<p><strong>ನವದೆಹಲಿ:</strong> ಆದೇಶ ಪಾಲನೆಯಾಗದಿರುವ ಬಗ್ಗೆ ಸುಪ್ರೀಂ ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ದೂರ ಸಂಪರ್ಕ ಇಲಾಖೆ ಟೆಲಿಕಾಂ ಕಂಪನಿಗಳಿಗೆ ಕೂಡಲೇ ಬಾಕಿ ಪಾವತಿಸುವಂತೆ ತಾಕೀತು ಮಾಡಿತು. ಭಾರ್ತಿ ಏರ್ಟೆಲ್ ₹10,000 ಕೋಟಿ ಪಾವತಿಸಿರುವುದಾಗಿ ಸೋಮವಾರ ಹೇಳಿದೆ.</p>.<p>'ಭಾರ್ತಿ ಏರ್ಟೆಲ್, ಭಾರ್ತಿ ಹೆಕ್ಸಾಕಾಮ್ ಹಾಗೂ ಟೆಲಿನಾರ್ ಪರವಾಗಿ ಒಟ್ಟು ₹10,000 ಕೋಟಿ ಪಾವತಿಸಲಾಗಿದೆ. ತೆರಿಗೆ ಲೆಕ್ಕಾಚಾರ ಸೇರಿದಂತೆ ಇತರೆ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಬಾಕಿ ಮೊತ್ತ ಪಾವತಿಸಲಿದ್ದೇವೆ. ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣದ ಮುಂದಿನ ವಿಚಾರಣೆ ದಿನದೊಳಗೆ ಬಾಕಿ ಪಾವತಿ ಆಗಲಿದೆ' ಎಂದು ಭಾರ್ತಿ ಏರ್ಟೆಲ್ ಹೇಳಿದೆ.</p>.<p>ತರಂಗಾಂತರ ಬಳಕೆ ಹಾಗೂ ಪರವಾನಗಿ ಶುಲ್ಕ ಸೇರಿದಂತೆ ಭಾರ್ತಿ ಏರ್ಟೆಲ್ ಸರ್ಕಾರಕ್ಕೆ ₹35,586 ಕೋಟಿ ಪಾವತಿಸಬೇಕಿದೆ. ಫೆಬ್ರುವರಿ 14ರಂದು ದೂರ ಸಂಪರ್ಕ ಇಲಾಖೆ ತಕ್ಷಣ ಬಾಕಿ ಮೊತ್ತ ಪಾವತಿಸುವಂತೆ ಭಾರ್ತಿ ಏರ್ಟೆಲ್, ವೊಡಾಫೋನ್ ಐಡಿಯಾ ಸೇರಿದಂತೆ ಇತರೆ ಟೆಲಿಕಾಂ ಕಂಪನಿಗಳಿಗೆ ನೋಟಿಸ್ ಜಾರಿ ಮಾಡಿತ್ತು. ಫೆಬ್ರುವರಿ 20ರೊಳಗೆ ₹10,000 ಕೋಟಿ ಹಾಗೂ ಉಳಿದ ಮೊತ್ತವನ್ನು ಮಾರ್ಚ್ 17ರೊಳಗೆ ಪಾವತಿಸುವುದಾಗಿ ಏರ್ಟೆಲ್ ತಿಳಿಸಿತ್ತು.</p>.<p>ಹೊಂದಾಣಿಕೆ ಮಾಡಿದ ಒಟ್ಟು ವರಮಾನ (ಎಜಿಆರ್) ಸಂಬಂಧಿಸಿ ಟೆಲಿಕಾಂ ಕಂಪನಿಗಳು ಕೇಂದ್ರ ಸರ್ಕಾರಕ್ಕೆ ₹1.47 ಲಕ್ಷ ಕೋಟಿ ಪಾವತಿಸುವ ಬಗ್ಗೆ ನೀಡಿದ್ದ ಆದೇಶ ಪಾಲನೆಯಾಗದ್ದಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಸುಪ್ರೀಂ ಕೋರ್ಟ್ 2019ರ ಅಕ್ಟೋಬರ್ 24ರಂದು ನೀಡಿದ್ದ ಆದೇಶದ ಪ್ರಕಾರ ಜನವರಿ 23ರಂದು ಟೆಲಿಕಾಂ ಆಪರೇಟರ್ಗಳು ಬಾಕಿ ಮೊತ್ತ ಸರ್ಕಾರಕ್ಕೆ ಪಾವತಿಸಬೇಕಿತ್ತು.</p>.<p><strong>ಇತರೆ ಟೆಲಿಕಾಂ ಕಂಪನಿಗಳ ಬಾಕಿ ಮೊತ್ತ</strong></p>.<p>₹53,000 ಕೋಟಿ -ವೊಡಾಫೋನ್ ಐಡಿಯಾ</p>.<p>₹16,456 ಕೋಟಿ -ರಿಲಯನ್ಸ್ ಕಮ್ಯುನಿಕೇಷನ್ಸ್</p>.