ಮರುಪರಿಶೀಲನೆ ನಡೆಸಬೇಕು. ಸಣ್ಣ ಹೋಟೆಲ್ಗಳ ಮಾಲೀಕರು ಹಾಗೂ ಗ್ರಾಹಕರಿಗೆ ಆಗಬಹುದಾದ ಸಂಕಷ್ಟವನ್ನು ತಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-4-1307371574</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>