<p><strong>ನವದೆಹಲಿ:</strong> ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಹೆದ್ದಾರಿಗಳು ಮತ್ತು ನಿರ್ಮಾಣ ವಲಯದಲ್ಲಿ ಕೆಲಸ ಮಾಡುತ್ತಿರುವ 25 ಕೋಟಿಗೂ ಹೆಚ್ಚು ಕಾರ್ಮಿಕರು ಬುಧವಾರ ಸಾರ್ವತ್ರಿಕ ಮುಷ್ಕರ ನಡೆಸುವ ಸಾಧ್ಯತೆ ಇದ್ದು, ದೇಶದಾದ್ಯಂತ ವಿವಿಧ ಸೇವೆಗಳಲ್ಲಿ ವ್ಯತ್ಯಯವಾಗುವ ಸಂಭವ ಇದೆ.</p>.<p>ಕಾರ್ಮಿಕರ ಹತ್ತು ಸಂಘಟನೆಗಳು ಮತ್ತು ಅವುಗಳ ಸಹವರ್ತಿ ಸಂಘಟನೆಗಳ ವೇದಿಕೆಯು, ‘ಕೇಂದ್ರ ಸರ್ಕಾರವು ಕಾರ್ಮಿಕ ವಿರೋಧಿ, ರೈತ ವಿರೋಧಿ, ರಾಷ್ಟ್ರ ವಿರೋಧಿ ಮತ್ತು ಕಾರ್ಪೊರೇಟ್ ಪರವಾದ ನೀತಿಗಳನ್ನು ಅನುಸರಿಸುತ್ತಿದೆ’ ಎಂದು ಆರೋಪಿಸಿದೆ. ಇದನ್ನು ವಿರೋಧಿಸಿ ವೇದಿಕೆಯು ಭಾರತ್ ಬಂದ್ಗೆ ಕರೆ ನೀಡಿದೆ.</p>.<p class="title">‘ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಭಾರಿ ಯಶಸ್ಸು ದೊರಕಿಸಿಕೊಡಬೇಕು’ ಎಂದು ವೇದಿಕೆಯು ಕರೆ ನೀಡಿದೆ. ಅರ್ಥ ವ್ಯವಸ್ಥೆಯ ಸಂಘಟಿತ ಹಾಗೂ ಅಸಂಘಟಿತ ವಲಯಗಳಲ್ಲಿ ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಸಿದ್ಧತೆ ನಡೆಸಿವೆ ಎಂದು ತಿಳಿಸಿದೆ.</p>.<p class="title">‘ಮುಷ್ಕರದಲ್ಲಿ 25 ಕೋಟಿಗೂ ಹೆಚ್ಚು ಕಾರ್ಮಿಕರು ಭಾಗಿಯಾಗುವ ನಿರೀಕ್ಷೆ ಇದೆ. ರೈತರು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಕಾರ್ಮಿಕರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ’ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ನ ಅಮರ್ಜೀತ್ ಕೌರ್ ಅವರು ಹೇಳಿದ್ದಾರೆ.</p>.<p class="title">ವೇದಿಕೆಯು 17 ಅಂಶಗಳ ಬೇಡಿಕೆಗಳನ್ನು ಕೇಂದ್ರ ಕಾರ್ಮಿಕ ಸಚಿವ ಮನಸುಖ್ ಮಾಂಡವೀಯ ಅವರಿಗೆ ಕಳೆದ ವರ್ಷ ಸಲ್ಲಿಸಿತ್ತು.</p>.<p class="title">ಕೇಂದ್ರ ಸರ್ಕಾರವು ವಾರ್ಷಿಕ ಕಾರ್ಮಿಕ ಸಮಾವೇಶವನ್ನು 10 ವರ್ಷಗಳಿಂದ ಆಯೋಜಿಸಿಲ್ಲ. ಕಾರ್ಮಿಕ ವರ್ಗದ ಹಿತಕ್ಕೆ ವಿರುದ್ಧವಾದ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ ಎಂದು ವೇದಿಕೆ ಆರೋಪಿಸಿದೆ.</p>.<p class="title">ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳು ಮತ್ತಷ್ಟು ನಿರುದ್ಯೋಗಕ್ಕೆ, ಅಗತ್ಯ ವಸ್ತುಗಳ ಬೆಲೆ ಹೆಚ್ಚಳಕ್ಕೆ, ವೇತನ ಇಳಿಕೆಗೆ, ಸಾಮಾಜಿಕ ವಲಯಗಳ ಮೇಲಿನ ವೆಚ್ಚ ಇಳಿಕೆಗೆ ಕಾರಣವಾಗುತ್ತಿವೆ. ಇವೆಲ್ಲವೂ ಅಸಮಾನತೆಯನ್ನು ಇನ್ನಷ್ಟು ಹೆಚ್ಚಿಸುತ್ತಿವೆ ಎಂದು ಅದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಹೆದ್ದಾರಿಗಳು ಮತ್ತು ನಿರ್ಮಾಣ ವಲಯದಲ್ಲಿ ಕೆಲಸ ಮಾಡುತ್ತಿರುವ 25 ಕೋಟಿಗೂ ಹೆಚ್ಚು ಕಾರ್ಮಿಕರು ಬುಧವಾರ ಸಾರ್ವತ್ರಿಕ ಮುಷ್ಕರ ನಡೆಸುವ ಸಾಧ್ಯತೆ ಇದ್ದು, ದೇಶದಾದ್ಯಂತ ವಿವಿಧ ಸೇವೆಗಳಲ್ಲಿ ವ್ಯತ್ಯಯವಾಗುವ ಸಂಭವ ಇದೆ.