<p>₹14,000 ಕೋಟಿ -ಟಾಟಾ ಟೆಲಿ ಸರ್ವಿಸಸ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆದೇಶ ಪಾಲನೆಯಾಗದಿರುವ ಬಗ್ಗೆ ಸುಪ್ರೀಂ ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ದೂರ ಸಂಪರ್ಕ ಇಲಾಖೆ ಟೆಲಿಕಾಂ ಕಂಪನಿಗಳಿಗೆ ಕೂಡಲೇ ಬಾಕಿ ಪಾವತಿಸುವಂತೆ ತಾಕೀತು ಮಾಡಿತು. ಭಾರ್ತಿ ಏರ್ಟೆಲ್ ₹10,000 ಕೋಟಿ ಪಾವತಿಸಿರುವುದಾಗಿ ಸೋಮವಾರ ಹೇಳಿದೆ.</p>.<p>'ಭಾರ್ತಿ ಏರ್ಟೆಲ್, ಭಾರ್ತಿ ಹೆಕ್ಸಾಕಾಮ್ ಹಾಗೂ ಟೆಲಿನಾರ್ ಪರವಾಗಿ ಒಟ್ಟು ₹10,000 ಕೋಟಿ ಪಾವತಿಸಲಾಗಿದೆ. ತೆರಿಗೆ ಲೆಕ್ಕಾಚಾರ ಸೇರಿದಂತೆ ಇತರೆ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಬಾಕಿ ಮೊತ್ತ ಪಾವತಿಸಲಿದ್ದೇವೆ. ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣದ ಮುಂದಿನ ವಿಚಾರಣೆ ದಿನದೊಳಗೆ ಬಾಕಿ ಪಾವತಿ ಆಗಲಿದೆ' ಎಂದು ಭಾರ್ತಿ ಏರ್ಟೆಲ್ ಹೇಳಿದೆ.</p>.<p>ತರಂಗಾಂತರ ಬಳಕೆ ಹಾಗೂ ಪರವಾನಗಿ ಶುಲ್ಕ ಸೇರಿದಂತೆ ಭಾರ್ತಿ ಏರ್ಟೆಲ್ ಸರ್ಕಾರಕ್ಕೆ ₹35,586 ಕೋಟಿ ಪಾವತಿಸಬೇಕಿದೆ. ಫೆಬ್ರುವರಿ 14ರಂದು ದೂರ ಸಂಪರ್ಕ ಇಲಾಖೆ ತಕ್ಷಣ ಬಾಕಿ ಮೊತ್ತ ಪಾವತಿಸುವಂತೆ ಭಾರ್ತಿ ಏರ್ಟೆಲ್, ವೊಡಾಫೋನ್ ಐಡಿಯಾ ಸೇರಿದಂತೆ ಇತರೆ ಟೆಲಿಕಾಂ ಕಂಪನಿಗಳಿಗೆ ನೋಟಿಸ್ ಜಾರಿ ಮಾಡಿತ್ತು. ಫೆಬ್ರುವರಿ 20ರೊಳಗೆ ₹10,000 ಕೋಟಿ ಹಾಗೂ ಉಳಿದ ಮೊತ್ತವನ್ನು ಮಾರ್ಚ್ 17ರೊಳಗೆ ಪಾವತಿಸುವುದಾಗಿ ಏರ್ಟೆಲ್ ತಿಳಿಸಿತ್ತು.</p>.<p>ಹೊಂದಾಣಿಕೆ ಮಾಡಿದ ಒಟ್ಟು ವರಮಾನ (ಎಜಿಆರ್) ಸಂಬಂಧಿಸಿ ಟೆಲಿಕಾಂ ಕಂಪನಿಗಳು ಕೇಂದ್ರ ಸರ್ಕಾರಕ್ಕೆ ₹1.47 ಲಕ್ಷ ಕೋಟಿ ಪಾವತಿಸುವ ಬಗ್ಗೆ ನೀಡಿದ್ದ ಆದೇಶ ಪಾಲನೆಯಾಗದ್ದಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಸುಪ್ರೀಂ ಕೋರ್ಟ್ 2019ರ ಅಕ್ಟೋಬರ್ 24ರಂದು ನೀಡಿದ್ದ ಆದೇಶದ ಪ್ರಕಾರ ಜನವರಿ 23ರಂದು ಟೆಲಿಕಾಂ ಆಪರೇಟರ್ಗಳು ಬಾಕಿ ಮೊತ್ತ ಸರ್ಕಾರಕ್ಕೆ ಪಾವತಿಸಬೇಕಿತ್ತು.</p>.<p><strong>ಇತರೆ ಟೆಲಿಕಾಂ ಕಂಪನಿಗಳ ಬಾಕಿ ಮೊತ್ತ</strong></p>.<p>₹53,000 ಕೋಟಿ -ವೊಡಾಫೋನ್ ಐಡಿಯಾ</p>.<p>₹16,456 ಕೋಟಿ -ರಿಲಯನ್ಸ್ ಕಮ್ಯುನಿಕೇಷನ್ಸ್</p>.<p>₹14,000 ಕೋಟಿ -ಟಾಟಾ ಟೆಲಿ ಸರ್ವಿಸಸ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>