<p><strong>ನವದೆಹಲಿ</strong>: ‘ಭಾರತ್ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಗುರುವಾರ ಚಾಲನೆ ನೀಡಿದ್ದಾರೆ. ಇದು ದೇಶದಲ್ಲಿ ಸಹಕಾರ ತತ್ತ್ವದಲ್ಲಿ ಟ್ಯಾಕ್ಸಿ ಸೇವೆಗಳನ್ನು ಒದಗಿಸುವ ಮೊದಲ ವೇದಿಕೆ ಆಗಿದೆ.</p>.<p>ಮುಂದಿನ ಮೂರು ವರ್ಷಗಳಲ್ಲಿ ಭಾರತ್ ಟ್ಯಾಕ್ಸಿ ಸೇವೆಯನ್ನು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಮತ್ತು ದ್ವಾರಕಾದಿಂದ ಕಾಮಾಕ್ಯದವರೆಗೆ ವಿಸ್ತರಿಸಲಾಗುವುದು ಎಂದು ವೇದಿಕೆಯನ್ನು ಉದ್ಘಾಟಿಸಿದ ಬಳಿಕ ಸಚಿವ ಶಾ ಅವರು ಹೇಳಿದ್ದಾರೆ.</p>.<p>ಭಾರತ್ ಟ್ಯಾಕ್ಸಿ ಜೊತೆ ಸೇರಿರುವ ಚಾಲಕರೊಂದಿಗೆ ಲಾಭವನ್ನು ಹಂಚಿಕೊಳ್ಳಲಾಗುವುದು. ಚಾಲಕರು ಗಳಿಸುವ ಪ್ರತಿ ₹100 ಹಣದಲ್ಲಿ ₹80 ಚಾಲಕರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. ಉಳಿದ ₹20 ವೇದಿಕೆಯಲ್ಲಿ ಉಳಿಯಲಿದೆ. ಆ ₹20ಕ್ಕೂ ಚಾಲಕರೇ ಮಾಲೀಕರಾಗಿ ಇರುತ್ತಾರೆ ಎಂದಿದ್ದಾರೆ.</p>.<p>ಗ್ರಾಹಕರು, ಈ ವೇದಿಕೆಯ ಮೂಲಕ ಕಾರು, ತ್ರಿಚಕ್ರ ಮತ್ತು ದ್ವಿಚಕ್ರ ವಾಹನಗಳ ಸೇವೆಯನ್ನು ಪಡೆಯಬಹುದಾಗಿದೆ ಎಂದು ಹೇಳಿದ್ದಾರೆ.</p>.<p>ಈಗ ದೇಶದಲ್ಲಿ ಟ್ಯಾಕ್ಸಿ ಸೇವೆಗಳನ್ನು ಒದಗಿಸುವ ಮಾರುಕಟ್ಟೆಯಲ್ಲಿ ಊಬರ್, ಓಲಾ ಮತ್ತು ರ್ಯಾಪಿಡೊ ಪ್ರಾಬಲ್ಯ ಹೊಂದಿವೆ.</p>.<p>ಚಾಲಕರೇ ಮಾಲೀಕರಾಗುವ ಅವಕಾಶವನ್ನು ಈ ವೇದಿಕೆಯು ನೀಡಲಿದೆ. ಇಂತಹ ಅವಕಾಶವನ್ನು ಇತರೆ ಯಾವುದೇ ವೇದಿಕೆ ಒದಗಿಸುತ್ತಿಲ್ಲ ಎಂದು ಶಾ ಅವರು ಹೇಳಿದ್ದಾರೆ.</p>.<p>ಅಮೂಲ್ ಸೇರಿದಂತೆ ದೇಶದ ಎಂಟು ಪ್ರಮುಖ ಸಹಕಾರ ಸಂಘಗಳ ನೆರವಿನೊಂದಿಗೆ ಕಳೆದ ಡಿಸೆಂಬರ್ 2ರಂದು ದೆಹಲಿ–ಎನ್ಸಿಆರ್ ಮತ್ತು ಗುಜರಾತ್ನಲ್ಲಿ ಪ್ರಾಯೋಗಿಕವಾಗಿ ಈ ಸೇವೆಯನ್ನು ಆರಂಭಿಸಲಾಯಿತು.</p>.<p>ಸಹಕಾರ ತತ್ತ್ವದ ಆಧಾರದಲ್ಲಿ ಆ್ಯಪ್ ಮೂಲಕ ಟ್ಯಾಕ್ಸಿ ಸೇವೆ ಒದಗಿಸುವ ಜಗತ್ತಿನ ಅತಿದೊಡ್ಡ ವೇದಿಕೆ ಇದಾಗಿದೆ. ಅಲ್ಲದೆ, ಚಾಲಕರ ಮಾಲೀಕತ್ವದ ವಿಶ್ವದ ಅತಿದೊಡ್ಡ ವೇದಿಕೆಯೂ ಹೌದು ಎಂದು ಸಹಕಾರ ಸಚಿವಾಲಯವು ಹೇಳಿದೆ.