<p><strong>ನವದೆಹಲಿ:</strong> ‘ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಅಗತ್ಯಬಿದ್ದರೆ, ಬಜೆಟ್ನಲ್ಲಿ ಘೋಷಿಸಿದ ಕ್ರಮಗಳಿಗೆ ಹೊರತಾದ ಹೆಚ್ಚುವರಿ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.</p>.<p>ಸಂಪತ್ತು ನಿರ್ವಾಹಕರು, ತೆರಿಗೆ ಸಲಹೆಗಾರರು ಮತ್ತಿತರ ವೃತ್ತಿಪರರ ಜತೆ ಇಲ್ಲಿ ಶುಕ್ರವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ‘ಈ ಬಾರಿಯ ಬಜೆಟ್ನಲ್ಲಿ ಘೋಷಿಸಿದ ಕ್ರಮಗಳು ಷೇರುಪೇಟೆ, ಬಾಂಡ್ಗಳ ವಹಿವಾಟು ಮತ್ತು ಕರೆನ್ಸಿ ಮಾರುಕಟ್ಟೆ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ.</p>.<p>‘ಬಜೆಟ್ನಲ್ಲಿ ಘೋಷಿತ ಪ್ರಸ್ತಾವಗಳ ಹೊರತಾಗಿಯೂ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳುವ ಅಗತ್ಯ ಉದ್ಭವಿಸಿದರೆ ಹಾಗೆ ಮಾಡಲು ಸರ್ಕಾರ ಸಿದ್ಧ ಇದೆ’ ಎಂದು ಭರವಸೆ ನೀಡಿದರು.</p>.<p>ಸಲಹೆ: ಸಭೆಯಲ್ಲಿ ಭಾಗವಹಿಸಿದ್ದ ಅನೇಕರು ಆರ್ಥಿಕ ಚಟುವಟಿಕೆ ಉತ್ತೇಜಿಸಲು ಅನೇಕ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಲಹೆ ನೀಡಿದರು.</p>.<p>ಸರಕು ಮತ್ತು ಸೇವೆಗಳ ಬೇಡಿಕೆ ಹೆಚ್ಚಿಸಲು ಗ್ರಾಹಕರ ಬಳಿಯಲ್ಲಿ ಹೆಚ್ಚು ಹಣ ಇರುವಂತೆ ಮಾಡಬೇಕು. ನಗದು ಲಭ್ಯತೆ ಹೆಚ್ಚಿಸಬೇಕು. ಬಂಡವಾಳ ಮಾರುಕಟ್ಟೆಯಲ್ಲಿನ ವಹಿವಾಟು ಹೆಚ್ಚಳಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.</p>.<p class="Subhead">ವಿವಾದ್ ಸೆ ವಿಶ್ವಾಸ್: ನೇರ ತೆರಿಗೆ ವಿವಾದಗಳಿಗೆ ಸಂಬಂಧಿಸಿದಂತೆ ಬಜೆಟ್ನಲ್ಲಿ ಘೋಷಿಸಿರುವ ‘ವಿವಾದ್ ಸೆ ವಿಶ್ವಾಸ್’ ಯೋಜನೆ ಸಂಬಂಧವೂ ಹಲವಾರು ಸಲಹೆಗಳು ಕೇಳಿ ಬಂದವು.</p>.<p>ಯೋಜನೆಯ ವಿವರಗಳನ್ನು ಹಣಕಾಸು ಸಚಿವಾಲಯವು ಸದ್ಯದಲ್ಲಿಯೇ ಪ್ರಕಟಿಸಲಿದೆ. ಅದನ್ನು ಜಾರಿಗೆ ಬರಲು ಸಂಸತ್ತಿನ ಒಪ್ಪಿಗೆ ಪಡೆಯಬೇಕಾಗುತ್ತದೆ. ಕೇಂದ್ರ ಸಚಿವ ಸಂಪುಟವು ಇದಕ್ಕೆ ಸಂಬಂಧಿಸಿದ ಕೆಲ ತಿದ್ದುಪಡಿಗಳಿಗೆ ಈಗಾಗಲೇ ಅನುಮೋದನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಅಗತ್ಯಬಿದ್ದರೆ, ಬಜೆಟ್ನಲ್ಲಿ ಘೋಷಿಸಿದ ಕ್ರಮಗಳಿಗೆ ಹೊರತಾದ ಹೆಚ್ಚುವರಿ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.