</p>.<p>ಕಾರ್ಮಿಕರ ಹತ್ತು ಸಂಘಟನೆಗಳು ಮತ್ತು ಅವುಗಳ ಸಹವರ್ತಿ ಸಂಘಟನೆಗಳ ವೇದಿಕೆಯು, ‘ಕೇಂದ್ರ ಸರ್ಕಾರವು ಕಾರ್ಮಿಕ ವಿರೋಧಿ, ರೈತ ವಿರೋಧಿ, ರಾಷ್ಟ್ರ ವಿರೋಧಿ ಮತ್ತು ಕಾರ್ಪೊರೇಟ್ ಪರವಾದ ನೀತಿಗಳನ್ನು ಅನುಸರಿಸುತ್ತಿದೆ’ ಎಂದು ಆರೋಪಿಸಿದೆ. ಇದನ್ನು ವಿರೋಧಿಸಿ ವೇದಿಕೆಯು ಭಾರತ್ ಬಂದ್ಗೆ ಕರೆ ನೀಡಿದೆ.</p>.<p class="title">‘ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಭಾರಿ ಯಶಸ್ಸು ದೊರಕಿಸಿಕೊಡಬೇಕು’ ಎಂದು ವೇದಿಕೆಯು ಕರೆ ನೀಡಿದೆ. ಅರ್ಥ ವ್ಯವಸ್ಥೆಯ ಸಂಘಟಿತ ಹಾಗೂ ಅಸಂಘಟಿತ ವಲಯಗಳಲ್ಲಿ ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಸಿದ್ಧತೆ ನಡೆಸಿವೆ ಎಂದು ತಿಳಿಸಿದೆ.</p>.<p class="title">‘ಮುಷ್ಕರದಲ್ಲಿ 25 ಕೋಟಿಗೂ ಹೆಚ್ಚು ಕಾರ್ಮಿಕರು ಭಾಗಿಯಾಗುವ ನಿರೀಕ್ಷೆ ಇದೆ. ರೈತರು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಕಾರ್ಮಿಕರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ’ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ನ ಅಮರ್ಜೀತ್ ಕೌರ್ ಅವರು ಹೇಳಿದ್ದಾರೆ.</p>.<p class="title">ವೇದಿಕೆಯು 17 ಅಂಶಗಳ ಬೇಡಿಕೆಗಳನ್ನು ಕೇಂದ್ರ ಕಾರ್ಮಿಕ ಸಚಿವ ಮನಸುಖ್ ಮಾಂಡವೀಯ ಅವರಿಗೆ ಕಳೆದ ವರ್ಷ ಸಲ್ಲಿಸಿತ್ತು.</p>.<p class="title">ಕೇಂದ್ರ ಸರ್ಕಾರವು ವಾರ್ಷಿಕ ಕಾರ್ಮಿಕ ಸಮಾವೇಶವನ್ನು 10 ವರ್ಷಗಳಿಂದ ಆಯೋಜಿಸಿಲ್ಲ. ಕಾರ್ಮಿಕ ವರ್ಗದ ಹಿತಕ್ಕೆ ವಿರುದ್ಧವಾದ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ ಎಂದು ವೇದಿಕೆ ಆರೋಪಿಸಿದೆ.</p>.<p class="title">ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳು ಮತ್ತಷ್ಟು ನಿರುದ್ಯೋಗಕ್ಕೆ, ಅಗತ್ಯ ವಸ್ತುಗಳ ಬೆಲೆ ಹೆಚ್ಚಳಕ್ಕೆ, ವೇತನ ಇಳಿಕೆಗೆ, ಸಾಮಾಜಿಕ ವಲಯಗಳ ಮೇಲಿನ ವೆಚ್ಚ ಇಳಿಕೆಗೆ ಕಾರಣವಾಗುತ್ತಿವೆ. ಇವೆಲ್ಲವೂ ಅಸಮಾನತೆಯನ್ನು ಇನ್ನಷ್ಟು ಹೆಚ್ಚಿಸುತ್ತಿವೆ ಎಂದು ಅದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>