</p>.<p>ಈ ಸೇವೆ ಆರಂಭಗೊಂಡಾಗಿನಿಂದ ಇಲ್ಲಿಯವರೆಗೆ 3 ಲಕ್ಷಕ್ಕೂ ಅಧಿಕ ಚಾಲಕರು ಈ ವೇದಿಕೆ ಸೇರಿದ್ದಾರೆ, 1 ಲಕ್ಷ ಹೆಚ್ಚು ಬಳಕೆದಾರರು ನೋಂದಣಿ ಆಗಿದ್ದಾರೆ.</p>.<p>ಮುಂಬರುವ ವರ್ಷಗಳಲ್ಲಿ ಸಹಕಾರ ಸಂಘಗಳು ಹೊಸ ವ್ಯವಹಾರಗಳಿಗೆ ಪ್ರವೇಶಿಸಲಿವೆ. ಈ ಚಾಲಕರನ್ನು ‘ಸಾರಥಿಗಳು’ ಎಂದು ಕರೆಯಲಾಗುತ್ತದೆ. ಈ ಚಾಲಕರಿಗೆ ಇಫ್ಕೊ-ಟೋಕಿಯೊ ಜನರಲ್ ಇನ್ಶೂರೆನ್ಸ್ ಕಂಪನಿಯು ವೈಯಕ್ತಿಕ ಅಪಘಾತ ಮತ್ತು ಆರೋಗ್ಯ ವಿಮಾ ರಕ್ಷಣೆಯನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.</p>.<p>ಭಾರತ್ ಟ್ಯಾಕ್ಸಿ ಸೇವೆಯು ಸಾರ್ವಜನಿಕರಿಗೆ ಕೈಗೆಟಕುವ, ಸುರಕ್ಷಿತ ಸೇವೆಯನ್ನು ಒದಗಿಸಲು ಪ್ರಯತ್ನಿಸುತ್ತದೆ ಎಂದಿದ್ದಾರೆ.</p>.<p>ಈ ವೇದಿಕೆಯು ಚಾಲಕರಿಗೆ ಸಾಮಾಜಿಕ ಭದ್ರತೆ ಆರೋಗ್ಯ ವಿಮೆ ಅಪಘಾತ ವಿಮೆ ನಿವೃತ್ತಿ ಉಳಿತಾಯ ಯೋಜನೆಯ ಸವಲತ್ತನ್ನು ನೀಡಲಿದೆ ಅಮಿತ್ ಶಾ ಕೇಂದ್ರ ಸಹಕಾರ ಸಚಿವ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಭಾರತ್ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಗುರುವಾರ ಚಾಲನೆ ನೀಡಿದ್ದಾರೆ. ಇದು ದೇಶದಲ್ಲಿ ಸಹಕಾರ ತತ್ತ್ವದಲ್ಲಿ ಟ್ಯಾಕ್ಸಿ ಸೇವೆಗಳನ್ನು ಒದಗಿಸುವ ಮೊದಲ ವೇದಿಕೆ ಆಗಿದೆ.</p>.<p>ಮುಂದಿನ ಮೂರು ವರ್ಷಗಳಲ್ಲಿ ಭಾರತ್ ಟ್ಯಾಕ್ಸಿ ಸೇವೆಯನ್ನು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಮತ್ತು ದ್ವಾರಕಾದಿಂದ ಕಾಮಾಕ್ಯದವರೆಗೆ ವಿಸ್ತರಿಸಲಾಗುವುದು ಎಂದು ವೇದಿಕೆಯನ್ನು ಉದ್ಘಾಟಿಸಿದ ಬಳಿಕ ಸಚಿವ ಶಾ ಅವರು ಹೇಳಿದ್ದಾರೆ.</p>.<p>ಭಾರತ್ ಟ್ಯಾಕ್ಸಿ ಜೊತೆ ಸೇರಿರುವ ಚಾಲಕರೊಂದಿಗೆ ಲಾಭವನ್ನು ಹಂಚಿಕೊಳ್ಳಲಾಗುವುದು. ಚಾಲಕರು ಗಳಿಸುವ ಪ್ರತಿ ₹100 ಹಣದಲ್ಲಿ ₹80 ಚಾಲಕರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. ಉಳಿದ ₹20 ವೇದಿಕೆಯಲ್ಲಿ ಉಳಿಯಲಿದೆ. ಆ ₹20ಕ್ಕೂ ಚಾಲಕರೇ ಮಾಲೀಕರಾಗಿ ಇರುತ್ತಾರೆ ಎಂದಿದ್ದಾರೆ.</p>.