</p>.<p>ಸಂಪತ್ತು ನಿರ್ವಾಹಕರು, ತೆರಿಗೆ ಸಲಹೆಗಾರರು ಮತ್ತಿತರ ವೃತ್ತಿಪರರ ಜತೆ ಇಲ್ಲಿ ಶುಕ್ರವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ‘ಈ ಬಾರಿಯ ಬಜೆಟ್ನಲ್ಲಿ ಘೋಷಿಸಿದ ಕ್ರಮಗಳು ಷೇರುಪೇಟೆ, ಬಾಂಡ್ಗಳ ವಹಿವಾಟು ಮತ್ತು ಕರೆನ್ಸಿ ಮಾರುಕಟ್ಟೆ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ.</p>.<p>‘ಬಜೆಟ್ನಲ್ಲಿ ಘೋಷಿತ ಪ್ರಸ್ತಾವಗಳ ಹೊರತಾಗಿಯೂ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳುವ ಅಗತ್ಯ ಉದ್ಭವಿಸಿದರೆ ಹಾಗೆ ಮಾಡಲು ಸರ್ಕಾರ ಸಿದ್ಧ ಇದೆ’ ಎಂದು ಭರವಸೆ ನೀಡಿದರು.</p>.<p>ಸಲಹೆ: ಸಭೆಯಲ್ಲಿ ಭಾಗವಹಿಸಿದ್ದ ಅನೇಕರು ಆರ್ಥಿಕ ಚಟುವಟಿಕೆ ಉತ್ತೇಜಿಸಲು ಅನೇಕ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಲಹೆ ನೀಡಿದರು.</p>.<p>ಸರಕು ಮತ್ತು ಸೇವೆಗಳ ಬೇಡಿಕೆ ಹೆಚ್ಚಿಸಲು ಗ್ರಾಹಕರ ಬಳಿಯಲ್ಲಿ ಹೆಚ್ಚು ಹಣ ಇರುವಂತೆ ಮಾಡಬೇಕು. ನಗದು ಲಭ್ಯತೆ ಹೆಚ್ಚಿಸಬೇಕು. ಬಂಡವಾಳ ಮಾರುಕಟ್ಟೆಯಲ್ಲಿನ ವಹಿವಾಟು ಹೆಚ್ಚಳಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.</p>.<p class="Subhead">ವಿವಾದ್ ಸೆ ವಿಶ್ವಾಸ್: ನೇರ ತೆರಿಗೆ ವಿವಾದಗಳಿಗೆ ಸಂಬಂಧಿಸಿದಂತೆ ಬಜೆಟ್ನಲ್ಲಿ ಘೋಷಿಸಿರುವ ‘ವಿವಾದ್ ಸೆ ವಿಶ್ವಾಸ್’ ಯೋಜನೆ ಸಂಬಂಧವೂ ಹಲವಾರು ಸಲಹೆಗಳು ಕೇಳಿ ಬಂದವು.</p>.<p>ಯೋಜನೆಯ ವಿವರಗಳನ್ನು ಹಣಕಾಸು ಸಚಿವಾಲಯವು ಸದ್ಯದಲ್ಲಿಯೇ ಪ್ರಕಟಿಸಲಿದೆ. ಅದನ್ನು ಜಾರಿಗೆ ಬರಲು ಸಂಸತ್ತಿನ ಒಪ್ಪಿಗೆ ಪಡೆಯಬೇಕಾಗುತ್ತದೆ. ಕೇಂದ್ರ ಸಚಿವ ಸಂಪುಟವು ಇದಕ್ಕೆ ಸಂಬಂಧಿಸಿದ ಕೆಲ ತಿದ್ದುಪಡಿಗಳಿಗೆ ಈಗಾಗಲೇ ಅನುಮೋದನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>