<p>ಗ್ರಾಹಕರು, ಈ ವೇದಿಕೆಯ ಮೂಲಕ ಕಾರು, ತ್ರಿಚಕ್ರ ಮತ್ತು ದ್ವಿಚಕ್ರ ವಾಹನಗಳ ಸೇವೆಯನ್ನು ಪಡೆಯಬಹುದಾಗಿದೆ ಎಂದು ಹೇಳಿದ್ದಾರೆ.</p>.<p>ಈಗ ದೇಶದಲ್ಲಿ ಟ್ಯಾಕ್ಸಿ ಸೇವೆಗಳನ್ನು ಒದಗಿಸುವ ಮಾರುಕಟ್ಟೆಯಲ್ಲಿ ಊಬರ್, ಓಲಾ ಮತ್ತು ರ್ಯಾಪಿಡೊ ಪ್ರಾಬಲ್ಯ ಹೊಂದಿವೆ.</p>.<p>ಚಾಲಕರೇ ಮಾಲೀಕರಾಗುವ ಅವಕಾಶವನ್ನು ಈ ವೇದಿಕೆಯು ನೀಡಲಿದೆ. ಇಂತಹ ಅವಕಾಶವನ್ನು ಇತರೆ ಯಾವುದೇ ವೇದಿಕೆ ಒದಗಿಸುತ್ತಿಲ್ಲ ಎಂದು ಶಾ ಅವರು ಹೇಳಿದ್ದಾರೆ.</p>.<p>ಅಮೂಲ್ ಸೇರಿದಂತೆ ದೇಶದ ಎಂಟು ಪ್ರಮುಖ ಸಹಕಾರ ಸಂಘಗಳ ನೆರವಿನೊಂದಿಗೆ ಕಳೆದ ಡಿಸೆಂಬರ್ 2ರಂದು ದೆಹಲಿ–ಎನ್ಸಿಆರ್ ಮತ್ತು ಗುಜರಾತ್ನಲ್ಲಿ ಪ್ರಾಯೋಗಿಕವಾಗಿ ಈ ಸೇವೆಯನ್ನು ಆರಂಭಿಸಲಾಯಿತು.</p>.<p>ಸಹಕಾರ ತತ್ತ್ವದ ಆಧಾರದಲ್ಲಿ ಆ್ಯಪ್ ಮೂಲಕ ಟ್ಯಾಕ್ಸಿ ಸೇವೆ ಒದಗಿಸುವ ಜಗತ್ತಿನ ಅತಿದೊಡ್ಡ ವೇದಿಕೆ ಇದಾಗಿದೆ. ಅಲ್ಲದೆ, ಚಾಲಕರ ಮಾಲೀಕತ್ವದ ವಿಶ್ವದ ಅತಿದೊಡ್ಡ ವೇದಿಕೆಯೂ ಹೌದು ಎಂದು ಸಹಕಾರ ಸಚಿವಾಲಯವು ಹೇಳಿದೆ.</p>.<p>ಈ ಸೇವೆ ಆರಂಭಗೊಂಡಾಗಿನಿಂದ ಇಲ್ಲಿಯವರೆಗೆ 3 ಲಕ್ಷಕ್ಕೂ ಅಧಿಕ ಚಾಲಕರು ಈ ವೇದಿಕೆ ಸೇರಿದ್ದಾರೆ, 1 ಲಕ್ಷ ಹೆಚ್ಚು ಬಳಕೆದಾರರು ನೋಂದಣಿ ಆಗಿದ್ದಾರೆ.</p>.<p>ಮುಂಬರುವ ವರ್ಷಗಳಲ್ಲಿ ಸಹಕಾರ ಸಂಘಗಳು ಹೊಸ ವ್ಯವಹಾರಗಳಿಗೆ ಪ್ರವೇಶಿಸಲಿವೆ. ಈ ಚಾಲಕರನ್ನು ‘ಸಾರಥಿಗಳು’ ಎಂದು ಕರೆಯಲಾಗುತ್ತದೆ. ಈ ಚಾಲಕರಿಗೆ ಇಫ್ಕೊ-ಟೋಕಿಯೊ ಜನರಲ್ ಇನ್ಶೂರೆನ್ಸ್ ಕಂಪನಿಯು ವೈಯಕ್ತಿಕ ಅಪಘಾತ ಮತ್ತು ಆರೋಗ್ಯ ವಿಮಾ ರಕ್ಷಣೆಯನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.</p>.<p>ಭಾರತ್ ಟ್ಯಾಕ್ಸಿ ಸೇವೆಯು ಸಾರ್ವಜನಿಕರಿಗೆ ಕೈಗೆಟಕುವ, ಸುರಕ್ಷಿತ ಸೇವೆಯನ್ನು ಒದಗಿಸಲು ಪ್ರಯತ್ನಿಸುತ್ತದೆ ಎಂದಿದ್ದಾರೆ.</p>.<p>ಈ ವೇದಿಕೆಯು ಚಾಲಕರಿಗೆ ಸಾಮಾಜಿಕ ಭದ್ರತೆ ಆರೋಗ್ಯ ವಿಮೆ ಅಪಘಾತ ವಿಮೆ ನಿವೃತ್ತಿ ಉಳಿತಾಯ ಯೋಜನೆಯ ಸವಲತ್ತನ್ನು ನೀಡಲಿದೆ ಅಮಿತ್ ಶಾ ಕೇಂದ್ರ ಸಹಕಾರ ಸಚಿವ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>